NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಹಾವೇರಿ: ಮಾ.29ರಂದು ನೌಕರರ ಸಮಸ್ಯೆ, ಬೇಡಿಕೆ ಈಡೇರಿಕೆ ಕುರಿತು ಹೋರಾಟ ರೂಪಿಸಿಲು ಕೂಟದ ಪದಾಧಿಕಾರಿಗಳ ಸಭೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಸಮಸ್ಯೆ ಮತ್ತು ಬೇಡಿಕೆಗಳ ಈಡೇರಿಕೆ ಕುರಿತು ಮುಂದಿನ ಹೋರಾಟಗಳ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲು ಮಾ.29ರಂದು ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರ ಸಭೆ ಕರೆಯಲಾಗಿದೆ.

ಅಂದು ಬೆಳಗ್ಗೆ 10ಗಂಟೆಗೆ ಹಾವೇರಿಯ APMC ಮಾರ್ಕೆಟ್‌ ಮುಂಭಾಗ ಹಾನಗಲ್‌ ರಸ್ತೆಯಲ್ಲಿರುವ ಶ್ರೀ ಸಮರ್ಥ ಸದ್ಗುರು ನರಸಿಂಹೇಶ್ವರ ಮಹಾರಾಜರ ಆಧ್ಯಾತ್ಮಿಕ ಮತ್ತು ಯೋಗ ಕೇಂದ್ರಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಭೆಗೆ ನೌಕರರ ಕೂಟದ ಎಲ್ಲ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಭಾಗವಹಿಸಿ ತಮ್ಮ ಅಮೂಲವ್ಯಾದ ಸಲಹೆ ಸೂಚನೆಗಳನ್ನು ಕೊಡಬೇಕು ಎಂದು ಕೂಟದ ರಾಜ್ಯಾಧ್ಯಕ್ಷ ಆರ್‌.ಚಂದ್ರಶೇಖರ್‌ ಮನವಿ ಮಾಡಿದ್ದಾರೆ.

ಇನ್ನು ಈಗಾಗಲೇ ಕೂಟದಿಂದ ಮೂರು ಸಭೆಗಳು ನಡೆದಿದ್ದು, ಆ ಸಭೆಗಳಲು ಹವವಾರು ಚರ್ಚೆಗಳು ನಡೆದು ಸಲಹೆಗಳನ್ನು ನೀಡಿದ್ದೀರಿ. ಅದರಂತೆ ಮತ್ತೆ ಈ ಸಭೆಯಲ್ಲೂ ಭಾಗವಹಿಸಿ ನೌಕರರ ಹಿತ ಕಾಯುವ ನಿಟ್ಟಿನಲ್ಲಿ ಸಲಹೆಗಳನ್ನು ಕೊಡಬೇಕು. ಹೀಗಾಗಿ ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು ತಪ್ಪದೆ ಬನ್ನಿ ಎಂದು ಕೋರಿದ್ದಾರೆ.

ನೌಕರರ ಪ್ರಮುಖ ಬೇಡಿಕೆಗಳಾದ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಇದರ 24 ತಿಂಗಳ ಹಿಂಬಾಕಿ ಮತ್ತು 2020 ಜನವರಿ 1ರಿಂದ ಅನ್ವಯವಾಗುವಂತೆ ಆಗಿರುವ ಶೆ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬಗ್ಗೆಯೂ ಸದಸ್ಯರು ಚರ್ಚಿಸಲಿದ್ದು, ಸರ್ಕಾರದ ಗಮನವನ್ನು ಹೇಗೆ ಸೆಳೆಯಬೇಕು ಎಂಬ ಬಗ್ಗೆ ಸಲಹೆ ಸೂಚನೆಗಳನ್ನು ಸದಸ್ಯರು ನೀಡಲಿದ್ದಾರೆ ಎನ್ನಲಾಗಿದೆ.

Megha
the authorMegha

Leave a Reply

error: Content is protected !!
Latest news
ಗ್ಯಾಸ್ ಸಿಲಿಂಡ‌ರ್ ಡೆಲಿವರಿ ಬಾಯ್‌ಗೆ ಸಿಗುವ ಕಮಿಷನ್ ಎಷ್ಟು ಗೊತ್ತ? KSRTC: ಕರ್ತವ್ಯ ಮುಗಿಸಿ ಪ್ರಯಾಣಿಸುವ ಸಂಸ್ಥೆ ಸಿಬ್ಬಂದಿ ಕಡ್ಡಾಯವಾಗಿ ID Card ಪ್ರದರ್ಶಿಸಿ- ಇಂಥ ಚೋರರ ಪತ್ತೆಗೆ ಸಹಕ... ಗುಡ್‌ ನ್ಯೂಸ್‌: ಪೆಟ್ರೋಲ್ -ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತ KSRTC: ಮೆಜೆಸ್ಟಿಕ್‌ನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬಸ್‌ ಭಸ್ಮ- ಅದೃಷ್ವಶಾತ್‌ ಕೂದಲೆಳೆ ಅಂತರದಲ್ಲೇ ಪ್ರಯಾಣಿಕರು ಪಾರ... ಬೆಳ್ಳಂಬೆಳಗ್ಗೆ ಬಸ್- ಟಿಪ್ಪರ್ ನಡುವೆ ಭೀಕರ ಅಪಾಘತ: 10ಮಂದಿ ಸಜೀವದಹನ, 18 ಜನರಿಗೆ ಗಂಭೀರಗಾಯ ಏ.6ರಂದು KSRTC ಎಂಡಿ ಜತೆ ಸಾರಿಗೆ ನೌಕರರ ಸಂಘಟನೆಗಳ ಸಭೆ- 2024 ರಿಂದ ವೇತನ ಹೆಚ್ಚಳ ಮಾಡದಿದ್ದರೆ ಹೋರಾಟ ಅನಿವಾರ್ಯ BMTC-KSRTC: ನಾಳೆ EPS ಪಿಂಚಣಿದಾರರ ಕನಿಷ್ಠ ಪಿಂಚಣಿ ₹7,500 ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ... KSRTC ಹಾವೇರಿ: ಮಾ.29ರಂದು ನೌಕರರ ಸಮಸ್ಯೆ, ಬೇಡಿಕೆ ಈಡೇರಿಕೆ ಕುರಿತು ಹೋರಾಟ ರೂಪಿಸಿಲು ಕೂಟದ ಪದಾಧಿಕಾರಿಗಳ ಸಭೆ KSRTC ಬಸ್-ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ- ಬಳಿಕ ಗಲಾಟೆ ಚಾಲಕ, ಕಂಡಕ್ಟರ್‌ ಮೇಲೆ ಹಲ್ಲೆ ಮಾಡಿದ ಲಾರಿ ಚಾಲಕ ಸ್ವಪಕ್ಷೀಯ ಸಚಿವರೇ ಸರ್ಕಾರಿ ಜಮೀನು ನುಂಗಿದ್ದಾರೆ: ಶಾಸಕ ರಮೇಶ್ ಬಂಡಿಸಿದ್ದೇಗೌಡ