CRIMENEWSಬೆಂಗಳೂರು

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಟ್ವಿಸ್ಟ್: ವಿಚಾರಣೆ ವೇಳೆ ಪೊಲೀಸರ ಎಡವಟ್ಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳು ಪೊಲೀಸರ ನಡೆಯ ವಿರುದ್ಧ ಕೋರ್ಟ್‌ಗೆ ದಿನಕ್ಕೊಂದು ಅರ್ಜಿ ಸಲ್ಲಿಕೆ ಮಾಡುತ್ತಿದ್ದಾರರ. ನಿನ್ನೆ ಕೋರ್ಟ್‌ಗೆ ಮೂವರು ಆರೋಪಿಗಳು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಅರ್ಜಿಯಲ್ಲಿ ನಮ್ಮ ಮೊಬೈಲ್ ವಶಕ್ಕೆ ಪಡೆಯುವಾಗ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ವಶಕ್ಕೆ ಪಡೆದುಕೊಂಡಿಲ್ಲ. ಬೇರೊಂದು ಜಾಗದಲ್ಲಿ ವಶಕ್ಕೆ ಪಡೆದು ಅದನ್ನು ಕಾಮಾಕ್ಷಿಪಾಳ್ಯ ಎಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ದೋಷಾರೋಪ ಪಟ್ಟಿ ಸಲ್ಲಿಕೆಯಾದಾಗ ಫೋಟೋದಲ್ಲಿ ವೈಟ್ ಕಲರ್ ಟೈಲ್ಸ್ ಇದೆ. ಪೊಲೀಸ್ ಠಾಣೆಯಲ್ಲಿ ಹಳೆಯ ಮಾದರಿ ಮೊಜಾಕ್ ಇದೆ. ಹೀಗಾಗಿ, ಪ್ರಕರಣದ ದಾರಿ ತಪ್ಪಿಸಿದ್ದಾರೆ. ಆದ್ದರಿಂದ ಖುದ್ದಾಗಿ ನ್ಯಾಯಾಧೀಶರೇ ಜೈಲಿಗೆ ಭೇಟಿ ಕೊಡಬೇಕು. ಅಲ್ಲದೇ, ಸ್ಟೇಷನ್ ಸಿಸಿಟಿವಿಯನ್ನು ವಶಕ್ಕೆ ಪಡೆಯಬೇಕು. ಬದಲಾವಣೆ ಮಾಡದಂತೆ ಎಚ್ಚರಿಕೆ ವಹಿಸಬೇಕು ಅಂತ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಅರ್ಜಿ ಸ್ವೀಕಾರ ಮಾಡಿರುವ ನ್ಯಾಯಾಲಯ ವಿಚಾರಣೆ ನಿಗದಿ ಮಾಡಿದೆ. ಅಲ್ಲದೇ, ಮುಂದಿನ ವಿಚಾರಣೆ ತನಕ ಸಿಸಿಟಿವಿಯನ್ನು ನಾಶ ಮಾಡದಂತೆ ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.

Megha
the authorMegha

Leave a Reply

error: Content is protected !!