ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಯೋಜನೆಯಡಿ ಕೆಲಸ ಮಾಡುತ್ತಿರುವ ವೈದ್ಯಕೀಯ ಸಿಬ್ಬಂದಿ ವೇತನವನ್ನು ಪರಿಷ್ಕರಿಸಲಾಗಿದೆ. ಈ ವೇತನ ಹೆಚ್ಚಳ ಹೊಸದಾಗಿ ನೇಮಕವಾಗುವ ಸಿಬ್ಬಂದಿಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದರು.
ಇನ್ನು ಈಗಿರುವ ಸಿಬ್ಬಂದಿಗೆ ಇದೇ ವೇತನ ಮುಂದುವರಿಯಲಿದೆ. ಅವರು ಕೂಡ ಹೊಸ ವೇತನಕ್ಕೆ ಅರ್ಹರಾಗಬೇಕಾದರೆ, ಈಗಿರುವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪುನಃ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಿದಾಗ ಈಗಾಗಲೇ ಕೆಲಸ ಮಾಡಿದ ವೈದ್ಯರಿಗೆ ಹೊಸ ಹುದ್ದೆಗಳನ್ನು ನೀಡಲಾಗುತ್ತದೆ ಎಂಬ ಭರವಸೆಯನ್ನು ನೀಡಲಾಗುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಈಗಾಗಲೇ ಒಟ್ಟು 9,041 ಹುದ್ದೆಗಳಿವೆ. ಇದರಲ್ಲಿ 1,398 ಎಂಬಿಬಿಎಸ್ ವೈದ್ಯರು, 899 ತಜ್ಞ ವೈದ್ಯರು ಹಾಗೂ 936 ಸ್ಟಾಫ್ ನರ್ಸ್ಗಳ ಹುದ್ದೆಗಳಿವೆ. ಇದರಲ್ಲಿ ಪ್ರಸ್ತುತವಾಗಿ 579 ಎಂಬಿಬಿಎಸ್ ವೈದ್ಯರು, 305 ತಜ್ಞ ವೈದ್ಯರು ಹಾಗೂ 936 ಸ್ಟಾಫ್ ನರ್ಸ್ ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿಗೆ ವೇತನ ಕಡಿಮೆ ಇರುವ ಕಾರಣದಿಂದ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದರೂ ವೈದ್ಯರು ಹಾಗೂ ನರ್ಸ್ಗಳು ಸರ್ಕಾರಿ ಆಸ್ಪತ್ರೆಗೆ ಬಂದು ಕೆಲಸ ಮಾಡುವುದಕ್ಕೆ ಆಸಕ್ತಿ ತೋರಿಸುತ್ತಿಲ್ಲ. ಈ ಕಾರಣದಿಂದಲೇ ಕೇಂದ್ರ ಸರ್ಕಾರದ ಅನುದಾನದ ಒಳಗೆ ವೇತನ ಪರಿಷ್ಕರಣೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದ್ದೇವೆ. ಕಳೆದ ಎಂಟು ತಿಂಗಳಿಂದ ಈ ಕುರಿತು ಮನವಿ ಮಾಡುತ್ತಾ ಬಂದಿದ್ದು, ಇದೀಗ ಕೇಂದ್ರದಿಂದ ಒಪ್ಪಿಗೆ ಲಭಿಸಿದೆ ಎಂದರು.
ಈ ಹಿಂದೆ 46,895 ರಿಂದ 50,000 ರೂ.ಗಳವರೆಗೆ ವೇತನ ಪಡೆಯುತ್ತಿದ್ದ MBBS ವೈದ್ಯರು ಈಗ ತಿಂಗಳಿಗೆ 60,000 ರೂ.ಗಳನ್ನು ಪಡೆಯುತ್ತಾರೆ. ತಜ್ಞ ವೈದ್ಯರು 1,40,000 ರೂ.ಗಳನ್ನು ಪಡೆಯಲಿದ್ದಾರೆ, ಇದು ಹಿಂದಿನ 1,10,000 ರೂ.ಗಳಿಂದ 1,30,000 ರೂ.ಗಳಿಗೆ ಏರಿಕೆಯಾಗಿದೆ. 14,186 ರೂ.ಗಳಿಂದ 18,774 ರೂ.ಗಳವರೆಗೆ ಪಡೆಯುತ್ತಿದ್ದ ಸ್ಟಾಫ್ ನರ್ಸ್ಗಳಿಗೆ ಈಗ 22,000 ರೂ.ಗಳನ್ನು ಪಾವತಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಅನುಭವ ಹೊಂದಿರುವ ಅಭ್ಯರ್ಥಿಗಳು ನೇಮಕಾತಿಯ ಸಮಯದಲ್ಲಿ ಪ್ರತಿ ವರ್ಷದ ಅನುಭವಕ್ಕೆ ಹೆಚ್ಚುವರಿಯಾಗಿ 2.5% ವೇತನ ಹೆಚ್ಚಳವನ್ನು ಪಡೆಯುತ್ತಾರೆ.
ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ, ಮಕ್ಕಳ ವೈದ್ಯಕೀಯ, ಅರಿವಳಿಕೆ, ಜನರಲ್ ಮೆಡಿಸಿನ್, ಮೂಳೆಚಿಕಿತ್ಸೆ, ಶಸ್ತ್ರಚಿಕಿತ್ಸೆ ಮತ್ತು ನೇತ್ರವಿಜ್ಞಾನದಂತಹ ವಿಭಾಗಗಳಲ್ಲಿನ ಪ್ರಮುಖ ಕ್ಲಿನಿಕಲ್ ತಜ್ಞರಿಗೆ ನಿಗದಿತ ಆರಂಭಿಕ ವೇತನವನ್ನು 1,40,000 ರೂ.ಗಳಿಗೆ ನಿಗದಿಪಡಿಸಲಾಗಿದೆ ಎಂದು ಗುಂಡೂ ರಾವ್ ಮಾಹಿತಿ ನೀಡಿದ್ದಾರೆ.
ಈ ಪರಿಷ್ಕರಣೆಯು NHM ಹುದ್ದೆಗಳಿಗೆ ಹೆಚ್ಚಿನ ವೈದ್ಯರು ಮತ್ತು ನರ್ಸ್ಗಳನ್ನು ಆಕರ್ಷಿಸಲು ಸಹಾಯ ಮಾಡುತ್ತದೆ, ಇದು ರಾಜ್ಯಾದ್ಯಂತ ಆರೋಗ್ಯ ಸೇವೆಗಳನ್ನು ಬಲಪಡಿಸುತ್ತದೆ ಎಂದು ಗುಂಡೂ ರಾವ್ ಹೇಳಿದರು.
“SNCUಗಳು, ICUಗಳು ಮತ್ತು ಇತರ ನಿರ್ಣಾಯಕ ಆರೈಕೆ ಘಟಕಗಳಲ್ಲಿ ಉತ್ತಮ ಸಿಬ್ಬಂದಿ ನೇಮಕವು ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳು, ಶಸ್ತ್ರಚಿಕಿತ್ಸೆಗಳು ಮತ್ತು ಸರ್ಕಾರಿ ಸೌಲಭ್ಯಗಳಲ್ಲಿ ಒಟ್ಟಾರೆ ರೋಗಿಗಳ ಆರೈಕೆಯನ್ನು ಸುಧಾರಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ರಾಜ್ಯದ ಆರೋಗ್ಯ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ವೈದ್ಯರು ಹಾಗೂ ಇತರೆ ವೈದ್ಯಕೀಯ ಸಹಾಯಕ ಸಿಬ್ಬಂದಿ ಸೇರಿ 28,250ಕ್ಕೂ ಅಧಿಕ ಸಿಬ್ಬಂದಿ ಕಾರ್ಯು ನಿರ್ವಹಿಸುತ್ತಿದ್ದಾರೆ. ಆದರೆ, ಈ ಎಲ್ಲ ಸಿಬ್ಬಂದಿಗೆ ಕಳೆದ 3 ತಿಂಗಳಿಂದ ವೇತನವನ್ನೇ ಪಾವತಿ ಮಾಡಿಲ್ಲ. ಇದರಿಂದ ಎಲ್ಲ ವೈದ್ಯಕೀಯ ಸಿಬ್ಬಂದಿ ವೇತನ ಸಿಗದೇ ಕುಟುಂಬ ನಿರ್ವಹಣೆಗೆ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಈ ಸಮಸ್ಯೆ ಬಗೆ ಹರಿಸಲಾಗುವುದು ಎದು ಭರವಸೆ ನೀಡಿದರು.
Related

You Might Also Like
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...
ಅಂಗವಿಕಲರ ಬಸ್ಪಾಸ್ ಸೇರಿ ಎಲ್ಲ ಸರ್ಕಾರಿ ಸೌಲಭ್ಯಗಳಿಂದ ವಂಚಿತ ಅಂಗವಿಕಲ ಭೀಮಪ್ಪನಿಗೆ ಬೇಕಿದೆ ಸರ್ಕಾರದ ಆಸರೆ !
ತುಮಕೂರು: ಜಿಲ್ಲೆ ಹೊಸಹಳ್ಳಿ ಗ್ರಾಮ, ರೆಡ್ಡಿಹಳ್ಳಿ ಗ್ರಾಮಪಂಚಾಯಿತಿ ಮಿಡಿಗೆಸಿ, ಮಧುಗಿರಿ ತಾಲೂಕಿನ ಅಂಗವಿಕಲ ಭೀಮಪ್ಪನಿಗೆ ಸರ್ಕಾರಿ ಸೌಲಭ್ಯ ಸಿಗಬೇಕಿದೆ. ಪೋಲಿಯೋಗೆ ಒಳಗಾಗಿರುವ ಭೀಮಪ್ಪನಿಗೆ ಬೆರಳಿನ ಗುರುತು ಸಹ...
ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು: ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ, ಜಿಲ್ಲೆಯ ತಿ.ನರಸೀಪುರ ತಾಲೂಕಿನ ತಲಕಾಡು ನಿಸರ್ಗ ಧಾಮಕ್ಕೆ ಬರುವ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ತಾಲೂಕು ಆಡಳಿತ ಆದೇಶ ಹೊರಡಿಸಿದೆ. ಕೆಅರ್ಎಸ್,...
KSRTC: ನಾಳೆಯಿಂದ ಸಾರಿಗೆ ನೌಕರರ ಉಪವಾಸ-ಧರಣಿ ಸತ್ಯಾಗ್ರಹ: ಚಂದ್ರಶೇಖರ್
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ನಾಳೆಯಿಂದ (ಜು.29)...