ಬೆಂಗಳೂರು: ವಿಶ್ವ ಪಾರಂಪರಿಕ ಲಾಲ್ಬಾಗ್ ಹೂದೋಟದಲ್ಲಿ ಮೇ 4ರ ಭಾನುವಾರ ಬೆಳಗ್ಗೆ 8 ಗಂಟೆಗೆ ಇಪಿಎಸ್ ಪಿಂಚಣಿದಾರರ 88ನೇ ಮಾಸಿಕ ಸಭೆ ನಡೆಯಲಿದೆ ಎಂದು ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ಈ ಮಾಸಿಕ ಸಭೆಯನ್ನು ಇತ್ತೀಚೆಗೆ ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರಿಂದ ಮಡಿದ 26 ಮಂದಿ ಭಾರತೀಯ ನಾಗರಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಪ್ರಾರಂಭಿಸಲಾಗುವುದು. ಮಾಸಿಕ ಸಭೆಯನ್ನು ನಡೆಸುವ ಉದ್ದೇಶ, ಇಪಿಎಸ್ ನಿವೃತ್ತರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಿ ನ್ಯಾಯಕ್ಕಾಗಿ ನಡೆಸುವ ಹೋರಾಟವಾಗಿದೆ.
ಏಪ್ರಿಲ್ 28, 2025 ರಂದು ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ, ಇಪಿಎಸ್ ನಿವೃತ್ತರು ನಡೆಸಿದ ಪ್ರತಿಭಟನಾ ಸಭೆ ಹಾಗೂ ಮನವಿ ಸಲ್ಲಿಸುವ ಕಾರ್ಯಕ್ರಮ ಅತ್ಯಂತ ಪರಿಣಾಮಕಾರಿಯಾಗಿತ್ತು. ದೇಶಾದ್ಯಂತ ಇರುವ ಇಪಿಎಸ್ ನಿವೃತ್ತರು ಮಾತ್ರವಲ್ಲದೆ ಸಾರ್ವಜನಿಕ ವಲಯದಲ್ಲಿಯೂ ಸಹ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲಾ ನಿವೃತ್ತರಿಗೆ ಅಭಿನಂದನೆಗಳು.
ಕನಿಷ್ಠ ಹೆಚ್ಚುವರಿ ಪಿಂಚಣಿ ಹಾಗೂ ಅಧಿಕ ಪಿಂಚಣಿ ಈ ಎರಡು ಅಂಶಗಳಿಗೆ ಸಂಬಂಧಿಸಿದಂತೆ ನಮ್ಮ ಸಂಘಟನೆಯು ಕಟಿಬದ್ಧವಾಗಿದ್ದು, ಇಪಿಎಫ್ಒ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರವನ್ನು ಬಡಿದೆಬ್ಬಿಸುವ ಸಲುವಾಗಿ, ಇದೇ ಮೇ ತಿಂಗಳಿನಲ್ಲಿ ಸೂಕ್ತ ದಿನಾಂಕದಂದು, ಪೊಲೀಸ್ ಅನುಮತಿ ಪಡೆದು, ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಬಗ್ಗೆ, ಈ ಮಾಸಿಕ ಸಭೆಯಲ್ಲಿ ಚರ್ಚಿಸಲಾಗುವುದು.
ರಾಷ್ಟ್ರೀಯ ಸಂಘರ್ಷ ಸಮಿತಿ ಮುಖ್ಯಸ್ಥರಾದ ಕಮಾಂಡರ್ ಅಶೋಕ್ ರಾಹುತ್ ಅವರು ಇಪಿಎಸ್ ನಿವೃತ್ತರ ಪರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವು ಅತ್ಯಂತ ವಿವೇಚನಾಯುತವಾಗಿದ್ದು, ಒಂದು ವೇಳೆ ನಿವೃತ್ತರ ಬೇಡಿಕೆಗಳನ್ನು ಕೇಂದ್ರ ಸರ್ಕಾರವು ಈಡೇರಿಸಲು ವಿಳಂಬ ನೀತಿ ಅನುಸರಿಸಿದಲ್ಲಿ, ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಲುಕಬೇಕಾಗುತ್ತದೆ. ಏನೇ ಆಗಲಿ, ಕೇಂದ್ರ ಸರ್ಕಾರ ನಮ್ಮ ನಾಯಕರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲೇಬೇಕು.
ಎನ್ಎಸಿ ರಾಜ್ಯಾಧ್ಯಕ್ಷ ಜಿಎಸ್ಎಂ ಸ್ವಾಮಿ ಅವರು ಈ ಮಾಸಿಕ ಸಭೆಯಲ್ಲಿ ನಿವೃತ್ತರ ಉದ್ದೇಶಿಸಿ ಮಾತನಾಡಲಿದ್ದಾರೆ. ನಮ್ಮ ಸಂಘದ ಎಲ್ಲ ಪದಾಧಿಕಾರಿಗಳು, ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟಿನ ಪದಾಧಿಕಾರಿಗಳು, ಸದಸ್ಯರು, ಎಚ್ಎಂಟಿ, ಕಿರ್ಲೋಸ್ಕರ್, ಲಿಡ್ಕರ್, ಎಸ್ಕಾರ್ಟ್ ನಿವೃತ್ತರು ಭಾಗವಹಿಸಲಿದ್ದು ಮುಖಂಡರು ಇತ್ತೀಚಿನ ಎಲ್ಲ ಬೆಳವಣಿಗೆಗಳು ಹಾಗೂ ಮುಂದಿನ ಹೋರಾಟದ ರೂಪರೇಷೆಯ ಬಗ್ಗೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ತಾವೆಲ್ಲರೂ ಈ ಮೇಲ್ಕಂಡ ಎಲ್ಲ ಅಂಶಗಳ ಬಗ್ಗೆ ಚರ್ಚಿಸೋಣ. ಎಲ್ಲ ನಿವೃತ್ತ ನೌಕರರುಭಾನುವಾರ ಬೆಳಗ್ಗೆ 8 ಸೇರೋಣ ಬನ್ನಿ ಎಂದು ಮನವಿ ಮಾಡಿದ್ದಾರೆ.
Related

You Might Also Like
ರಸ್ತೆ ಅಪಘಾತ ತಡೆ, ಅನಧಿಕೃತ ಹೆದ್ದಾರಿ ಫಲಕಗಳ ತೆರವಿಗೆ ಕ್ರಮ ಕೈಗೊಳ್ಳಿ: ಡಿಸಿ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಡೆಗಟ್ಟಲು ಕ್ರಮಬದ್ಧ ಯೋಜನೆ ರೂಪಿಸಿ...
ಆಹಾರ ಘಟಕಗಳ ಮೇಲೆ ತಪಾಸಣೆ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು
ಬೆಂಗಳೂರು ಗ್ರಾಮಾಂತರ: ಆಹಾರ ಘಟಕಗಳಾದ ಹೋಟೆಲ್, ಡಾಬಾ, ಬೇಕರಿ, ಬೀದಿಬದಿ, ರಸ್ತೆ ಬದಿ ಕ್ಯಾಂಟೀನ್, ಇತರೆ ಆಹಾರ ಸಂಬಂಧಿತ ಘಟಕಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಸುರಕ್ಷತೆ ಮತ್ತು...
ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಸ್ಪತ್ರೆ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು: ಜಂಟಿ ಹೇಳಿಕೆಯಲ್ಲಿ ಒತ್ತಾಯ
ಮೈಸೂರು: ರಾಜ್ಯದ ರೈತರ ಹಿತಕ್ಕಾಗಿ ಸೇವೆ ಸಲ್ಲಿಸುತ್ತಾ ಬದುಕನ್ನು ಕಳೆದಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ಆಸ್ಪತ್ರೆಯ ಎಲ್ಲ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕು ಎಂದು...
ಜೂ. 27ರಂದು ಕನಿಷ್ಠ ₹7,500 ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ
ಬೆಂಗಳೂರು: ಕನಿಷ್ಠ ₹7,500 ನಿಗದಿ ಪಡಿಸಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇದೇ ಜೂ. 27ರಂದು ಬೆಳಗ್ಗೆ 10:30ಕ್ಕೆ "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರು...
KSRTC ಕೋಲಾರ: ನೌಕರರ ದುಡಿಮೆಗೆ ತಕ್ಕ ವೇತನಕೊಡದೆ ಕಾಡುತ್ತಿರುವ ಡಿಸಿ, ಡಿಟಿಒಗಳ ಅಮಾನತು ಮಾಡಿ- ಸಾರಿಗೆ ಸಚಿವರಿಗೆ ಸೈಕಲ್ ರೆಡ್ಡಿ ಪತ್ರ
ಕೋಲಾರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೋಲಾರ ವಿಭಾಗದ ನಿಯಂತ್ರಣಾಧಿಕಾರಿಗಳ ಅಧಿಕಾರ ದುರ್ಬಳಕೆ, ನೌಕರರಿಗೆ ಕಿರುಕುಳ ಮತ್ತು ಲಂಚಾವತಾರ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು...
KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕನಿಗೆ ₹15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟ ನೌಕರ ಸುರೇಶ್ ಬಾಬು, ಮತ್ತೊಬ್ಬ ಸಿಬ್ಬಂದಿ ಕಿರುಕುಳ: ಆರೋಪ
ದೊಡ್ಡಬಳ್ಳಾಪುರ: KSRTC ದೊಡ್ಡಬಳ್ಳಾಪುರ ಘಟಕದ ಚಾಲಕ ಕಂ ನಿರ್ವಾಹಕ ಹನುಮಂತರಾಯ ಜಳಕಿ ಎಂಬುವರಿಗೆ ಡೀಸೆಲ್ ವಿಭಾಗದ ನೌಕರ ಸುರೇಶ್ ಬಾಬು ಮತ್ತು ಇನ್ನೊಬ್ಬ ಸಿಬ್ಬಂದಿ ಲಂಚಕ್ಕೆ ಬೇಡಿಕೆ...
ನಿವೃತ್ತಿಗೆ ಮುನ್ನವೇ ನೌಕರರ ವಿಚಾರಣೆ ಮುಗಿದಿರಬೇಕು ಇಲ್ಲದಿದ್ದಲ್ಲಿ ಅಧಿಕಾರಿಗಳ ವಿರುದ್ಧವೇ ಶಿಸ್ತು ಕ್ರಮದ ಖಡಕ್ ಎಚ್ಚರಿಕೆ
ಬೆಂಗಳೂರು: ವೃತ್ತಿಯಲ್ಲಿರುವ ಸಂದರ್ಭದಲ್ಲಿ ದುರ್ನಡತೆ, ಕರ್ತವ್ಯಲೋಪದಂತಹ ಆರೋಪಗಳನ್ನು ಎದುರಿಸುವ ಸರ್ಕಾರಿ ನೌಕರರು, ಅವರು ನಿವೃತ್ತರಾಗುವ ಮುನ್ನವೇ ಅವರ ವಿರುದ್ಧದ ಪ್ರಕರಣಗಳನ್ನು ಇತ್ಯರ್ಥ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ...
KSRTC ನೌಕರರ ವೇತನ ಹೆಚ್ಚಳಕ್ಕೆ ಜೆಡಿಎಸ್ ಮುಖಂಡ, ವಕೀಲ ಶಂಕರೇಗೌಡ ಆಗ್ರಹ
ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್ ಮುಖಂಡರು ಆಗ್ರಹಿಸಿದ್ದಾರೆ....
ಮೈಸೂರು: ಶೀಘ್ರದಲ್ಲೇ ಕಬಿನಿ ನೀರು ಹೊರ ವಲಯ ಬಡಾವಣೆಗಳಿಗೆ ಪೂರೈಕೆ: ಶಾಸಕ ಜಿಟಿಡಿ
ಮೈಸೂರು: ಶೀಘ್ರದಲ್ಲೇ ಕಬಿನಿ ನದಿಯಿಂದ ನಗರದ ಹೊರ ವಲಯ ಬಡಾವಣೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ರೂಪಾ ನಗರದಲ್ಲಿ ಸ್ಥಳೀಯ...