CRIMENEWSನಮ್ಮಜಿಲ್ಲೆ

KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ

ವಿಜಯಪಥ ಸಮಗ್ರ ಸುದ್ದಿ

ವಿಟ್ಲ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಹೊಡೆದಿದ್ದು ಅದೃಷ್ಟವಾಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲದೆ ಎಲ್ಲರು ಸುರಕ್ಷಿತವಾಗಿರುವ ಘಟನೆ ಮುಚ್ಚಿರಪದ ಎಂಬಲ್ಲಿ ನಡೆದಿದೆ.

ಆದರೆ, ಈ ಅಪಘಾತದ ನಂತರ ಬಸ್ ಚಾಲಕ ಮತ್ತು ಟಿಪ್ಪರ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಮಧ್ಯೆಬಂದ ಕರ್ತವ್ಯದಲ್ಲಿದ್ದ ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರ್ ಪ್ರಶಾಂತ್ ಮೇಲೆ ಟಿಪ್ಪರ್ ಚಾಲಕ ಬಿಲಾಲ್ ಎಂಬಾತ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾನೆ.

ಕೆಎಸ್‌ಆರ್‌ಟಿಸಿ ಬಸ್ ಕಂಡಕ್ಟರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡ ಹೋದ ಬಳಿಕ ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೂ ಬಿಲಾಲ್ ಹಲ್ಲೆ ನಡೆಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಇತ್ತ ಹಲ್ಲೆಯಿಂದ ಗಾಯಗೊಂಡ ಕಂಡಕ್ಟರ್ ಪ್ರಶಾಂತ್ ಅವರನ್ನು, ವಿಟ್ಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಟಿಪ್ಪರ್ ಚಾಲಕ ಅತೀವೇಗವಾಗಿ ಬಂದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದು, ಪಕಳಕುಂಜದಿಂದ ವಿಟ್ಲಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು ಮತ್ತು ಪೆರುವಾಯಿ ಕಡೆ ಟಿಪ್ಪರ್ ಲಾರಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಸದ್ಯ ಅಪಘಾತದಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ. ಈ ಸಂಬಂಧ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕಾನೂನು ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ ಸ್ವಪಕ್ಷೀಯ ಸಚಿವರೇ ಸರ್ಕಾರಿ ಜಮೀನು ನುಂಗಿದ್ದಾರೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ ಟ್ರಂಪ್‌ ಕದನ ವಿರಾಮ ಘೋಷಣೆ ಬೆನ್ನಲ್ಲೇ ಇಳಿಕೆಯಾಗಿದ್ದ ಕಚ್ಚಾ ತೈಲ ಬೆಲೆ ಮತ್ತೆ ಏರಿಕೆ GBA ಉತ್ತರ- ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಗುತ್ತಿಗೆದಾರರಿಗೆ ದಂಡ: ಆಯುಕ್ತ P.S.ಕುಮಾರ್ ಎಚ್ಚರಿಕೆ ನೌಕರರಿಗೆ ಗುಡ್‌ ನ್ಯೂಸ್: ಏ.1ರಿಂದ ಬದಲಾಗಲಿದೆ ನಿಮ್ಮ ಸಂಬಳ, ಲಾಭ ಹೆಚ್ಚು! ಬೆಲೆ ಕಳೆದುಕೊಂಡ ಕೆಂಪು ಸುಂದರಿ: ಸಂಕಷ್ಟಕ್ಕೆ ಸಿಲುಕಿದ ಬೆಳೆಗಾರ ರೈತರು ಸರ್ಕಾರಿ ಕೆಲಸ ಕೊಡಿಸುವುದಾಗಿ ನೂರಾರು ಅಮಾಯಕರ ನಂಬಿಸಿ 25 ಕೋಟಿ ರೂ. ಸ್ವಾಹ: ದಂಪತಿ ಬಂಧನ, ಹಲವರಿಗೆ ಗಾಳ ! ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಬಸ್‌ ಡಿಕ್ಕಿ : ನಾಲ್ವರು ಮೃತ- ಹಲವರಿಗೆ ಗಾಯ KSRTC: ಟಿಕೆಟ್‌ ತೋರಿಸದಿದ್ದಕ್ಕೆ ತನಿಖಾ ಅಧಿಕಾರಿಯಿಂದ ವೃದ್ಧನ ಮೇಲೆ ಹಲ್ಲೆ ಆರೋಪ- ಅಧಿಕಾರಿ ವಿರುದ್ಧ FIR ದಾಖಲು ಲಾರಿ -ಟಿ.ಟಿ.ವಾಹನ ನಡುವೆ ಭೀಕರ ಅಪಘಾತ: ಕಾಶಿ ತೀರ್ಥಯಾತ್ರೆಗೆ ಹೊರಟಿದ್ದ ಮೂವರು ಮೃತ, 12 ಮಂದಿಗೆ ಗಾಯ