NEWSದೇಶ-ವಿದೇಶಸಂಸ್ಕೃತಿ

ಸಕಲ ಸರ್ಕಾರಿ ಗೌರವದೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅಂತ್ಯಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರ ಅಂತ್ಯಕ್ರಿಯೆ ಇಲ್ಲಿನ ಲೋದಿ ರಸ್ತೆಯಲ್ಲಿ ಚಿತಾಗಾರಾದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಿದರು.

ಪಿಪಿಇ ಕಿಟ್ ಧರಿಸಿದ ಕುಟುಂಬದ ಸದಸ್ಯರು, ಸಂಬಂಧಿಕರು ಅಂತಿಮ ವಿಧಿ ವಿಧಾನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನು ಸಮರ್ಪಿಸಲಾಯಿತು.

ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಾರ್ವಜನಿಕರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡರು. ಈ ವೇಳೆ ಆರು ಅಡಿ ಅಂತರ ಕಾಯ್ದುಕೊಳ್ಳುವುದರೊಂದಿಗೆ ಮಾಸ್ಕ್ ಕಡ್ಡಾಯಪಡಿಸಲಾಗಿತ್ತು.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ದೀರ್ಘಕಾಲದ ಅನಾರೋಗ್ಯದ ನಂತರ ನ್ಯೂಡೆಲ್ಲಿಯ ಆರ್ ಆರ್ ಸೇನಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.ಗಂಭೀರ ಸ್ಥಿತಿಯಲ್ಲಿ ಮುಖರ್ಜಿ ಅವರನ್ನು ಆಗಸ್ಟ್ 10 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಕಾರಣ ತುರ್ತು ಜೀವ ಉಳಿಸುವ ಶಸ್ತ್ರಚಿಕಿತ್ಸೆ ಜತೆಗೆ ಕೋವಿಡ್ ಸೋಂಕಿಗೂ ಒಳಗಾಗಿದ್ದರು.

ಅಜಾತಶತ್ರುವಿನ ಅಂತಿಮ ದರ್ಶನ
ಅಜಾತಶತ್ರು, ದೇಶ ಕಂಡ ಮುತ್ಸದ್ಧಿ ರಾಜಕಾರಣಿ ಪ್ರಣಬ್ ಮುಖರ್ಜಿಯವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪುಷ್ಪನಮನ ಸಲ್ಲಿಸಿದರು.

ಇದಕ್ಕೂ ಮುನ್ನ ರಾಜಾಜಿ ರಸ್ತೆಯಲ್ಲಿರುವ ಪ್ರಣಬ್ ಅವರ ನಿವಾಸಕ್ಕೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ, ವಾಯುಸೇನೆ ಮುಖ್ಯಸ್ಥ ಆರ್.ಕೆ.ಎಸ್. ಭದೌರಿಯಾ, ನೌಕಾಪಡೆ ಮುಖ್ಯಸ್ಥ ಕರಂಬಿರ್ ಸಿಂಗ್ ಅವರು ಅಂತಿಮ ದರ್ಶನ ಪಡೆದರು.

ರಾಜ್ಯದ ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತಿಗಳಾದ ಎಚ್‌.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

1 Comment

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ