ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಯೋಜನೆಯಡಿ ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ವೇತನವನ್ನು ಪರಿಷ್ಕರಿಸಲಾಗಿದೆ. ಈ ವೇತನ ಹೆಚ್ಚಳ ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದರು.
ಇನ್ನು ಈಗಿರುವ ಸಿಬ್ಬಂದಿಗೆ ಇದೇ ವೇತನ ಮುಂದುವರಿಯಲಿದೆ. ಅವರು ಕೂಡ ಹೊಸ ವೇತನಕ್ಕೆ ಅರ್ಹರಾಗಬೇಕಾದರೆ, ಈಗಿರುವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪುನಃ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಿದಾಗ ಈಗಾಗಲೇ ಕೆಲಸ ಮಾಡಿದ ವೈದ್ಯರಿಗೆ ಹೊಸ ಹುದ್ದೆಗಳನ್ನು ನೀಡಲಾಗುತ್ತದೆ ಎಂಬ ಭರವಸೆಯನ್ನು ನೀಡಲಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಈಗಾಗಲೇ ಒಟ್ಟು 9,041 ಹುದ್ದೆಗಳಿವೆ. ಇದರಲ್ಲಿ 1,398 ಎಂಬಿಬಿಎಸ್ ವೈದ್ಯರು, 899 ತಜ್ಞ ವೈದ್ಯರು ಹಾಗೂ 936 ಸ್ಟಾಫ್ ನರ್ಸ್ಗಳ ಹುದ್ದೆಗಳಿವೆ. ಇದರಲ್ಲಿ ಪ್ರಸ್ತುತವಾಗಿ 579 ಎಂಬಿಬಿಎಸ್ ವೈದ್ಯರು, 305 ತಜ್ಞ ವೈದ್ಯರು ಹಾಗೂ 936 ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿಗೆ ವೇತನ ಕಡಿಮೆ ಇರುವ ಕಾರಣದಿಂದ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದರೂ ವೈದ್ಯರು ಹಾಗೂ ನರ್ಸ್ಗಳು ಸರ್ಕಾರಿ ಆಸ್ಪತ್ರೆಗೆ ಬಂದು ಕೆಲಸ ಮಾಡುವುದಕ್ಕೆ ಆಸಕ್ತಿ ತೋರಿಸುತ್ತಿಲ್ಲ. ಈ ಕಾರಣದಿಂದಲೇ ಕೇಂದ್ರ ಸರ್ಕಾರದ ಅನುದಾನದ ಒಳಗೆ ವೇತನ ಪರಿಷ್ಕರಣೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಕಳೆದ ಎಂಟು ತಿಂಗಳಿಂದ ಈ ಕುರಿತು ಮನವಿ ಮಾಡುತ್ತಾ ಬಂದಿದ್ದು, ಇದೀಗ ಕೇಂದ್ರದಿಂದ ಒಪ್ಪಿಗೆ ಲಭಿಸಿದೆ ಎಂದರು.
ಈ ಹಿಂದೆ 46,895 ರಿಂದ 50,000 ರೂ.ಗಳವರೆಗೆ ವೇತನ ಪಡೆಯುತ್ತಿದ್ದ MBBS ವೈದ್ಯರು ಈಗ ತಿಂಗಳಿಗೆ 60,000 ರೂ.ಗಳನ್ನು ಪಡೆಯುತ್ತಾರೆ. ತಜ್ಞ ವೈದ್ಯರು 1,40,000 ರೂ.ಗಳನ್ನು ಪಡೆಯಲಿದ್ದಾರೆ, ಇದು ಹಿಂದಿನ 1,10,000 ರೂ.ಗಳಿಂದ 1,30,000 ರೂ.ಗಳಿಗೆ ಏರಿಕೆಯಾಗಿದೆ. 14,186 ರೂ.ಗಳಿಂದ 18,774 ರೂ.ಗಳವರೆಗೆ ಪಡೆಯುತ್ತಿದ್ದ ಸ್ಟಾಫ್ ನರ್ಸ್ಗಳಿಗೆ ಈಗ 22,000 ರೂ.ಗಳನ್ನು ಪಾವತಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಅನುಭವ ಹೊಂದಿರುವ ಅಭ್ಯರ್ಥಿಗಳು ನೇಮಕಾತಿಯ ಸಮಯದಲ್ಲಿ ಪ್ರತಿ ವರ್ಷದ ಅನುಭವಕ್ಕೆ ಹೆಚ್ಚುವರಿಯಾಗಿ 2.5% ವೇತನ ಹೆಚ್ಚಳವನ್ನು ಪಡೆಯುತ್ತಾರೆ.
ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಮಕ್ಕಳ ವೈದ್ಯಕೀಯ, ಅರಿವಳಿಕೆ, ಜನರಲ್ ಮೆಡಿಸಿನ್, ಮೂಳೆಚಿಕಿತ್ಸೆ, ಶಸ್ತ್ರಚಿಕಿತ್ಸೆ ಮತ್ತು ನೇತ್ರವಿಜ್ಞಾನದಂತಹ ವಿಭಾಗಗಳಲ್ಲಿನ ಪ್ರಮುಖ ಕ್ಲಿನಿಕಲ್ ತಜ್ಞರಿಗೆ ನಿಗದಿತ ಆರಂಭಿಕ ವೇತನವನ್ನು 1,40,000 ರೂ.ಗಳಿಗೆ ನಿಗದಿಪಡಿಸಲಾಗಿದೆ ಎಂದು ಗುಂಡೂ ರಾವ್ ಮಾಹಿತಿ ನೀಡಿದ್ದಾರೆ.
ಈ ಪರಿಷ್ಕರಣೆಯು NHM ಹುದ್ದೆಗಳಿಗೆ ಹೆಚ್ಚಿನ ವೈದ್ಯರು ಮತ್ತು ನರ್ಸ್ಗಳನ್ನು ಆಕರ್ಷಿಸಲು ಸಹಾಯ ಮಾಡುತ್ತದೆ, ಇದು ರಾಜ್ಯಾದ್ಯಂತ ಆರೋಗ್ಯ ಸೇವೆಗಳನ್ನು ಬಲಪಡಿಸುತ್ತದೆ ಎಂದು ಗುಂಡೂ ರಾವ್ ಹೇಳಿದರು.
“SNCUಗಳು, ICUಗಳು ಮತ್ತು ಇತರ ನಿರ್ಣಾಯಕ ಆರೈಕೆ ಘಟಕಗಳಲ್ಲಿ ಉತ್ತಮ ಸಿಬ್ಬಂದಿ ನೇಮಕವು ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳು, ಶಸ್ತ್ರಚಿಕಿತ್ಸೆಗಳು ಮತ್ತು ಸರ್ಕಾರಿ ಸೌಲಭ್ಯಗಳಲ್ಲಿ ಒಟ್ಟಾರೆ ರೋಗಿಗಳ ಆರೈಕೆಯನ್ನು ಸುಧಾರಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ರಾಜ್ಯದ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಹಾಯಕ ಸಿಬ್ಬಂದಿ ಸೇರಿ 28,250ಕ್ಕೂ ಅಧಿಕ ಸಿಬ್ಬಂದಿ ಕಾರ್ಯು ನಿರ್ವಹಿಸುತ್ತಿದ್ದಾರೆ. ಆದರೆ, ಈ ಎಲ್ಲ ಸಿಬ್ಬಂದಿಗೆ ಕಳೆದ 3 ತಿಂಗಳಿಂದ ವೇತನವನ್ನೇ ಪಾವತಿ ಮಾಡಿಲ್ಲ. ಇದರಿಂದ ಎಲ್ಲ ವೈದ್ಯಕೀಯ ಸಿಬ್ಬಂದಿ ವೇತನ ಸಿಗದೇ ಕುಟುಂಬ ನಿರ್ವಹಣೆಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಬಗೆ ಹರಿಸಲಾಗುವುದು ಎದು ಭರವಸೆ ನೀಡಿದರು.
Related

You Might Also Like
KSRTC: ಸಾರಿಗೆ ನೌಕರರಿಗೆ ಈ ಕೂಡಲೇ ವೇತನ ಹೆಚ್ಚಳ ಮಾಡಿ- ಸಿಎಂಗೆ ಮನವಿ ಸಲ್ಲಿಸಿದ ಕುಕನೂರು ಪಪಂ ಸದಸ್ಯೆ ಫಿರ್ದೋಶ್ ಬೇಗಂ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಕುಕನೂರು ಪಟ್ಟಣಪಂಚಾಯಿತಿ ಸದಸ್ಯರಾದ...
KKRTC ಬೀದರ್: ಕಿರಿಯ ಸಹಾಯಕ 10ಹುದ್ದೆ ಖಾಲಿ ಇದ್ದರು ಬೇರೆ ಹುದ್ದೆ ಆಯ್ಕೆಗೆ ಮೃತ ನೌಕರರ ಮಕ್ಕಳಿಗೆ ಅಧಿಕಾರಿಗಳಿಂದ ಒತ್ತಡ !
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯ ಬೀದರ್ವಿಭಾಗದಲ್ಲಿ ಅನುಕಂಪ ಆಧಾರದ ಮೇಲಿನ ಕಿರಿಯ ಸಹಾಯಕ ಹುದ್ದೆ ನೇಮಕಾತಿ ನಡೆಯದೆ ಹಲವಾರು ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಬಲಿಯಾಗುತ್ತಿವೆ. ಇನ್ನು...
ನಾಳೆ ಲಾಲ್ಬಾಗ್ ಆಭರಣದಲ್ಲಿ EPS ಪಿಂಚಣಿದಾರರ 89ನೇ ಮಾಸಿಕ ಸಭೆ
ಬೆಂಗಳೂರು: ಶತಮಾನಗಳ ಭವ್ಯ ಪರಂಪರೆಯನ್ನು ಹೊಂದಿರುವ, ನಡಿಗೆದಾರರ ಸ್ವರ್ಗ ಎಂದು ಕರೆಯುವ, ವಿಶ್ವ ವಿಖ್ಯಾತ ಲಾಲ್ಬಾಗ್ಗೂ ಇಪಿಎಸ್ ಪಿಂಚಣಿದಾರರಿಗೂ ಅವಿನವಬಾವ ಸಂಬಂಧ, ಈ ಸುಂದರ ಪರಿಸರ ತಾಣದಲ್ಲಿ...
ನಟ ದರ್ಶನ್ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು ಕೋರ್ಟ್ ಅನುಮತಿ
ಬೆಂಗಳೂರು: ನಟ ದರ್ಶನ್ ಅವರಿಗೆ ಸಿನಿಮಾ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಎಚ್ ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿಯಾಗಿರುವ ದರ್ಶನ್...
NWKRTC: 2024-25ನೇ ಸಾಲಿನ ಐಚ್ಛಿಕ ಭ.ನಿ. ಚೀಟಿಗಳ ಆನ್ಲೈನ್ನಲ್ಲಿ ಡೌನ್ಲೋಡ್ ಮಾಡಿಕೊಳ್ಳಿ: ನೌಕರರಿಗೆ CAO ಆದೇಶ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ಎಲ್ಲ ಅಧಿಕಾರಿಗಳ- ನೌಕರರ 2024-25ನೇ ಸಾಲಿನ ಭವಿಷ್ಯ ನಿಧಿ/ ಐಚ್ಛಿಕ ಭವಿಷ್ಯನಿಧಿ ಚೀಟಿಗಳನ್ನು ಆನ್ಲೈನ್ ಮೂಲಕ...
ಸಾಮಾಜಿಕ ಸ್ವಾಸ್ಥ್ಯ ಹಾಳುಗೆಡಹುತ್ತಿರುವವರ ಸರ್ಕಾರ ಮಟ್ಟಹಾಕದೆ ಬಿಡೆದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿಸುವ ವಾಗ್ದಾನವನ್ನು ನಾಡಿನ ಜನತೆಗೆ ನಾವು ಚುನಾವಣಾ ಪೂರ್ವದಲ್ಲೇ ನೀಡಿದ್ದೆವು, ಅದರಂತೆ ಜನತೆ ನಮ್ಮ ಮೇಲೆ ವಿಶ್ವಾಸವಿಟ್ಟು ಬಹುಮತದ ಸರ್ಕಾರ ರಚನೆಗೆ...
KKRTC ಯಾದಗಿರಿ: ಇಬ್ಬರು ವಿಭಾಗಮಟ್ಟದ ಅಧಿಕಾರಗಳ ವಿರುದ್ಧ ಜಾತಿ ನಿಂದನೆ, ಲೈಂಗಿಕ ಕಿರುಕುಳ-2ಪ್ರತ್ಯೇಕ ಪ್ರಕಣಗಳು ದಾಖಲು
ಯಾದಗಿರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಇಬ್ಬರು ಪ್ರಮುಖ ಅಧಿಕಾರಿಗಳ ವಿರುದ್ಧ ವಿಭಾಗದ ಸಿಬ್ಬಂದಿಗಳೇ ಪ್ರತ್ಯೇಕವಾಗಿ ದೂರು ನೀಡಿದ್ದು, ವಾರದೊಳಗೆ ಅಧಿಕಾರಿಗಳ ಮೇಲೆ ಪ್ರತ್ಯೇಕ ಎರಡು...
KSRTC: 2006ರಲ್ಲಿ ಡ್ಯೂಟಿಗೆ ಸೇರಿ ಹಲವರು ನಿವೃತ್ತರಾಗುತ್ತಿದ್ದಾರೆ- ಅಚ್ಚರಿ ಎಂದರೆ ಬೇಸಿಕ್ ಪೇ 27 ಸಾವಿರ ದಾಟಲೇ ಇಲ್ಲಆದರೆ..!
ಸರ್ಕಾರಿ ಡಿ ಗ್ರೂಪ್ ನೌಕರರ ಮೂಲ ವೇತನ ಸೇರಿದ ಕೂಡಲೇ 27 ಸಾವಿರ ಬೇಸಿಕ್ ಪೇ ನಮ್ಮ ಈ ದುರಂತ ಕತೆಗೆ ನಾಯಕರು ಯಾರು? ಜಂಟಿ ಸಂಘಟನೆಗಳ...
ರಾಜಕಾಲುವೆ ರಕ್ಕಸರ ವಿರುದ್ಧ ಕ್ರಮ ಜರುಗಿಸುವ ದಮ್ಮು ತಾಕತ್ತು ನಿಮಗೆ ಇದೆಯಾ ಡಿಕೆಶಿ ಅವರೇ: ಕೇಂದ್ರ ಸಚಿವ ಎಚ್ಡಿಕೆ ಪ್ರಶ್ನೆ
ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾನ್ಯತಾ ಟೆಕ್ ಪಾರ್ಕ್ ಬಳಿಗೆ ಭೇಟಿ ಕೊಟ್ಟು ಮಳೆ, ನೆರೆ ಪರಿಸ್ಥಿತಿ ವೀಕ್ಷಣೆ ಮಾಡಿರುವುದೇನೋ ಸರಿ. ಆದರೆ, ಅವರ ಭೇಟಿ...