NEWSದೇಶ-ವಿದೇಶ

ಸೆ. 25ರಿಂದ ಮತ್ತೆ 46 ದಿನ ಲಾಕ್‌ಡೌನ್‌: ಪಿಐಬಿ ಫ್ಯಾಕ್ಟ್ ಚೆಕ್‌ನಲ್ಲೇನಿದೆ ?

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೇಶದಲ್ಲಿ ಕೋವಿಡ್ ಸೋಂಕು ದಿನೇದಿನೆ ಸರವೇಗದಲ್ಲಿ ಏರುತ್ತಿರುವುದರಿಂದ, ಸೆ. 25ರಿಂದ ಮತ್ತೆ 46 ದಿನಗಳ ದಿಗ್ಬಂಧನ ಹೇರಲಾಗುತ್ತದೆ! ಹೀಗೊಂದು ವದಂತಿ ಸಾಮಾಜಿಕ ತಾಣಗಳಲ್ಲಿ ಜೋರಾಗಿದೆ.

ಆದರೆ ಅದನ್ನು ಸ್ವತಃ ಪ್ರೆಸ್ ಬ್ಯೂರೋ ಆಫ್ ಇಂಡಿಯಾ (ಪಿಐಬಿ) ನಿರಾಕರಿಸಿದೆ. ಅಂತಹ ಯಾವುದೇ ಪ್ರಸ್ತಾವಗಳು ಸರ್ಕಾರದ ಮುಂದಿಲ್ಲ ಎಂದು ಖಚಿತಪಡಿಸಿದೆ.

ಸದ್ಯ ಸಾಮಾಜಿಕ ತಾಣಗಳಲ್ಲಿ, ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ್ದೆಂದು (ಎನ್‌ಡಿಎಂಎ) ಹೇಳಲಾಗಿರುವ ಆದೇಶದ ಪ್ರತಿಯೊಂದು ಓಡಾಡುತ್ತಿದೆ. ಅದರ ಪ್ರಕಾರ, ಎನ್‌ಡಿಎಂಎ, ಯೋಜನಾ ಆಯೋಗದ ಜತೆ ಸೇರಿ, ಸೆ. 25ರ ಮಧ್ಯರಾತ್ರಿಯಿಂದ ಮತ್ತೆ 46 ದಿನಗಳ ಕಾಲ ದಿಗ್ಬಂಧನ ಜಾರಿ ಮಾಡಬೇಕೆಂದು, ಸ್ವತಃ ಪ್ರಧಾನಮಂತ್ರಿ ಕಚೇರಿ, ಕೇಂದ್ರ ಗೃಹಕಚೇರಿಗೇ ನಿರ್ದೇಶನ ನೀಡಿದೆ!

ಹೀಗೆ ಎಲ್ಲೆಡೆ ಮತ್ತೆ ಲಾಕ್ ಡೌನ್ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ, ಎನ್‌ಡಿಎಂಎ ಅಂತಹ ಯಾವುದೇ ಆದೇಶ ಹೊರಡಿಸಿಲ್ಲ ಎಂಬುವುದು  ಪಿಐಬಿ ಫ್ಯಾಕ್ಟ್ ಚೆಕ್ ನಲ್ಲಿ  ತಿಳಿದು ಬಂದಿದೆ.

ಜತೆಗೆ ಇಂತಹ ಯಾವುದೇ ಆದೇಶವನ್ನು  ಕೇಂದ್ರ ಸರ್ಕಾರ ಹೊರಡಿಸಿಲ್ಲ ಎಂದು ಪಿಐಬಿ  ಟ್ವೀಟ್ ಮೂಲಕ ಸ್ಪಷ್ಟಪಡಿಸಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್