NEWSನಮ್ಮಜಿಲ್ಲೆ

60 ಕೋಟಿ ರೂ. ಮೌಲ್ಯದ 27 ಎಕರೆ ಒತ್ತುವರಿ ತೆರವು: ಜಿಲ್ಲಾಧಿಕಾರಿ ಮಂಜುನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ 5 ತಾಲೂಕುಗಳಲ್ಲಿ ಸರ್ಕಾರಿ ಜಮೀನುಗಳಾದ ಕೆರೆ, ಕುಂಟೆ, ಗೋಮಾಳ, ಸ್ಮಶಾನ, ರಾಜಕಾಲುವೆ ಮತ್ತು ಇತರ ಸರ್ಕಾರಿ ಜಮೀನುಗಳನ್ನು ರಕ್ಷಿಸಲು ಇಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ನೇತೃತ್ವದಲ್ಲಿ ಕೆರೆಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮಂಜುನಾಥ್, ಒಟ್ಟು 60,71,20,000 ರೂ. ಮೌಲ್ಯದ ಒಟ್ಟು 27-25.08 ಎ/ಗು ವಿಸ್ತೀರ್ಣದ ಜಮೀನು ಒತ್ತುವರಿ ತೆರವುಗೊಳಿಸಲಾಗಿದೆ ಎಂದು ತಿಳಿಸಿದರು.

ಯಲಹಂಕ ತಾಲೂಕಿನ ಜಾಲ ಹೋಬಳಿಯ ಬಾಗಲೂರು ಗ್ರಾಮದ ಸರ್ವೇ ನಂ.175 ರಲ್ಲಿ 1-20 ಎ/ಗು ವಿಸ್ತೀರ್ಣದ ಸರ್ಕಾರಿ ಖರಾಬು, ಯಲಹಂಕ-03 ಹೋಬಳಿಯ ಅಮೃತಹಳ್ಳಿ ಗ್ರಾಮದ ಸರ್ವೇ ನಂ.115 ರಲ್ಲಿ 0-20 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ ಹಾಗೂ ಜಾಲ ಹೋಬಳಿಯ ಬಿ.ಕೆ.ಪಾಳ್ಯ ಗ್ರಾಮದ ಸರ್ವೇ ನಂ.7 ರಲ್ಲಿ 4-00 ಎ/ಗು ವಿಸ್ತೀರ್ಣದ ಸರ್ಕಾರಿ ಗೋಮಾಳದ ಜಮೀನು ಸೇರಿದಂತೆ ರೂ. 35,28,20,000 ಮೌಲ್ಯದ ಒಟ್ಟು 6-00 ಎ/ಗು ವಿಸ್ತೀರ್ಣದ ಜಮೀನು ವಶಪಡಿಸಿಕೊಳ್ಳಲಾಯಿತು ಎಂದರು.

ಇನ್ನು ಆನೇಕಲ್ ತಾಲೂಕಿನ ಕಸಬಾ ಹೋಬಳಿಯ ಹೊನ್ನಕಳಸಾಪುರ ಗ್ರಾಮದ ಸರ್ವೇ ನಂ. 33 ರಲ್ಲಿ 3-25 ಎ/ಗು ವಿಸ್ತೀರ್ಣದ, ರಾಚಮಾನಹಳ್ಳಿ ಗ್ರಾಮದ ಸರ್ವೇ ನಂ.12 ರಲ್ಲಿ 0-27 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆಗಳು, ಅತ್ತಿಬೆಲೆ ಹೋಬಳಿಯ ಗಿಡ್ಡೇನಹಳ್ಳೀ ಗ್ರಾಮದ ಸರ್ವೇ ನಂ.21 ರಲ್ಲಿ 0-12.08 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ, ಜಿಗಣಿ ಹೋಬಳಿಯ ಹುಲ್ಲಹಳ್ಳಿ ಗ್ರಾಮದ ಸರ್ವೇ ನಂ.54ರಲ್ಲಿ 6-20 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ ಮತ್ತು ಹುಲಿಮಂಗಲ ಗ್ರಾಮದ ಸರ್ವೇ ನಂ. 15,51,56,343 ರಲ್ಲಿ 2-17 ಎ/ಗು ವಿಸ್ತೀರ್ಣದ ಗೋಮಾಳ ಜಮೀನು.

ಸರ್ಜಾಪುರ ಹೋಬಳಿಯ ದೊಡ್ಡ ತಿಮ್ಮಸಂದ್ರ ಗ್ರಾಮದ ಸರ್ವೇ ನಂ.202 ರಲ್ಲಿ 1-18 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ ಮತ್ತು ಕೊಮ್ಮಸಂದ್ರ ಗ್ರಾಮದ ಸರ್ವೇ ನಂ.94 ರಲ್ಲಿ 0-28 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ ಮತ್ತು ಚೊಕ್ಕಸಂದ್ರ ಗ್ರಾಮದ ಸರ್ವೇ ನಂ. 20 ರಲ್ಲಿ 1-00 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ ಹಾಗೂ ಅತ್ತಿಬೆಲೆ ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ 0-25 ಎ/ಗು ವಿಸ್ತೀರ್ಣದ ರಾಜಕಾಲುವೆ ಸೇರಿದಂತೆ ರೂ.19,61,00,000 ಮೌಲ್ಯದ ಒಟ್ಟು 17-12.08 ಎ/ಗು ವಿಸ್ತೀರ್ಣದ ಜಮೀನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಹೋಬಳಿಯ ಗೋಪಾಲಪುರ ಗ್ರಾಮದ ಸರ್ವೇ ನಂ. 20 ರಲ್ಲಿ 0-02 ಎ/ಗು ವಿಸ್ತೀರ್ಣದ ಒಟ್ಟು ರೂ. 5,00,000 ಮೌಲ್ಯದ ಸರ್ಕಾರಿ ಕೆರೆ ಜಮೀನನ್ನು ವಶಪಡಿಸಿಕೊಳ್ಳಲಾಯಿತು.

ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿ ಹೋಬಳಿಯ ತಟ್ಟಗುಪ್ಪೆ ಗ್ರಾಮದ ಸರ್ವೇ ನಂ. 26 ರಲ್ಲಿ 2-02 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ, ಬೇಗೂರು ಹೋಬಳಿಯ ಮೈಲಸಂದ್ರ ಗ್ರಾಮದ ಸರ್ವೇ ನಂ. 36 ರಲ್ಲಿ 1-17.08 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ.

ತಾವರೆಕೆರೆ ಹೋಬಳಿಯ ಹೊನ್ನಿಗನಹಟ್ಟಿ ಗ್ರಾಮದ ಸರ್ವೇ ನಂ. 11 ರಲ್ಲಿ 0-01 ಎ/ಗು ವಿಸ್ತೀರ್ಣದ ಸರ್ಕಾರಿ ಕೆರೆ ಮತ್ತು ಚನ್ನೇನಹಳ್ಳಿ ಗ್ರಾಮದ ಸರ್ವೇ ನಂ. 20 ರಲ್ಲಿ 0-30 ಎ/ಗು ವಿಸ್ತೀರ್ಣದ ಗೋಮಾಳ ಜಮೀನು ಸೇರಿದಂತೆ ರೂ. 5,77,00,000 ಮೌಲ್ಯದ ಒಟ್ಟು 4-10.08 ಎ/ಗು ವಿಸ್ತೀರ್ಣದ ಸರ್ಕಾರಿ ಪ್ರದೇಶದ ಒತ್ತುವರಿ ತೆರವುಗೊಳಿಸಲಾಯಿತು.

ಈ ಕಾರ್ಯಾಚರಣೆಯಲ್ಲಿ ತಾಲೂಕಿನ ತಹಸೀಲ್ದಾರ್‌ಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು