NEWS

ರಸ್ತೆ ಗುಂಡಿಗೆ ಮಗು ಬಲಿ: ರಸ್ತೆ ಸರಿಯಿಲ್ಲ ಅಂತಾ ಪ್ರತಿಭಟಿಸಿದವರ ವಿರುದ್ಧವೇ FIR ಅಮಾಯಕರ ವಿರುದ್ಧ ಸರ್ಕಾರದ ದರ್ಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿಯ ಮಹದೇವಪುರದಲ್ಲಿ ರಸ್ತೆ ಗುಂಡಿಗೆ ಮಗು ಬಲಿಯಾಗಿದ್ದಕ್ಕೆ ರಸ್ತೆ ಸರಿಯಿಲ್ಲ ಅಂತಾ ಪ್ರತಿಭಟಿಸಿದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಮಾಯಕರ ವಿರುದ್ಧ ಸರ್ಕಾರ ದರ್ಪತೋರುತ್ತಿದೆ.

ಮಹದೇವಪುರದಲ್ಲಿ ಅವೈಜ್ಞಾನಿಕ ಕಾಮಗಾರಿಗೆ ಎರಡು ವರ್ಷದ ತ್ರಿಶೂಲ್ ಎಂಬ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.16ರಂದು ಹಳೇಹಳ್ಳಿ ರಸ್ತೆ ತಡೆದು ನೂರಾರು ಜನರು ಪ್ರತಿಭಟನೆ ನಡೆಸಿದ್ದರು. ಆದರೀಗ ರಸ್ತೆ ತಡೆದು ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಮಗುವಿನ ಸಂಬಂಧಿಕರು ಸೇರಿ 10ಕ್ಕೂ ಹೆಚ್ಚು ಮಂದಿ ಮೇಲೆ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ.

ರಾಜ್ಯ ಸರ್ಕಾರದ ಈ ಧೋರಣೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಕಂದನ ಕಳೆದುಕೊಂಡ ಸಂಬಂಧಿಕರು ರಸ್ತೆ ಸರಿ ಮಾಡುವಂತೆ ಕೇಳಿಕೊಂಡಿದ್ದು ತಪ್ಪಾ, ನ್ಯಾಯ ಕೊಡಿ ಅಂತ ಕೇಳಿದ್ದೇ ತಪ್ಪಾ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಪೊಲೀಸರಿಗೆ ಈ ರೀತಿ ಹೇಗೆ ಎಫ್‌ಐಆರ್‌ ಹಾಕುಲು ಮನಸ್ಸು ಬಂತು ಇವರ ಮನೆಯಲ್ಲಿ ಈ ರೀತಿಯ ಘಟನೆಯಿಂದ ಪ್ರಾಣಹಾನಿಯಾಗಿದ್ದರೂ ಇದೇ ರೀತಿ ಮಾಡುತ್ತಿದ್ದರಾ ಎಂದು ಜನರು ಪೊಲೀಸರ ನಡೆಗೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಸರ್ಕಾರ ಮಾಡಿರುವ ತಪ್ಪಿಗೆ ಸಂಬಂಧಪಟ್ಟ ಸಚಿವರು ಹಾಗೂ ಸಿಎಂ ಒಳಗೊಂಡಂತೆ ಅಧಿಕಾರಿಗಳ ವಿರುದ್ಧ ಪ್ರಕರಣದಾಖಲಿಸಬೇಕಿತ್ತು. ಕಾರಣ ಖಾಸಗಿ ವ್ಯಕ್ತಿಯ ಸ್ವತ್ತಿನಲ್ಲಿ ಈ ರೀತಿ ಆದರೆ ಯಾರನ್ನು ಹೊಣೆ ಮಾಡುತ್ತಿದ್ದರು ಹೇಳಿ? ಅದೇ ರೀತಿ ಸರ್ಕಾರ ನಡೆಸುತ್ತಿರುವವರನ್ನು ಇದೆಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ...