NEWSಆರೋಗ್ಯನಮ್ಮಜಿಲ್ಲೆ

5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನ್ಯುಮೋಕೋಕಲ್ ಕಾಂಜುಗೇಟ್ ಲಸಿಕೆ (PCV)ಯನ್ನು 5 ವರ್ಷ ದೊಳಗಿನ ಮಕ್ಕಳಿಗೆ ಹಾಕಿಸಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮನವಿ ಮಾಡಿದ್ದಾರೆ.

ನ್ಯುಮೋನಿಯಾ ಲಸಿಕೆ ಸಂಬಂಧಿಸಿದಂತೆ ಆರೋಗ್ಯ ಅಧಿಕಾರಿಗಳ ಜತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ನ್ಯುಮೋನಿಯಾ ಹರಡದಂತೆ ಪಾಲಿಕೆ ಆರೋಗ್ಯ ಇಲಾಖೆಯ ವತಿಯಿಂದ ನ್ಯುಮೋಕೋಕಲ್ ಕಾಂಜುಗೇಟ್ ಲಸಿಕೆ(PCV)ಯನ್ನು 5 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ನ್ಯುಮೋನಿಯಾ ಎಂದರೇನು?: ಇದು ಶ್ವಾಸಕೋಶದ ಸೋಂಕು, ಶ್ವಾಸಕೋಶದಲ್ಲಿನ ಗಾಳಿಯ ಚೀಲಗಳಿಗೆ ಹರಡಿ ಸೋಂಕಿನ ದ್ರವದಿಂದ ಶ್ವಾಸಕೋಶವನ್ನು ಬಲಹೀನಗೊಳಿಸುತ್ತದೆ. ನ್ಯುಮೋನಿಯಾ ಸೋಂಕು ಎರಡು ಶ್ವಾಸಕೋಶಗಳಿಗೂ ಹರಡಬಹುದು. ಸರಿಯಾದ ಸಮಯಕ್ಕೆ ಸರಿಯಾದ ಆರೈಕೆಯಿಂದ ಸೋಂಕು ತಗುಲಿದ ಮಗುವನ್ನು ರಕ್ಷಿಸಬಹುದು ಎಂದು ತಿಳಿಸಿದರು.

ನ್ಯುಮೋನಿಯಾ ರೋಗದ ಲಕ್ಷಣಗಳು: 1. ಕೆಮ್ಮು ಮತ್ತು ನೆಗಡಿ. 2. ತೀವ್ರ ಜ್ವರ. 3. ಉಸಿರಾಟದ ತೊಂದರೆ, ಉಸಿರಾಟದ ಸಮಯದಲ್ಲಿ ಪಕ್ಕೆ ಅಥವಾ ಎದೆಯ ಸೆಳೆತ. 4. ತೀವ್ರ ಉಸಿರಾಟ.

  1. ಹಸಿವು ಇಲ್ಲದಿರುವುದು, ಆಹಾರ ಸೇವನೆ ಕಷ್ಟಕರವಾಗುವುದು. 6. ಸುಸ್ತು. 7. ಫಿಟ್ಸ್ ಬರುವುದು. 8. ಕೆಮ್ಮು ಮತ್ತು ಹಳದಿ / ರಕ್ತದ ಕಫ ಬರುವುದು ಈ ಎಲ್ಲ ಲಕ್ಷಣಗಳು ಕಾಣಿಸಿಕೊಂಡಲ್ಲಿ ಹತ್ತಿರದ ಸರ್ಕಾರಿ ವೈದ್ಯರನ್ನು ಭೇಟಿ ಮಾಡಬೇಕು ಎಂದು ಸಲಹೆ ನೀಡಿದರು.

ತಡೆಗಟ್ಟುವ ಸರಳ ಪರಿಹಾರಗಳು: 1. ಮಗುವಿಗೆ ಮೊದಲ 6 ತಿಂಗಳು ಸಂಪೂರ್ಣವಾಗಿ ಎದೆಹಾಲು ನೀಡುವುದು. 2. ವಿಶೇಷವಾಗಿ 6 ತಿಂಗಳಿನಿಂದ 2 ವರ್ಷದೊಳಗಿನ ಮಕ್ಕಳಿಗೆ ಉತ್ತಮ ಪೋಷಣೆ ನೀಡುವುದು.3. ಸುರಕ್ಷಿತ ಕುಡಿಯುವ ನೀರು ಮತ್ತು ಉತ್ತಮ ನೈರ್ಮಲ್ಯ.

  1. ಸಾಬೂನು ಬಳಸಿ ಕೈಗಳನ್ನು ಶುಚಿಗೊಳಿಸುವುದು. 5. ಮಗುವಿಗೆ ಸಮಯಕ್ಕೆ ಸರಿಯಾಗಿ ಚುಚ್ಚುಮದ್ದು ಹಾಕಿಸುವುದು. 6. ಮನೆಯೊಳಗೆ ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ. 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ನ್ಯುಮೋಕೋಕಲ್ ಕಾಂಜುಗೇಟ್ ಲಸಿಕೆ ಹಾಕಿಸಬೇಕು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ