CRIMENEWSನಮ್ಮಜಿಲ್ಲೆ

ಹೃದಯಾಘಾತ: 9ನೇ ತರಗತಿ ವಿದ್ಯಾರ್ಥಿ ಸಾವು, ಮುಗಿಲು ಮುಟ್ಟಿದ ಆಕ್ರಂದನ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ನಡೆದಿದೆ.

ಮುಜಾಮಿಲ್ (15) ಎಂಬಾತನೆ ಮೃತ 9 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಗೋಗುದ್ದು ಗ್ರಾಮದ ಚಮನ್ ಸಾಬ್ ಹಾಗೂ ಫಾತೀಮಾ ದಂಪತಿಯ ಎರಡನೇ ಪುತ್ರ. ಹನುಮಂತಪುರ ಗ್ರಾಮದ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ ಓದುತ್ತಿದ್ದ.

ರಜೆ ಹಿನ್ನೆಲೆ ವಿದ್ಯಾರ್ಥಿ ಮುಜಾಮಿಲ್ ಮನೆಗೆ ಬಂದಿದ್ದ. ಮನೆಯಲ್ಲಿ ಬೆಳಗಿನ ಜಾವ ಬಹಿರ್ದೆಸೆಗೆ ಹೋಗಿದ್ದಾಗ ಹೃದಯಾಘಾತವಾಗಿದೆ. ಆ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ, ಮಾರ್ಗ ಮಧ್ಯೆ ಬಾಲಕ ಅಸುನೀಗಿದ್ದಾನೆ.

ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಡುವಂತ್ತಿತ್ತು. ಇದು ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದೆ.

Megha
the authorMegha

Leave a Reply

error: Content is protected !!