CRIMENEWSಬೆಂಗಳೂರು

BMTC: ಘಟಕ 22ರಲ್ಲಿ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದ ಬಸ್‌ ಚಲಿಸಿ ಸಂಚಾರ ನಿಯಂತ್ರಕರ ಕಚೇರಿ, ಬೈಕ್‌ಗಳಿಗೆ ಡಿಕ್ಕಿ-ಜಖಂ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್‌ ಹ್ಯಾಂಡ್ ಬ್ರೇಕ್ ಹಾಕದೇ ನಿಲ್ಲಿಸಿದ್ದರಿಂದ ಮುಂದಕ್ಕೆ ಚಲಿಸಿ ಬಿಎಂಟಿಸಿ ಸಂಚಾರ ನಿಯಂತ್ರಕರ ಕಚೇರಿಗೆ ಡಿಕ್ಕಿ ಹೊಡೆದು ಬಳಿಕ ಅಲ್ಲೇ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ದ್ವಿಚಕ್ರ ವಾಹನಗಳಿಗೂ ಗುದ್ದಿದೆ ಪರಿಣಾಮ ಬೈಕ್‌ಗಳು ಜಖಂಗೊಂಡಿದ್ದು ಗೋಡೆ ಬಿದ್ದುಹೋಗಿದೆ.

ಇದು ಇಂದು ಅಂದರೆ ಶುಕ್ರವಾರ ಬೆಳಗ್ಗೆ ಪೀಣ್ಯ ಕೈಗಾರಿಕಾ ಪ್ರದೇಶದ 3ನೇ ಹಂತದ, 3ನೇ ಮುಖ್ಯ ರಸ್ತೆಯಲ್ಲಿರುವ ಬಿಎಂಟಿಸಿ ಘಟಕ 22ರಲ್ಲಿ ಈ ಅಪಘಾತ ಸಂಭವಿಸಿದೆ.

ಖಾಸಗಿ ಒಡಂಬಡಿಕೆಯ ಪ್ರಾವೀಸ್ ಕಂಪನಿಯ ಎಲೆಕ್ಟ್ರಿಕ್‌ ಬಸ್‌ ಚಾಲಕ ಹ್ಯಾಂಡ್‌ ಬ್ರೇಕ್ ಹಾಕದೇ ಬಸ್ ನಿಲ್ಲಿಸಿ ಕೆಳಗೆ ಇಳಿದಿದ್ದರು. ಗೇಟ್‌ನಲ್ಲಿ ಸಹಿ ಹಾಕಿ ವಾಪಸ್ ಬಂದು ಬಸ್ ತೆಗೆಯಬೇಕಿತ್ತು ಅಷ್ಟರೊಳಗೆ ಬಸ್ ಮುಂದಕ್ಕೆ ಚಲಿಸಿ ಈ ಅವಘಡ ನಡೆದಿದೆ.

ಇದರಿಂದ ಸಂಚಾರ ನಿಯಂತ್ರಕರ ಕಚೇರಿ ಹಾಗೂ ಕಚೇರಿ ಬಳಿ ನಿಲ್ಲಿಸಿದ್ದ ಬಿಎಂಟಿಸಿ ಸಿಬ್ಬಂದಿಗಳ ದ್ವಿಚಕ್ರ ವಾಹನಗಳಿಗೆ ಡಿಕ್ಕಿಹೊಡೆದು ಮುಂದಕ್ಕೆ ನುಗ್ಗಿ ಕಚೇರಿಗೂ ಡಿಕ್ಕಿ ಹೊಡೆದಿದೆ.

ಬಸ್‌ ಡಿಕ್ಕಿ ಹೊಡೆದಿರುವ ರಭಸಕ್ಕೆ ಕಚೇರಿಯ ಗೋಡೆ ಬಿರುಕು ಬಿಟ್ಟಿದ್ದು. ಕಿಟಕಿಗಳು ಒಡೆದು ಹೋಗಿದೆ. ದ್ವಿಚಕ್ರವಾಹನಗಳು ಜಖಂಗೊಂಡಿವೆ.

Megha
the authorMegha

Leave a Reply

error: Content is protected !!
Latest news
ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ ಅಡ್ಡ ಮತದಾನ ಮಾಡಿದ್ದು ಯಾರೆಂದು ಗೊತ್ತು: ಮುಂದಿದೆ ಮಾರಿಹಬ್ಬ- ಎಚ್‌ಡಿಕೆ BMTC ಎಂಡಿ ಈಗ KSRTC ವ್ಯವಸ್ಥಾಪಕ ನಿರ್ದೇಶಕ- ಬಿಎಂಟಿಸಿಗೆ ರಘುನಂದನ್ ಮೂರ್ತಿ ನೂತನ ಎಂಡಿ 7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ...