CrimeNEWSನಮ್ಮಜಿಲ್ಲೆ

7-9ನೇ ತರಗತಿ ವಿದ್ಯಾರ್ಥಿಗಳ ನಡುವೆ ಗಲಾಟೆ- ಗನ್ ಹಿಡಿದು ಭಯ ಸೃಷ್ಟಿಸಿದ ಬಾಲಕ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಏಳು ಮತ್ತು ಒಂಬತ್ತನೇ ತರಗತಿ ವಿದ್ಯಾರ್ಥಿ ನಡುವೆ ನಡೆದ ಜಗಳಿದಿಂದ ಕುಪಿತಗೊಂಡ ವಿದ್ಯಾರ್ಥಿಯೋರ್ವ ಶಾಲೆಗೆ ಪೆನ್ ಬದಲು ಗನ್ ತೆಗೆದುಕೊಂಡು ಹೋಗಿ ಭಯಹುಟ್ಟಿರುವ ಘಟನೆ ನಡೆದಿದೆ.

ರಾಯಚೂರು ನಗರದ ಶ್ರೀಮಲ್ ರಿಖಬ್ ಚಂದ್ ಸುಖಾಣಿ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಪುರುಷೋತ್ತಮ ಎಂಬ ವಿದ್ಯಾರ್ಥಿ ಶಾಲೆಗೆ ಗನ್, ಚಾಕು ಹಾಗೂ ಮಾರಾಕಾಸ್ತ್ರಗಳನ್ನು ತೆಗೆದುಕೊಂಡು ಹೋಗಿದ್ದಾನೆ.

ಈತ 7ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯಾಗಿದ್ದು, ಈತನ ನಡೆತೆಯಿಂದ ಇದೀಗ ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ವಿದ್ಯಾರ್ಥಿ ಮಾರಕಾಸ್ತ್ರ ತೆಗೆದುಕೊಂಡು ಬಂದ ಘಟನೆ ಬೆಳಕಿಗೆ ಬರುತ್ತಿದಂತೆ ರಾಯಚೂರು ನಗರದ ವೆಸ್ಟ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಬಾಲಕನನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ