NEWSದೇಶ-ವಿದೇಶ

ಭಾರತ-ಚೀನಾ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ನರವಾಣೆ

ವಿಜಯಪಥ ಸಮಗ್ರ ಸುದ್ದಿ

ಲೇಹ್: ಭಾರತ ಮತ್ತು ಚೀನಾ ಗಡಿ ಹಂಚಿಕೊಂಡಿರುವ ಪೂರ್ವ ಲಡಾಕ್‍ನಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಲಾಗಿದೆ. ಜತೆಗೆ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಭಾರತೀಯ ಭೂ ಸೇನಾಪಡೆ ಮುಖ್ಯಸ್ಥ ಎಂ.ಎಂ.ನರವಾಣೆ ಶುಕ್ರವಾರ ತಿಳಿಸಿದ್ದಾರೆ.

ಸೇನಾಪಡೆಗಳನ್ನು ಹಿಂತೆಗೆದುಕೊಳ್ಳುವ ಬಣ್ಣದ ಮಾತುಗಳನ್ನು ಆಡಿ, ಚೀನಾ ಎರಡು ಬಾರಿ ಭಾರತದ ಭೂ ಪ್ರದೇಶಗಳನ್ನು ವಶಪಡಿಸಿಕೊಳ್ಳಲು ಯತ್ನಿಸಿತು. ಇದರಿಂದ ಗಡಿಯಲ್ಲಿ ಯುದ್ಧದ ರೀತಿಯ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ನಾನು ನಿನ್ನೆಯಷ್ಟೇ ಲಡಾಖ್‌ಗೆ ಭೇಟಿ ನೀಡಿ ಗಡಿ ಪರಿಸ್ಥಿತಿ ಪರಿಶೀಲನೆ ನಡೆಸಿದ್ದೇನೆ. ಜತೆಗೆ ಅಲ್ಲಿನ ಹಲವು ಪ್ರದೇಶಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ಜೆಸಿಒಗಳೊಂದಿಗೆ ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

ಗಡಿ ಬಗ್ಗೆ ಯಾವುದೇ ರೀತಿಯ ಸವಾಲುಗಳು ಎದುರಾದರೂ ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ. ಇನ್ನು ಯೋಧರ ನೈತಿಕ ಸ್ಥೈರ್ಯ ಹೆಚ್ಚಾಗಿದೆ. ನಮ್ಮ ಯೋಧರು ಅತ್ಯುತ್ತಮರು. ಹೀಗಾಗಿ ಸುರಕ್ಷತೆ ಹಾಗೂ ಭದ್ರತೆಗಾಗಿ ನಾವು ಕೆಲವು ಮುನ್ನೆಚ್ಚರಿಕೆ ಯೋಜನೆಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

ಆಗಸ್ಟ್ 29-30ರ ಮಧ್ಯ ರಾತ್ರಿ, ಲಡಾಖ್‌ನ ಚುಶುಲ್ ಬಳಿಯ ದಕ್ಷಿಣದ ದಂಡೆಯ ಪಾಂಗೋಂಗ್ ಬಳಿ ಭಾರತೀಯ ಪ್ರದೇಶವನ್ನು ಅತಿಕ್ರಮಣ ಮಾಡಲು ಚೀನಾದ ಸೇನೆ ಪ್ರಯತ್ನ ನಡೆಸಿತ್ತು. ಈ ಪ್ರಯತ್ನವನ್ನು ಭಾರತೀಯ ಸೇನಾ ಪಡೆ ವಿಫಲಗೊಳ್ಳುವಂತೆ ಮಾಡಿತ್ತು.

ಚೀನಾ ಸೈನ್ಯ ಅತಿಕ್ರಮ ಮಾಡುವ ಪ್ರಯತ್ನಗಳನ್ನು ಭಾರತೀಯ ಪಡೆಗಳು ವಿಫಲಗೊಳಿಸಿದ ನಂತರ ಭಾರತೀಯ ಸೇನೆ ಮತ್ತು ಚೀನಾ ಸೇನೆ ನಡುವೆ ಬ್ರಿಗೇಡಿಯರ್ ಮಟ್ಟದ ಮಾತುಕತೆ ನಡೆಯುತ್ತಿದೆ. ಆದರೂ ಉಭಯ ರಾಷ್ಟ್ರಗಳ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಂಡಿದೆ.

Leave a Reply

error: Content is protected !!
LATEST
ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ