SSLC: ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ BBMP ಶಾಲೆಯ 78 ವಿದ್ಯಾರ್ಥಿಗಳಿಗೆ ತಲಾ ₹25 ಸಾವಿರ ಪ್ರೋತ್ಸಾಹ ಧನ

- ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 55.78 ಫಲಿತಾಂಶ:
- ಬಿಬಿಎಂಪಿ ಶಾಲೆಯ ಮೂರು ವಿದ್ಯಾರ್ಥಿನಿಯರು ಶೇ. 95ಕ್ಕೂ ಹೆಚ್ಚು ಅಂಕ ಪಡೆದು ಉತ್ತೀರ್ಣ.
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2,257 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1,759 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 55.78 ರಷ್ಟು ಫಲಿತಾಂಶ ಬಂದಿದೆ.
ಬಿಬಿಎಂಪಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳ ಪೈಕಿ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ ಬಿಬಿಎಂಪಿ ಬಸವನಗುಡಿ ಪ್ರೌಢಶಾಲೆಯು ಶೇ. 100 ರಷ್ಟು ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ.
ಬಿಬಿಎಂಪಿ ಶಾಂತಿ ನಗರ ಪ್ರೌಢಶಾಲೆಯು ಶೇ. 88.89 ರಷ್ಟು ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದರೆ ಬಿಬಿಎಂಪಿ ಶ್ರೀರಾಮಪುರ ಪ್ರೌಢಶಾಲೆಯು ಶೇ. 86.21 ರಷ್ಟು ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದುಕೊಂಡಿದೆ.
ಇನ್ನು 2024-25 ನೇ ಸಾಲಿನಲ್ಲಿ ಒಟ್ಟು 78 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಅವರಲ್ಲಿ ಹೇರೋಹಳ್ಳಿ ಪ್ರೌಢಶಾಲೆಯಶಾಲಿನಿ ಬಿ.ಆರ್ ಅವರು 625 ಕ್ಕೆ 614 ಅಂಕಗಳನ್ನು ಪಡೆದು ಶೇ. 98.24 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿದ್ದಾರೆ.
ಶ್ರೀರಾಮಪುರ ಪ್ರೌಢಶಾಲೆಯ ರಾಜೇಶ್ವರಿ ಡಿ. ಅವರು 625 ಕ್ಕೆ 610 ಅಂಕಗಳನ್ನು ಪಡೆದು ಶೇ. 97.60 ರಷ್ಟು ಅಂಕಗಳನ್ನು ಗಳಿಸಿದ್ದು, ಜಯಮಹಲ್ ಬಿಬಿಎಂಪಿ ಬಾಲಕಿಯರ ಪ್ರೌಢಶಾಲೆಯ ಜೈನಬ್ ಫಿರ್ ದೋಸ್ ಖಾನಂ 606 (96.96%) ಪಾಲಿಕೆಗೆ ಕೀರ್ತಿ ತಂದಿದ್ದಾರೆ.
ಈ ಮೂವರು ವಿದ್ಯಾರ್ಥಿನಿಯರು ಸೇರಿದಂತೆ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ 78 ವಿದ್ಯಾರ್ಥಿಗಳಿಗೂ ಪಾಲಿಕೆ ವತಿಯಿಂದ ತಲಾ 25,000 ರೂಪಾಯಿ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Related

You Might Also Like
NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರಲ್ಲಿ ಹಾಗೂ ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...