NEWS

ಮೈಸೂರು: ಸಿನಿಮಾ, ಧಾರಾವಾಹಿಯಲ್ಲಿ ಚಾನ್ಸ್‌ ಕೊಡಿಸುವುದಾಗಿ 50 ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಿನಿಮಾ, ಧಾರವಾಹಿಯಲ್ಲಿ ಚಾನ್ಸ್‌ ಕೊಡಿಸುವುದಾಗಿ 50 ಕ್ಕೂ ಹೆಚ್ಚು ಮಹಿಳೆಯರನ್ನು ನಂಬಿಸಿ ಅವರಿಂದ ಹಣ ಸುಲಿಗೆ ಮಾಡಿ ವಂಚಿಸಿರುವ ಘಟನೆ ಅರಮನೆಗಳ ನಗರಿ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

ಗಿರೀಶ್ ಅಲಿಯಾಸ್ ಸಿನಿಮಾ ಗಿರೀಶ್ ಎಂಬಾತನೆ ವಂಚಕನಾಗಿದ್ದು, ಈತನ ವಿರುದ್ಧ ಮೋಸಹೋದ ಮಹಿಳೆಯರು ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ.

ಈತ ಮೈಸೂರಿನ ಗುರುಕಾರ್ ರೇವಣ್ಣ ರಸ್ತೆಯ ನಿವಾಸಿ. ಸಿನಿಮಾ, ಧಾರವಾಹಿಯಲ್ಲಿ ಮಿಂಚಬೇಕು ಎಂಬ ಆಸೆಯಿಂದ ಈತನ ಬಳಿಗೆ ಬಂದ ಬರೋಬ್ಬರಿ 50ಕ್ಕೂ ಹೆಚ್ಚು ಮಹಿಳೆಯರಿಗೆ ಮೋಸ ಮಾಡಿದ್ದಾನೆ. ವಂಚಕ ಮಹಿಳೆಯರನ್ನು ನಂಬಿಸಲು ಮಹಿಳೆಯರಿಂದ ಹಣ ಪಡೆಯುವಾಗ ತಾನೇ ವಿಡಿಯೋ ಮಾಡುತ್ತಿದ್ದ. ಆ ಮೂಲಕ ಮಹಿಳೆಯರ ನಂಬಿಕೆಯನ್ನು ಇನ್ನಷ್ಟು ಗಳಿಸುತ್ತಿದ್ದ. ಈತ ವಂಚನೆ ಮಾತ್ರವಲ್ಲದೇ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮೋಸಕ್ಕೊಳಗಾದ ಕೆಲ ಮಹಿಳೆಯರು ಪೊಲೀಸರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಮೊದಲು ಸಿನಿಮಾ, ಧಾರಾವಾಹಿಗೆ ಕಲಾವಿದರು ಬೇಕಾಗಿದ್ದಾರೆ ಎಂದು ಜಾಹೀರಾತು ನೀಡುತ್ತಿದ್ದ. ಆ ಜಾಹೀರಾತು ನೋಡಿ ಈತನನ್ನು ಭೇಟಿ ಮಾಡಿದವರಿಗೆ ತಾನೇ ಕಥೆ ಹೇಳಿ ಯಾಮಾರಿಸಿದ್ದಾನೆ. ಕೆಲವರಿಗೆ ತಾನು ಪೊಲೀಸ್ ಎಂದು ಕೂಡ ಸುಳ್ಳು ಹೇಳಿದ್ದಾನೆ.

ವಂಚಕನ ಕಟ್ಟುಕತೆಯನ್ನು ನಂಬಿದ ಹಲವರು ಬಳಿಕ ಈತ ಮೋಸಗಾರ ಎಂದು ತಿಳಿದು ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸದ್ಯಕ್ಕೆ ಆರೋಪಿ ಗಿರೀಶ್ ತಲೆ ಮರೆಸಿಕೊಂಡಿದ್ದು, ಪೊಲೀಸರು ಖತರ್ನಾಕ್ ಗಿರೀಶ್‌ನ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ತಮಗೆ ನ್ಯಾಯ ಕೊಡಿಸುವಂತೆ ನಗರ ಪೊಲೀಸ್ ಕಮಿಷನರ್‌ಗೂ ಮಹಿಳೆಯರು ಮನವಿ ಮಾಡಿದ್ದಾರೆ.

1 Comment

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್