CrimeNEWSನಮ್ಮರಾಜ್ಯರಾಜಕೀಯ

ಡ್ರಗ್ಸ್‌ ಬಲೆಯಲ್ಲಿ ಕಾಂಗ್ರೆಸ್‌ ಕಾರ್ಪೋರೇಟರ್‌ ಮಗ : ವಿಚಾರಣೆಗಾಗಿ ಎನ್‍ಸಿಬಿ ನೋಟಿಸ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದ್ದು, ಬೆಂಗಳೂರಿನ ಕಾಂಗ್ರೆಸ್ ಕಾರ್ಪೋರೇಟರೊಬ್ಬರ ಮಗನಿಗೆ ಎನ್‍ಸಿಬಿ ನೋಟಿಸ್ ಜಾರಿ ಮಾಡಿದೆ.

ಇದು ಸುಶಾಂತ್ ಸಿಂಗ್ ರಜಪೂತ್ ಸಾವಿನ ಕೇಸಿಗೆ ಸಂಬಂಧಿಸಿದ ಡ್ರಗ್ಸ್‌ ಪ್ರಕರಣವಾಗಿದ್ದು, ಕಾರ್ಪೋರೇಟರ್ ಪುತ್ರ ಡಾರ್ಕ್‍ನೆಟ್ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಎನ್‍ಸಿಬಿ  ಮೂರು ದಿನಗಳ ಹಿಂದೆ ರಾಜಾಜಿನಗರದ ಫಸ್ಟ್ ಬ್ಲಾಕ್‍ನಲ್ಲಿರುವ ಕಾರ್ಪೋರೇಟರ್ ಕೇಶವಮೂರ್ತಿ ಅವರ ಮನೆ ಮೇಲೆ ದಾಳಿ ನಡೆಸಿತ್ತು. ಇದೀಗ ಅವರ ಮಗ ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್ ಜಾರಿ ಮಾಡಿದೆ ಎನ್ನಲಾಗುತ್ತಿದೆ.

ಮನೆ ಮೇಲೆ ದಾಳಿ ನಡೆಸಿದ ವೇಳೆ ಎನ್‍ಸಿಬಿ ಅಧಿಕಾರಿಗಳಿಗೆ ಯಾವುದೇ ಸಾಕ್ಷ್ಯ ಲಭ್ಯವಾಗಿರಲಿಲ್ಲ. ಅದಾದ ಬಳಿಕ ಮತ್ತೆ ಇದೀಗ ಬೆಂಗಳೂರಿನ ಎನ್‍ಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಅಗತ್ಯವಿದ್ದರೆ ಹೆಚ್ಚಿನ ವಿಚಾರಣೆಗಾಗಿ ಮುಂಬೈಗೆ ಕರೆದೊಯ್ಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ನನ್ನ ಮಗನಿಗೆ ನೋಟಿಸ್ ವಿಚಾರ ನನಗೆ ಗೊತ್ತಿಲ್ಲ. ಮಗನಿಗೆ 26 ವರ್ಷ, ಡಿಗ್ರಿ ಅಪೂರ್ಣವಾಗಿದೆ. ಇನ್ನು ಇವನಿಗೆ ಸಿನಿಮಾದವರ ಯಾವುದೇ ಲಿಂಕ್ ಇಲ್ಲ. ಮಗ ಜಿಮ್ ಮಾಡಿಕೊಂಡು ಚನ್ನಾಗಿದ್ದಾನೆ ಎಂದು ಕಾರ್ಪೋರೇಟರ್ ಕೇಶವಮೂರ್ತಿ ಹೇಳಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ