NEWSಕೃಷಿನಮ್ಮಜಿಲ್ಲೆ

ಬೆಲೆ ಕಳೆದುಕೊಂಡ ಕೆಂಪು ಸುಂದರಿ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರ ರೈತರು

ವಿಜಯಪಥ ಸಮಗ್ರ ಸುದ್ದಿ

ವಿಜಯನಗರ: ಜಿಲ್ಲೆಯ ಟೊಮ್ಯಾಟೋ ಬೆಳೆಗಾರರ ಸ್ಥಿತಿ ಈಗ ‘ದೇವರಿಗೆ ಪ್ರೀತಿ’ ಎನ್ನುವಂತಾಗಿದೆ. ಕಳೆದ ವಾರವಷ್ಟೇ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 1000 ರಿಂದ 1200 ರೂಪಾಯಿ ಇತ್ತು. ಆದರೆ ಈಗ ಕೇವಲ 80 ರಿಂದ 100 ರೂಪಾಯಿಗೆ ಕುಸಿದಿದೆ.

ಅಂದರೆ, ಅಂದು ರಾಜನಂತೆ ಮಾರುಕಟ್ಟೆಗೆ ಹೋಗುತ್ತಿದ್ದ ರೈತ ಇಂದು ಸಾರಿಗೆ ವೆಚ್ಚವನ್ನೂ ಭರಿಸಲಾಗದ ಸ್ಥಿತಿಗೆ ತಲುಪಿದ್ದಾನೆ. ಟೊಮ್ಯಾಟೋ ಬೆಳೆಗಾರರು ಒಳ್ಳೆ ಬೆಲೆ ಬರುವ ಭರವಸೆಯೊಂದಿಗೆ ದಿನವೂ ಮಾರುಕಟ್ಟೆಗೆ ಬರುತ್ತಿದ್ದರು ಈಗ ಮತ್ತೆ ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ.

ಇತ್ತ ನಗರದಲ್ಲಿ ಟೊಮ್ಯಾಟೋ ಬೆಲೆ ಕುಸಿತದಿಂದ ಆಕ್ರೋಶಗೊಂಡ ರೈತರು ರಸ್ತೆಗೆ ಟೊಮೆಟೊ ಸುರಿದು ಪ್ರತಿಭಟನೆ ನಡೆಸಿದ್ದಾರೆ. ಪಕ್ಕದ ಮೈಸೂರಿನ ಎಪಿಎಂಸಿಯಲ್ಲಿರುವ ದರಕ್ಕಿಂತಲೂ ಕಡಿಮೆ ಬೆಲೆ ಸಿಗುತ್ತಿರುವುದನ್ನು ಖಂಡಿಸಿ, ಮೈಸೂರು ಎಪಿಎಂಸಿ ದರದಲ್ಲಿ ಖರೀದಿಸುವಂತೆ ಆಗ್ರಹಿಸಿದ್ದಾರೆ. ದಲ್ಲಾಳಿಗಳು ಈ ಬೇಡಿಕೆಗೆ ಒಪ್ಪದ ಕಾರಣ, ರೈತರು ಟೊಮ್ಯಾಟೋಗಳನ್ನು ರಸ್ತೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಹೊಸಪೇಟೆ ಸೇರಿದಂತೆ ಜಿಲ್ಲೆಯ ಹಲವೆಡೆ 20 ರೂ.ಗೆ 2 ರಿಂದ 4 ಕೆಜಿ ಟೊಮ್ಯಾಟೋ ಮಾರಾಟವಾಗುತ್ತಿದೆ. ಇದೇ ವಾರದ ಹಿಂದೆ ಒಳ್ಳೆ ಬೆಲೆಯಿದ್ದ ಟೊಮ್ಯಾಟೋ ಇದಿಗ ರೈತರ ಕಣ್ಣೀರಿಗೆ ಕಾರಣವಾಗಿದೆ. ಹೊಸಪೇಟೆ ಮತ್ತು ಸುತ್ತಮುತ್ತಲಿನ ಗ್ರಾಮೀಣ ಭಾಗದ ರೈತರು ಬೆಳೆದ ಫಸಲಿಗೆ ಮಾರುಕಟ್ಟೆಯಲ್ಲಿ ಬೆಲೆಯೇ ಇಲ್ಲದಂತಾಗಿದ್ದು, ಸಂಕಷ್ಟಕ್ಕೀಡಾಗಿದ್ದಾರೆ.

ಟೊಮ್ಯಾಟೋ ಬೆಳೆಗೆ ಹಾಕಿದ ಬಂಡವಾಳ, ಕೂಲಿ ಆಳುಗಳ ಖರ್ಚು ಮತ್ತು ಸಾರಿಗೆ ವೆಚ್ಚ ಭರಿಸಲು ಆಗುತ್ತಿಲ್ಲ. ದಿನನಿತ್ಯ ಸಾಲ ಮಾಡಿ ಮಾರುಕಟ್ಟೆಗೆ ಟೊಮ್ಯಾಟೋ ತರುತ್ತಿರುವ ರೈತರಿಗೆ, ಮಾರುಕಟ್ಟೆಯಲ್ಲಿ ಸಿಗುತ್ತಿರುವ ಕನಿಷ್ಠ ಬೆಲೆಯು ಗಾಯದ ಮೇಲೆ ಬರೆ ಎಳೆದಂತಿದೆ.

ಇನ್ನು ಹೀಗೆ ಒಂದು ವಾರದಿಂದ ಬೆಲೆ ನಿರಂತರವಾಗಿ ಕುಸಿಯುತ್ತಿರುವುದು ರೈತರ ಪಾಲಿಗೆ ನಿದ್ದೆ ಇಲ್ಲದಂತೆ ಮಾಡಿದೆ. ಬೆಲೆ ಹೆಚ್ಚಿದ್ದಾಗ ನಮಗೆ ಫಸಲು ಕೈಸೇರಲಿಲ್ಲ, ಈಗ ಫಸಲು ಬಂದಾಗ ಬೆಲೆ ಇಲ್ಲ. ನಮ್ಮ ಕಷ್ಟ ಕೇಳುವವರೇ ಇಲ್ಲದಂತಾಗಿದೆ ಎಂದು ಜಿಲ್ಲೆಯ ರೈತರು ಅಳಲು ತೋಡಿಕೊಳ್ಳುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ... ಮೇ 20ರ ಪೂರ್ವ ನಿರ್ಧಾರಿತ ಮುಷ್ಕರ ಮಾಡಿ ಪೌರುಷ ತೋರಿಸಿ: ಜಂಟಿ ಸಮಿತಿಗೆ ಒಕ್ಕೂಟದ ಜಯರಾಮ್‌ ರಾಥೋಡ್‌ ಸವಾಲ್‌ KSRTC ನೌಕರರ ಕೂಟ- ಜಂಟಿ ಸಮಿತಿ ಸಭೆ ಸೇರುವ ಬಗ್ಗೆ ಎರಡು ದಿನದಲ್ಲಿ ನಿರ್ಣಯ: ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ಟಿವಿಕೆ ಸರ್ಕಾರ ರಚನೆಗೆ ಸಂಖ್ಯಾಬಲದ ಅಡ್ಡಿ: ರಾಜ್ಯಪಾಲರ ಪವರ್ ಏನು, ಸುಪ್ರೀಂಕೋರ್ಟ್ ವಕೀಲರಾದ ಶಿವರಾಜು ಏನು ಹೇಳುತ್ತಾ... ರಾಜೀನಾಮೆ ನೀಡದೇ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ- ಸರ್ಕಾರ ವಜಾಗೊಳಿಸಿದ ರಾಜ್ಯಪಾಲ KSRTC: ನಿವೃತ್ತರಾದ 25ದಿನದೊಳಗೆ ಭವಿಷ್ಯ ನಿಧಿ ಪಾವತಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳೇ ವಿಳಂಬದ ಬಡ್ಡಿ ಬರಿಸಬೇಕು- ಪ... ಅನ್ನದಾತರಿಗೆ ಸಾಲ ಕೊಡಲು ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿ ಕೈಬಿಡಬೇಕು: ಆರ್‌ಬಿಐ ಅಧಿಕಾರಿಗಳಿಗೆ ಕುರುಬೂರು ಶಾಂತಕ... ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು KSRTC ಸಂಸ್ಥೆಯ ನೌಕರರ ಬಾಳು ಹಸನು ಮಾಡಲು ಸಂಘಟನೆಗಳ ನಾಯಕರು ಒಗ್ಗಟ್ಟಾಗಿ: ಜೀವನ್ ಮಾರ್ಟಿಸ್ ಮನವಿ ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ