Please assign a menu to the primary menu location under menu

NEWSದೇಶ-ವಿದೇಶನಮ್ಮಜಿಲ್ಲೆಸಂಸ್ಕೃತಿ

ರಾಮನ ಮೂರ್ತಿಗೆ ಶಿಲೆಕೊಟ್ಟವನಿಗೆ 80 ಸಾವಿರ ದಂಡ: ಮಾಡದ ತಪ್ಪಿಗೆ ಕಣ್ಣೀರು ಹಾಕುತ್ತಿರುವ ಗುತ್ತಿಗೆದಾರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಂಡು ಕೋಟ್ಯಂತರ ಭಕ್ತರು ಕೈ ಮುಗಿಯುತ್ತಿರುವ ರಾಮಲಲ್ಲಾ ಮೂರ್ತಿ ಹಿಂದೆ ಕಣ್ಣೀರ ಕಥೆಯೊಂದು ಬೆಳಕಿಗೆ ಬಂದಿದೆ. ಅಯೋಧ್ಯೆಗೆ ರಾಮಲಲ್ಲಾ ಶಿಲೆ ನೀಡಿದ ವ್ಯಕ್ತಿ ಈಗ ಕಣ್ಣೀರು ಹಾಕುತ್ತಿರುವುದು ಪ್ರಧಾನಿ ಅವರ ಬಂದಿಲ್ಲವೇ ಎಂಬುವುದು ಯಕ್ಷಪತ್ರಶ್ನೆಯಾಗಿದೆ.

ಹೌದು! ನೋಡಿ ರಾಮಲಲ್ಲಾ ಶಿಲೆ ನೀಡಿದ ವ್ಯಕ್ತಿಗೆ 80 ಸಾವಿರ ರೂಪಾಯಿ ದಂಡ ವಿಧಿಸುವ ಮೂಲಕ ಆತನ ವಿರುದ್ಧ ಗಣಿಗಾರಿಕೆ ಮಾಡಿರುವ ಆರೋಪವನ್ನು ಹೊರಿಸಲಾಗಿದೆ. ರಾಮನ ಮೂರ್ತಿಗಾಗಿ ಶಿಲೆ ಕೊಟ್ಟ ಗುತ್ತಿಗೆದಾರ ಶ್ರೀನಿವಾಸ್‌ಗೆ 80 ಸಾವಿರ ದಂಡ ವಿಧಿಸಲಾಗಿದೆ.

ಶ್ರೀನಿವಾಸ್ ಮೈಸೂರಿನ ಹಾರೋಹಳ್ಳಿ- ಗುಜ್ಜೇಗೌಡನಪುರ ಗ್ರಾಮದ ನಿವಾಸಿಯಾಗಿದ್ದು, ತನ್ನ ಹೆಂಡತಿಯ ಚಿನ್ನಾಭರಣಗಳನ್ನು ಅಡವಿಟ್ಟು ದಂಡ ಕಟ್ಟಿದ್ದೇನೆ ಎಂದು ಅಳಲು ತೋಡಿಕೊಂಡಿದ್ದಾರೆ.

ಗಣಿಗಾರಿಕೆ ಮಾಡಿದ್ದಕ್ಕೆ ದಂಡ: ಇತ್ತ ಭೂ ಮಾಲೀಕ ರಾಮದಾಸ್ ಅವರು ಭೂಮಿ ಒಳಗಿದ್ದ ಬಂಡೆ ತೆಗೆಯುವಂತೆ ಶ್ರೀನಿವಾಸ್​ಗೆ ಗುತ್ತಿಗೆ ನೀಡಿದ್ದರು. ಅದರಂತೆಯೇ ಆ ಕಲ್ಲನ್ನು ಹೊರಕ್ಕೆ ತೆಗೆದು ಜಮೀನಿನ ಪಕ್ಕದಲ್ಲಿ ಇಟ್ಟಿದ್ದೆ. ಆ‌ ವೇಳೆ ಸ್ಥಳಕ್ಕೆ ಬಂದ ಅಧಿಕಾರಿಗಳು ಗಣಿಗಾರಿಕೆ ಅಂತ ಆರೋಪ ಮಾಡಿ 80 ಸಾವಿರ ರೂಪಾಯಿ ದಂಡವನ್ನು ನನ್ನಿಂದ ಕಟ್ಟಿಸಿಕೊಂಡಿದ್ದಾರೆ ಎಂದು ತನಗಾದ ಅನ್ಯಾಯವನ್ನು ಹೇಳಿಕೊಂಡಿದ್ದಾರೆ.

ಹೆಂಡತಿ ಚಿನ್ನ ಗಿರಿವಿಯಿಟ್ಟು ದಂಡ ಕಟ್ಟಿದೆ: ವರಮಹಾಲಕ್ಷ್ಮಿ ಹಬ್ಬದ ದಿನವೇ ಹೆಂಡತಿಯ ಚಿನ್ನಾಭರಣಗಳನ್ನು ಅಡವಿಟ್ಟಿದ್ದೇನೆ. ಚಿನ್ನ ಗಿರವಿಗೆ ಇಟ್ಟು ಇಲಾಖೆಗೆ ದಂಡ ಕಟ್ಟಿದ್ದೇನೆ. ರಾಮಲಲ್ಲಾ ಮೂರ್ತಿ ಆಗಿ ಅದು ಈಗ ರೂಪುಗೊಂಡಿದೆ. ನನಗೆ ಈವರಗೆ ಯಾರೂ ಸಹಾಯ ಮಾಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ ಶ್ರೀನಿವಾಸ್‌.

ರಾಮಲಲ್ಲಾ ವಿಗ್ರಹದ ಶಿಲೆಯನ್ನು ತೆಗೆದುಕೊಟ್ಟ ನನ್ನ ಕಷ್ಟ ಇನ್ನೂ ತೀರಿಲ್ಲ. ನನಗೂ ಯಾರಾದರೂ ಸಹಾಯ ಮಾಡುತ್ತಾರೆಯೇ ಎಂದು ಎದುರು ನೋಡುತ್ತಿದ್ದೇನೆ ಎಂದು ಗುತ್ತಿಗೆದಾರ ಶ್ರೀನಿವಾಸ್ ತನ್ನ ನೋವನ್ನು ತೋಡಿಕೊಂಡಿದ್ದಾರೆ.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ