NEWSದೇಶ-ವಿದೇಶನಮ್ಮಜಿಲ್ಲೆಸಂಸ್ಕೃತಿ

ರಾಮನ ಮೂರ್ತಿಗೆ ಶಿಲೆಕೊಟ್ಟವನಿಗೆ 80 ಸಾವಿರ ದಂಡ: ಮಾಡದ ತಪ್ಪಿಗೆ ಕಣ್ಣೀರು ಹಾಕುತ್ತಿರುವ ಗುತ್ತಿಗೆದಾರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡು ಕೋಟ್ಯಂತರ ಭಕ್ತರು ಕೈ ಮುಗಿಯುತ್ತಿರುವ ರಾಮಲಲ್ಲಾ ಮೂರ್ತಿ ಹಿಂದೆ ಕಣ್ಣೀರ ಕಥೆಯೊಂದು ಬೆಳಕಿಗೆ ಬಂದಿದೆ. ಅಯೋಧ್ಯೆಗೆ ರಾಮಲಲ್ಲಾ ಶಿಲೆ ನೀಡಿದ ವ್ಯಕ್ತಿ ಈಗ ಕಣ್ಣೀರು ಹಾಕುತ್ತಿರುವುದು ಪ್ರಧಾನಿ ಅವರ ಬಂದಿಲ್ಲವೇ ಎಂಬುವುದು ಯಕ್ಷಪತ್ರಶ್ನೆಯಾಗಿದೆ.

ಹೌದು! ನೋಡಿ ರಾಮಲಲ್ಲಾ ಶಿಲೆ ನೀಡಿದ ವ್ಯಕ್ತಿಗೆ 80 ಸಾವಿರ ರೂಪಾಯಿ ದಂಡ ವಿಧಿಸುವ ಮೂಲಕ ಆತನ ವಿರುದ್ಧ ಗಣಿಗಾರಿಕೆ ಮಾಡಿರುವ ಆರೋಪವನ್ನು ಹೊರಿಸಲಾಗಿದೆ. ರಾಮನ ಮೂರ್ತಿಗಾಗಿ ಶಿಲೆ ಕೊಟ್ಟ ಗುತ್ತಿಗೆದಾರ ಶ್ರೀನಿವಾಸ್‌ಗೆ 80 ಸಾವಿರ ದಂಡ ವಿಧಿಸಲಾಗಿದೆ.

ಶ್ರೀನಿವಾಸ್ ಮೈಸೂರಿನ ಹಾರೋಹಳ್ಳಿ- ಗುಜ್ಜೇಗೌಡನಪುರ ಗ್ರಾಮದ ನಿವಾಸಿಯಾಗಿದ್ದು, ತನ್ನ ಹೆಂಡತಿಯ ಚಿನ್ನಾಭರಣಗಳನ್ನು ಅಡವಿಟ್ಟು ದಂಡ ಕಟ್ಟಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ.

ಗಣಿಗಾರಿಕೆ ಮಾಡಿದ್ದಕ್ಕೆ ದಂಡ: ಇತ್ತ ಭೂ ಮಾಲೀಕ ರಾಮದಾಸ್ ಅವರು ಭೂಮಿ ಒಳಗಿದ್ದ ಬಂಡೆ ತೆಗೆಯುವಂತೆ ಶ್ರೀನಿವಾಸ್​ಗೆ ಗುತ್ತಿಗೆ ನೀಡಿದ್ದರು. ಅದರಂತೆಯೇ ಆ ಕಲ್ಲನ್ನು ಹೊರಕ್ಕೆ ತೆಗೆದು ಜಮೀನಿನ ಪಕ್ಕದಲ್ಲಿ ಇಟ್ಟಿದ್ದೆ. ಆ‌ ವೇಳೆ ಸ್ಥಳಕ್ಕೆ ಬಂದ ಅಧಿಕಾರಿಗಳು ಗಣಿಗಾರಿಕೆ ಅಂತ ಆರೋಪ ಮಾಡಿ 80 ಸಾವಿರ ರೂಪಾಯಿ ದಂಡವನ್ನು ನನ್ನಿಂದ ಕಟ್ಟಿಸಿಕೊಂಡಿದ್ದಾರೆ ಎಂದು ತನಗಾದ ಅನ್ಯಾಯವನ್ನು ಹೇಳಿಕೊಂಡಿದ್ದಾರೆ.

ಹೆಂಡತಿ ಚಿನ್ನ ಗಿರಿವಿಯಿಟ್ಟು ದಂಡ ಕಟ್ಟಿದೆ: ವರಮಹಾಲಕ್ಷ್ಮಿ ಹಬ್ಬದ ದಿನವೇ ಹೆಂಡತಿಯ ಚಿನ್ನಾಭರಣಗಳನ್ನು ಅಡವಿಟ್ಟಿದ್ದೇನೆ. ಚಿನ್ನ ಗಿರವಿಗೆ ಇಟ್ಟು ಇಲಾಖೆಗೆ ದಂಡ ಕಟ್ಟಿದ್ದೇನೆ. ರಾಮಲಲ್ಲಾ ಮೂರ್ತಿ ಆಗಿ ಅದು ಈಗ ರೂಪುಗೊಂಡಿದೆ. ನನಗೆ ಈವರಗೆ ಯಾರೂ ಸಹಾಯ ಮಾಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ ಶ್ರೀನಿವಾಸ್‌.

ರಾಮಲಲ್ಲಾ ವಿಗ್ರಹದ ಶಿಲೆಯನ್ನು ತೆಗೆದುಕೊಟ್ಟ ನನ್ನ ಕಷ್ಟ ಇನ್ನೂ ತೀರಿಲ್ಲ. ನನಗೂ ಯಾರಾದರೂ ಸಹಾಯ ಮಾಡುತ್ತಾರೆಯೇ ಎಂದು ಎದುರು ನೋಡುತ್ತಿದ್ದೇನೆ ಎಂದು ಗುತ್ತಿಗೆದಾರ ಶ್ರೀನಿವಾಸ್ ತನ್ನ ನೋವನ್ನು ತೋಡಿಕೊಂಡಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...