NEWSನಮ್ಮಜಿಲ್ಲೆರಾಜಕೀಯ

ಆರ್‌ಎಸ್‌ಎಸ್ ರೀತಿ ನಾವು ಶತ್ರುಗಳ ತಯಾರಿ ಮಾಡಲ್ಲ: ಬಿ.ಕೆ.ಹರಿಪ್ರಸಾದ್‌ ಟಾಂಗ್

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಆರ್‌ಎಸ್‌ಎಸ್ ಮುಖಂಡರ ರೀತಿ ನಾವು ಶತ್ರುಗಳನ್ನು ತಯಾರು ಮಾಡಲ್ಲ ಎಂದು  ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್‌ ಆರ್‌ಎಸ್‌ಎಸ್‌ಗೆ ಟಾಂಗ್ ಕೊಟ್ಟಿದ್ದಾರೆ.

ಭಾನುವಾರ ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಲಾಠಿ ಹಿಡಿದರೆ ಬೇರೆಯವರಿಗೆ ಸಹಾಯವಾಗುತ್ತದೆ. ಆದರೆ ಬೇರೆ ಸಂಘಟನೆಗಳು ಕೆಲವರನ್ನು ಭಯ ಬಿಳಿಸಲು ಲಾಠಿ ಹಿಡಿಯುತ್ತವೆ. ಇದು ದೇಶದ ಭವಿಷ್ಯಕ್ಕೆ ಮಾರಕ ಎಂದು ಹೇಳಿದರು.

ಕಾಂಗ್ರೆಸ್ ಆರ್‌ಎಸ್‌ಎಸ್ ನವರಿಂದ ಕಲಿಯಲು ಏನೂ ಇಲ್ಲ. ಅವರೇ ನಮ್ಮಿಂದ ಸಾಕಷ್ಟು ವಿಷಯಗಳನ್ನು ಕಲಿಯಬೇಕಿದೆ ಎಂದು ವಾಗ್ದಾಳಿ ನಡೆಸಿದರು.

ಆರ್‌ಎಸ್‌ಎಸ್ ಹಾಗೇ ಸೇವಾದಳ ತಯಾರಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್‌ನ‌ ಹಾಗೇ ಶತ್ರುಗಳನ್ನು ನಾವು ತಯಾರು ಮಾಡೋದಿಲ್ಲ. ಆ ರೀತಿ ಸಂಘಟನೆ ನಮಗೆ ಬೇಕಾಗೂ ಇಲ್ಲ. ‌ಕಾಂಗ್ರೆಸ್ ಸಿದ್ಧಾಂತದಡಿಯಲ್ಲಿಇತಿಹಾಸ ಗಮನದಲ್ಲಿಟ್ಟುಕೊಂಡು ದೇಶದ ಅಭಿವೃದ್ಧಿಯ ಮೂಲ ದೃಷ್ಟಿಕೋನದಡಿ ಕಾರ್ಯಕರ್ತರಿಗೆ ಶಿಬಿರದಲ್ಲಿ ತರಬೇತಿ ನೀಡಲಾಗುತ್ತಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಸಮಿತಿ ಮಾಡಿಕೊಂಡು ಪಕ್ಷದ ಕಾರ್ಯಕರ್ತರ ಬೆಳವಣಿಗೆ ದೃಷ್ಟಿಯಿಂದ ಶಿಬಿರ ಮಾಡಲಾಗುತ್ತಿದೆ ಎಂದರು.

ಬೆಳಗಾವಿ ಕಾಂಗ್ರೆಸ್ ಉಸ್ತುವಾರಿ ಪಿ.ವಿ.ಮೋಹನ, ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಇನ್ನಿತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ