ಬೆಂಗಳೂರು: ಭಾರಿ ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.73.45ರಷ್ಟು ಪರೀಕ್ಷಾರ್ಥಿ ವಿದ್ಯಾರ್ಥಿಗಳು ತೇರ್ಗಡೆಹೊಂದಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಇಂದು (ಏ.8) ಫಲಿತಾಂಶ ಕುರಿತು ಮಧ್ಯಾಹ್ನ 12:45ಕ್ಕೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ ಎಂದು ವಿವರಿಸಿದರು.
ಇನ್ನು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ (85.36%) ಪಡೆದುಕೊಂಡಿದೆ. ಕೊನೆ ಸ್ಥಾನದಲ್ಲಿ ಯಾದಗಿರಿ( 73.45%) ಇದೆ ಎಂದ ಅವರು, ಮಧ್ಯಾಹ್ನ 1:30 ಗಂಟೆಗೆ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದರು.
ದ್ವಿತೀಯ ಪಿಯುಸಿ ಪರಿಕ್ಷೆ ಕಳೆದ ಮಾರ್ಚ್ 1 ರಿಂದ ಆರಂಭಗೊಂಡು ಮಾರ್ಚ್ 20 ರಂದು ಮುಕ್ತಾಯಗೊಂಡಿತ್ತು. ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ತ್ವರಿತಗತಿಯಲ್ಲಿ ನಡೆಸಿ ಇಂದು ಫಲಿತಾಂಶ ಘೋಷಣೆ ಮಾಡಲಾಯಿತು.
ಕಲಾ ವಿಭಾಗ: ಕಲಾ ವಿಭಾಗದಲ್ಲಿ ಬಳ್ಳಾರಿ ಮೂಲದ ಸಂಜನಾ ಬಾಯಿ 600ಕ್ಕೆ 597 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಬಳ್ಳಾರಿಯ ನಿರ್ಮಾಲಾ 596 ಅಂಕಗಳನ್ನು ಪಡೆದು ರಾಜ್ಯಕ್ಕೇ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಯಾವ ಶ್ರೇಣಿಯಲ್ಲಿ ಎಷ್ಟು ಮಂದಿ ಪಾಸ್?
ಉನ್ನತ ಶ್ರೇಣಿ- 1,00,571
ಪ್ರಥಮ ದರ್ಜೆ- 2,78,054
ದ್ವೀತಿಯ ದರ್ಜೆ-70969
ತೃತೀಯ ದರ್ಜೆ-18845
ಜಿಲ್ಲಾವಾರು ಫಲಿತಾಂಶ: ಉಡುಪಿ ಜಿಲ್ಲೆ ಶೇಕಡಾ 93.90, ದಕ್ಷಿಣ ಕನ್ನಡ ಜಿಲ್ಲೆ 93.57ರಷ್ಟು ಫಲಿತಾಂಶ, ಬೆಂಗಳೂರು ದಕ್ಷಿಣ 85.36, ಕೊಡಗು ಜಿಲ್ಲೆ 83.84ರಷ್ಟು ಫಲಿತಾಂಶ, ಬೆಂಗಳೂರು ಉತ್ತರ 83.31, ಉತ್ತರ ಕನ್ನಡ ಜಿಲ್ಲೆ 82.93ರಷ್ಟು ಫಲಿತಾಂಶ, ಶಿವಮೊಗ್ಗ ಜಿಲ್ಲೆ 79.91, ಬೆಂಗಳೂರು ಗ್ರಾಮಾಂತರ ಜಿಲ್ಲೆ 79.70, ಚಿಕ್ಕಮಗಳೂರು ಜಿಲ್ಲೆ 79.56, ಹಾಸನ ಜಿಲ್ಲೆ 77.56ರಷ್ಟು ಫಲಿತಾಂಶ, ಚಿಕ್ಕಬಳ್ಳಾಪುರ ಜಿಲ್ಲೆ 75.80, ಮೈಸೂರು ಜಿಲ್ಲೆ 74.30ರಷ್ಟು ಫಲಿತಾಂಶ.
ಚಾಮರಾಜನಗರ ಜಿಲ್ಲೆ 73.97, ಮಂಡ್ಯ ಜಿಲ್ಲೆ 73.27ರಷ್ಟು ಫಲಿತಾಂಶ, ಬಾಗಲಕೋಟೆ ಜಿಲ್ಲೆ 72.83, ಕೋಲಾರ ಜಿಲ್ಲೆ 72.45ರಷ್ಟು ಫಲಿತಾಂಶ, ಧಾರವಾಡ ಜಿಲ್ಲೆ 72.32, ತುಮಕೂರು ಜಿಲ್ಲೆ 72.02ರಷ್ಟು ಫಲಿತಾಂಶ, ರಾಮನಗರ ಜಿಲ್ಲೆ 69.71, ದಾವಣಗೆರೆ ಜಿಲ್ಲೆ 69.45ರಷ್ಟು ಫಲಿತಾಂಶ, ಹಾವೇರಿ ಜಿಲ್ಲೆ 76.56, ಬೀದರ್ ಜಿಲ್ಲೆ 67.31ರಷ್ಟು ಫಲಿತಾಂಶ ಬಂದಿದೆ.
ಕೊಪ್ಪಳ ಜಿಲ್ಲೆ 67.20, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ 66.76ರಷ್ಟು ಫಲಿತಾಂಶ, ಗದಗ ಜಿಲ್ಲೆ 66.64, ಬೆಳಗಾವಿ ಜಿಲ್ಲೆ 65.37ರಷ್ಟು ಫಲಿತಾಂಶ, ಬಳ್ಳಾರಿ ಜಿಲ್ಲೆ 64.41, ಚಿತ್ರದುರ್ಗ ಜಿಲ್ಲೆ 59.87ರಷ್ಟು ಫಲಿತಾಂಶ, ವಿಜಯಪುರ ಜಿಲ್ಲೆ 58.81, ರಾಯಚೂರು ಜಿಲ್ಲೆ 58.75ರಷ್ಟು ಫಲಿತಾಂಶ ಕಲಬುರಗಿ ಜಿಲ್ಲೆ 55.70, ಯಾದಗಿರಿ ಜಿಲ್ಲೆ 48.45ರಷ್ಟು ಫಲಿತಾಂಶ ಬಂದಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ 2,92,111 ಬಾಲಕರು ಹಾಜರಾಗಿದ್ದು, ಆ ಪೈಕಿ 1,99,227 ಬಾಲಕರು ಉತ್ತೀರ್ಣರಾಗಿದ್ದಾರೆ. 3,45,694 ಬಾಲಕಿಯರು ಪರೀಕ್ಷೆ ಬರೆದಿದ್ದರು ಅದರಲ್ಲಿ 2,69,212 ಬಾಲಕಿಯರು ಉತ್ತೀರ್ಣರಾಗಿದ್ದಾರೆ.
Related

You Might Also Like
ಪ್ರಧಾನಿ ಮೋದಿ ಪ್ರಚಾರದಿಂದಷ್ಟೇ ಬದುಕಿರುವುದು: ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರದಿಂದ ಬದುಕಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ...
ಖಾತೆ ಬದಲಾಯಿಸುವಂತೆ ಕೇಳಿಲ್ಲ- ಗಣನೆಗೆ ತೆಗೆದುಕೊಳ್ಳುವುದು ಬೇಡ: ಪರವೇಶ್ವರ್
ಬೆಂಗಳೂರು: ನಾನು ಯಾವತ್ತು ಕೂಡ ಇಂತಹ ಖಾತೆ ಬೇಕು ಎಂದು ಮುಖ್ಯಮಂತ್ರಿಯವರನ್ನು ಕೇಳಿಲ್ಲ. ಜತೆಗೆ ಈಗ ಖಾತೆ ಬದಲಾಯಿಸುವಂತೆಯೂ ಕೇಳಿಲ್ಲ. ಸುಳ್ಳುಸುದ್ದಿ ಗಣನೆಗೆ ತೆಗೆದುಕೊಳ್ಳುವುದು ಬೇಡ ಎಂದು...
ತುಮಕೂರಿಗೆ ಅರ್ಬನ್, ಮೆಟ್ರೋ ರೈಲು ಎರಡು ಬರಲಿ: ಗೃಹ ಸಚಿವ ಜಿ.ಪರಮೇಶ್ವರ
ಬೆಂಗಳೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ತುಮಕೂರು ಜಿಲ್ಲಾ...
ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ, ಅಷ್ಟಾದ್ರೂ ಜ್ಞಾನೋದಯವಾಗಿದ್ದಕ್ಕೆ ಅಭಿನಂದನೆಗಳು: ಎಚ್ಡಿಕೆ ವ್ಯಂಗ್ಯ
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಗೋವಿಂದರಾಜ್ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿದ್ದು, ಸರ್ಕಾರಕ್ಕೆ ಅಷ್ಟಾದ್ರೂ...
NWKRTC: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದು ಹಳ್ಳದಲ್ಲಿ ನಿಂತ ಬಸ್- ಚಾಲಕ ಸೇರಿ 23 ಮಂದಿಗೆ ಗಾಯ
ಶಿಗ್ಗಾವಿ: ಚಾಲಕನ ನಿಯಂತ್ರಣ ತಪ್ಪಿದ ಹುಬ್ಬಳ್ಳಿ ಇಂದ ಹಾನಗಲ್ಗೆ ಹೋಗುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ಶಿಗ್ಗಾವಿ ಹತ್ತಿರದ ಗರುಡ ಹೋಟೆಲ್ ಬಳಿ ಹೆದ್ದಾರಿಯ ಡಿವೈಡರ್...
KSRTC: ಡ್ರೈವಿಂಗ್-ಕಂಡಕ್ಟರ್ ಲೈಸನ್ಸ್ ರಿನಿವಲ್ ಬಗ್ಗೆ ನೌಕರರಿಗೆ ಮಾಹಿತಿ ಕೊಟ್ಟರೆ ಹುಷಾರ್- ಭ್ರಷ್ಟ ಅಧಿಕಾರಿಗಳಿಂದ ಧಮ್ಕಿ !
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ ಡ್ರೈವಿಂಗ್ ಹಾಗೂ ಕಂಡಕ್ಟರ್ ಲೈಸನ್ಸ್ ರಿನಿವಲ್ ಮಾಡಿರುವ ಹಣವನ್ನು ವಾಪಸ್ ತೆಗೆದುಕೊಳ್ಳುವುದಕ್ಕೆ ನೌಕರರಿಗೆ ಅವಕಾಶವಿದೆ. ಆದರೆ ಕೆಲ...
ಕಾಲ್ತುಳಿತ ಪ್ರಕರಣ: ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡ
ಬೆಂಗಳೂರು: RCB ವಿಜಯೋತ್ಸವದ ವೇಳೆ ಅದ ಅನಾಹುತಕ್ಕೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ತಲೆದಂಡವಾಗಿದೆ. ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್ ಅವರನ್ನು ಬಿಡುಗಡೆ...
ಗ್ಯಾರಂಟಿ ಯೋಜನೆಗಳಿಂದ ಆಧುನಿಕ ಅಭಿವೃದ್ಧಿಯತ್ತ ಕರ್ನಾಟಕ: ಸೂರಜ್ ಹೆಗಡೆ
ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ...
ಬಕ್ರೀದ್- ಗೋವು ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಜೂ.7 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು...