NEWSನಮ್ಮಜಿಲ್ಲೆನಮ್ಮರಾಜ್ಯ

ಶೀಘ್ರದಲ್ಲೇ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಒಂದೆರಡು ತಿಂಗಳ ಬಳಿಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಶಿಕ್ಷಣ ಇಲಾಖೆ ಹಾಗೂ ಗೃಹ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿ ಹಲವು ಹುದ್ದೆಗಳು ಖಾಲಿ ಇದ್ದರೂ ಸರಿಯಾಗಿ ನೇಮಕಾತಿ ಮಾಡುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಯೋಮಿತಿ ಮೀರುತ್ತಿರುವ ನಿರುದ್ಯೋಗಿ ಯುವಕರನ್ನೊಳಗೊಂಡಂತೆ ಉದ್ಯೋಗಾಕಾಂಕ್ಷಿಗಳ ಆಕ್ರೋಶ ಹೆಚ್ಚಾಗಿತ್ತು.

ಈ ನಡುವೆ ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಅವರು, ಶೀಘ್ರದಲ್ಲೇ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ಮಾಡುತ್ತೇವೆ. ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಳ ಕುರಿತು ನಿನ್ನೆ ಅಂದರೆ ಗುರುವಾರ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಹೇಳಿದರು.

ಇನ್ನು ಪೊಲೀಸ್ ಇಲಾಖೆಯಲ್ಲಿ 17 ಸಾವಿರ ಹುದ್ದೆಗಳು ಖಾಲಿ ಇವೆ. 2 ವರ್ಷದಿಂದ ನನೆಗುದಿಗೆ ಬಿದ್ದಿದ್ದ ಪಿಎಸ್‌ಐ ನೇಮಕಾತಿ ನಡೆದಿದೆ. 900ಕ್ಕೂ ಹೆಚ್ಚು ಸಬ್‌ಇನ್ಸ್‌ಪೆಕ್ಟರ್‌ಗಳನ್ನು ನೇಮಕ ಮಾಡಲಾಗಿದೆ. ಅವರೆಲ್ಲ ತರಬೇತಿಯಲ್ಲಿದ್ದು ಒಂದೆರಡು ತಿಂಗಳಲ್ಲಿ ಬರುತ್ತಾರೆ. ಅವರು ಬಂದ ನಂತರ ಕಾನ್ಸ್ ಟೇಬಲ್ ಹುದ್ದೆ ನೇಮಕಾತಿಗೆ ಅಧಿಸೂಚನೆ ಹೊರಡಿಸುತ್ತೇವೆ ಎಂದರು.

Megha
the authorMegha

Leave a Reply

error: Content is protected !!
Latest news
KSRTC ಹಾವೇರಿ: ಮಾ.29ರಂದು ನೌಕರರ ಸಮಸ್ಯೆ, ಬೇಡಿಕೆ ಈಡೇರಿಕೆ ಕುರಿತು ಹೋರಾಟ ರೂಪಿಸಿಲು ಕೂಟದ ಪದಾಧಿಕಾರಿಗಳ ಸಭೆ KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ ಸ್ವಪಕ್ಷೀಯ ಸಚಿವರೇ ಸರ್ಕಾರಿ ಜಮೀನು ನುಂಗಿದ್ದಾರೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ ಟ್ರಂಪ್‌ ಕದನ ವಿರಾಮ ಘೋಷಣೆ ಬೆನ್ನಲ್ಲೇ ಇಳಿಕೆಯಾಗಿದ್ದ ಕಚ್ಚಾ ತೈಲ ಬೆಲೆ ಮತ್ತೆ ಏರಿಕೆ GBA ಉತ್ತರ- ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ: ಆಯುಕ್ತ P.S.ಕುಮಾರ್ ಎಚ್ಚರಿಕೆ ನೌಕರರಿಗೆ ಗುಡ್‌ ನ್ಯೂಸ್: ಏ.1ರಿಂದ ಬದಲಾಗಲಿದೆ ನಿಮ್ಮ ಸಂಬಳ, ಲಾಭ ಹೆಚ್ಚು! ಬೆಲೆ ಕಳೆದುಕೊಂಡ ಕೆಂಪು ಸುಂದರಿ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರ ರೈತರು ಸರ್ಕಾರಿ ಕೆಲಸ ಕೊಡಿಸುವುದಾಗಿ ನೂರಾರು ಅಮಾಯಕರ ನಂಬಿಸಿ 25 ಕೋಟಿ ರೂ. ಸ್ವಾಹ: ದಂಪತಿ ಬಂಧನ, ಹಲವರಿಗೆ ಗಾಳ ! ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಸ್‌ ಡಿಕ್ಕಿ : ನಾಲ್ವರು ಮೃತ- ಹಲವರಿಗೆ ಗಾಯ KSRTC: ಟಿಕೆಟ್‌ ತೋರಿಸದಿದ್ದಕ್ಕೆ ತನಿಖಾ ಅಧಿಕಾರಿಯಿಂದ ವೃದ್ಧನ ಮೇಲೆ ಹಲ್ಲೆ ಆರೋಪ- ಅಧಿಕಾರಿ ವಿರುದ್ಧ FIR ದಾಖಲು