CrimeNEWSದೇಶ-ವಿದೇಶ

ಸ್ಕೂಲ್ ಪಕ್ಕದ ಉದ್ಯಾನದಲ್ಲೇ ಟೆಂಟ್ ಹಾಕಿ ಸೆಕ್ಸ್ ದಂಧೆ

ಸಿರಿಂಜ್, ಡ್ರಗ್ಸ್, ಕಾಂಡೋಮ್ ಪತ್ತೆ l ಡ್ರಗ್ಸ್ ನಶೆಯಲ್ಲಿ ದಾಂಡೆನಾಂಗ್ ಸ್ಟ್ರೀಟ್ ಜನರು

ವಿಜಯಪಥ ಸಮಗ್ರ ಸುದ್ದಿ

ಮೆಲ್ಬೋರ್ನ್: ಶಾಲೆಯ ಅನತಿ ದೂರದಲ್ಲಿರುವ ಉದ್ಯನದಲ್ಲಿ ಟೆಂಟ್ ಹಾಕಿ ಸೆಕ್ಸ್ ದಂಧೆ ನಡೆಯುತ್ತಿರುವ ಘಟನೆ ಮೆಲ್ಬೋರ್ನ್ ನ ಪಶ್ಚಿಮ ದಾಂಡೆನಾಂಗ್ ನಗರದ ಹೆಮ್ಮಿಂಗ್ ಸ್ಟ್ರೀಟ್‌ನಲ್ಲಿ ನಡೆದಿದೆ.

ಇತ್ತೀಚೆಗೆ ಈ ಸ್ಥಳದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ದಾಂಡೆನಾಂಗ್ ಸ್ಟ್ರೀಟ್ ಜನರು ಡ್ರಗ್ಸ್ ನಶೆಯಲ್ಲಿ ತೇಲಾಡುತ್ತಾರೆ. ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ.  ಶಾಲೆಯ ಸಮೀಪದ ಪಾರ್ಕ್, ಮಕ್ಕಳ ಪ್ಲೇ ಗ್ರೌಂಡ್ ಬಳಿ ನಡೆಯುತ್ತಿರುವ ಈ ರೀತಿಯ ಅನೈತಿಕ ಚಟುವಟಿಕೆಗಳನ್ನು ನಿಯಂತ್ರಿಸಬೇಕಿದೆ ಎಂದು  ಸ್ಥಳೀಯ ವ್ಯಾಪಾರಿಯೊಬ್ಬರು ಆಗ್ರಹಿಸಿದ್ದಾರೆ.

ಕೆಲ ಅಪರಿಚಿತರು ಬಂದು ತಾತ್ಕಾಲಿಕ ಟೆಂಟ್ ಹಾಕಿ ಲೈಂಗಿಕ ಕ್ರಿಯೆ, ಮಾದಕ ವಸ್ತುಗಳ ಸೇವನೆಯಲ್ಲಿ ತೊಡಗುತ್ತಾರೆ. ಇನ್ನು ಪಾರ್ಕ್‌ನಲ್ಲಿ ಸ್ಲೀಪಿಂಗ್ ಬ್ಯಾಗ್ಸ್, ಕಾಂಡೋಮ್, ಸಿರಿಂಜ್, ಡ್ರಗ್ಸ್ ಪ್ಯಾಕೇಟ್ ಗಳು ಪತ್ತೆಯಾಗಿವೆ. ನಾಲ್ಕು ತಿಂಗಳಿನಿಂದ ಈ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಸ್ಥಳೀಯ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೆಸರು ಹೇಳಲು ಇಚ್ಛಿಸದ ಮಹಿಳೆ ಹೇಳಿದ್ದಾರೆ.

ಇನ್ನು ಈ ಬಗ್ಗೆ ಪೊಲೀಸರು ಮತ್ತು ಸಬಂಧ ಪಟ್ಟ ಅಧಿಕಾರಿಗಳು ಕ್ರಮ ಜರುಗಿಸದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ವಿಷಯ ಪೊಲೀಸರಿಗೆ ತಿಳಿದಿದಿಯೋ ಅಥವಾ ಗೊತ್ತಿದ್ದು ಗೊತ್ತಿಲ್ಲದಂತೆ  ವರ್ತಿಸುತ್ತಿದ್ದಾರೋ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಈ ರೀತಿಯ ಚಟುವಟಿಕೆಗಳಿಂದ ನಮ್ಮ ಅಕ್ಕಪಕ್ಕದ ಯುವಕರು ಕೆಟ್ಟದಾರಿ ತುಳಿಯುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್