NEWSದೇಶ-ವಿದೇಶನಮ್ಮರಾಜ್ಯ

ಟ್ರಂಪ್‌ ಕದನ ವಿರಾಮ ಘೋಷಣೆ ಬೆನ್ನಲ್ಲೇ ಇಳಿಕೆಯಾಗಿದ್ದ ಕಚ್ಚಾ ತೈಲ ಬೆಲೆ ಮತ್ತೆ ಏರಿಕೆ

ವಿಜಯಪಥ ಸಮಗ್ರ ಸುದ್ದಿ

ಲಂಡನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 5 ದಿನದ ಕದನ ವಿರಾಮ ಘೋಷಣೆ ಮಾಡಿದ ಬೆನ್ನಲ್ಲೇ ಒಂದು ಬ್ಯಾರೆಲ್‌ ಕಚ್ಚಾ ತೈಲದ (159 ಲೀಟರ್‌) ದರ ಶೇ.11ರಷ್ಟು ಇಳಿಕೆಯಾಗಿತ್ತು. ಆದರೆ, ಯಾವುದೇ ಸಂಧಾನ ಆಗಿಲ್ಲ ಎಂದು ತಿಳಿದ ಬಳಿಕ ಮತ್ತೆ ಏರಿಕೆಯತ್ತ ಸಾಗಿದೆ.

ಇಂದು ಒಂದು ಬ್ಯಾರೆಲ್‌ ಬ್ರೆಂಟ್‌ ಕಚ್ಚಾ ತೈಲ 109.91 ಡಾಲರ್‌ಗೆ (10,220 ರೂ.) ಏರಿಕೆಯಾಗಿತ್ತು. ಆದರೆ ಟ್ರಂಪ್‌ ಇರಾನ್‌ ಜತೆಗಿನ ಶಾಂತಿ ಮಾತುಕತೆ ಮತ್ತು ಕದನ ವಿರಾಮ ಕುರಿತ ಸುದ್ದಿ ಪ್ರಕಟಿಸಿದ ನಂತರ ಕಚ್ಚಾ ತೈಲ (Crude Oil) ಬೆಲೆ 93 ಡಾಲರ್‌ಗೆ (8,660 ರೂ.) ಇಳಿಕೆಯಾಗಿತ್ತು.

ಟ್ರಂಪ್‌ ಘೋಷಣೆ ಪ್ರಕಟವಾದ ನಂತರ ಯಾವುದೇ ಶಾಂತಿ ಮಾತುಕತೆ ಅಮರಿಕದ ಜತೆ ನಡೆದಿಲ್ಲ ಎಂದು ಇರಾನ್‌ (Iran) ಪ್ರತಿಕ್ರಿಯೆ ನೀಡಿದ ಬಳಿಕ ಮತ್ತೆ ಕಚ್ಚಾ ತೈಲದ ದರ ಏರಿಕೆ ಕಾಣತೊಡಗಿದದು, ಈಗ 96 ಡಾಲರ್‌ನಲ್ಲಿ ವ್ಯವಹಾರ ನಡೆಸುತ್ತಿದೆ.

ಅಮೆರಿಕ ದಾಳಿಗೆ ಪ್ರತಿಯಾಗಿ ಹಾರ್ಮುಜ್ ಜಲಸಂಧಿ (Hormuz Strait) ಇರಾನ್‌ ಬಂದ್‌ ಮಾಡಿದೆ. ಅಷ್ಟೇ ಅಲ್ಲದೇ ಹಾರ್ಮುಜ್‌ ಜಲಸಂಧಿಯಲ್ಲಿ ಸಂಚರಿಸುವ ಹಡಗುಗಳಿಗೆ 18 ಕೋಟಿ ರೂ. ಶುಲ್ಕ ವಿಧಿಸುವ ತೀರ್ಮಾನ ತೆಗೆದುಕೊಂಡಿದೆ.

ಅಮೆರಿಕ, ಇಸ್ರೇಲ್‌ ಮಿತ್ರ ದೇಶಗಳ ಹಡಗುಗಳು ಈ ಜಲಸಂಧಿ ಬಳಸಲು ಅವಕಾಶ ನೀಡುವುದಿಲ್ಲ. ತನ್ನ ಮಿತ್ರ ದೇಶಗಳ ಹಡಗುಗಳಿಗೆ ಮಾತ್ರ ಅನುಮತಿ ನೀಡುವುದಾಗಿ ಹೇಳಿತ್ತು. ಸದ್ಯ ಈಗ ಭಾರತ, ಚೀನಾ, ಪಾಕಿಸ್ತಾನ, ಟರ್ಕಿ, ಇರಾಕ್‌ ದೇಶದ ಹಡಗುಗಳಿಗೆ ಮಾತ್ರ ಸಂಚರಿಸಲು ಇರಾನ್‌ ಅನುಮತಿ ನೀಡಿದೆ.

Megha
the authorMegha

Leave a Reply

error: Content is protected !!
Latest news
ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ ತಿ.ನರಸೀಪುರ: ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತರ ಪ್ರತಿಭಟನೆ ತಹಸೀಲ್ದಾರ್‌ಗೆ ಮನವಿ ಚಾಲನೆಯಲ್ಲಿದ್ದ ಬಸ್‌ನ ಸ್ಟೇರಿಂಗ್‌ ಹಿಡಿದ ಕುಡುಕ- ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಬಸ್‌ ಡಿಕ್ಕಿ, 11 ಮಂದಿಗೆ ಗಂಭೀರ... KSRTC: ಶೇ.44 ರಷ್ಟು ಬಸ್‌ ಪ್ರಯಾಣ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ