CRIMENEWSನಮ್ಮರಾಜ್ಯ

ಬೆಳ್ಳಂಬೆಳಗ್ಗೆ ಬಸ್- ಟಿಪ್ಪರ್ ನಡುವೆ ಭೀಕರ ಅಪಾಘತ: 10ಮಂದಿ ಸಜೀವದಹನ, 18 ಜನರಿಗೆ ಗಂಭೀರಗಾಯ

ವಿಜಯಪಥ ಸಮಗ್ರ ಸುದ್ದಿ

ಅಮರಾವತಿ: ಖಾಸಗಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದ ಬಸ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ 10 ಮಂದಿ ಪ್ರಯಾಣಿಕರು ಸಜೀವ ದಹನವಾದ ಘಟನೆ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಾರ್ಕಾಪುರಂ ಸಮೀಪ ನಡೆದಿದೆ

ಇಂದು ಬೆಳಗಿನ ಜಾವ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಾಯವರಂ ಬಳಿಯ ಪಲಕಲಾ ಎಂಬಲ್ಲಿ ಟಿಪ್ಪರ್ ಲಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಎರಡೂ ವಾಹನಗಳಿಗೂ ಬೆಂಕಿಹೊತ್ತಿಕೊಂಡಿದೆ. ಇದರ ಪರಿಣಾಮ ಬಸ್‌ನಲ್ಲಿದ್ದ 10 ಪ್ರಯಾಣಿಕರು ಸಜೀವ ದಹನವಾದರೆ, 18 ಮಂದಿ ಗಾಯಗೊಂಡಿದ್ದಾರೆ.

ಖಾಸಗಿ ಬಸ್‌ ಹೈದರಾಬಾದ್‌ನಿಂದ ಕಾಕಿನಾಡ ಕಡೆಗೆ ತೆರಳುತ್ತಿದ್ದಾಗ ಎದುರುಗಡೆಯಿಂದ ವೇಗವಾಗಿ ಬಂದ ಟಿಪ್ಪ‌ರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ನಿದ್ರೆಯಲ್ಲಿದ್ದ ಕಾರಣ, ಹೊರಬರಲು ಸಾಧ್ಯವಾಗದೆ ಬೆಂಕಿಯಲ್ಲಿ ಸಿಲುಕಿಕೊಂಡು ಸಜೀವವಾಗಿ ದಹನಗೊಂಡಿದ್ದಾರೆ.

18 ಮಂದಿಗೆ ಸುಟ್ಟಗಾಯಗಳಾಗಿದ್ದು ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಮಾರ್ಕಪುರಂನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಬಸ್ ಮತ್ತು ಟಿಪ್ಪರ್ ಎರಡೂ ಸಂಪೂರ್ಣ ಸುಟ್ಟು ಕರಕಲಾಗಿವೆ. ಬಸ್‌ನಲ್ಲಿ ಹಿಂಭಾಗ ಕುಳಿತಿದ್ದ ಹಲವರು ಸಾವನ್ನಪ್ಪಿದ್ದಾರೆ. ಮುಂಭಾಗ ಕುಳಿತಿದ್ದ ಸುಮಾರು 10 ಪ್ರಯಾಣಿಕರು ಬದುಕುಳಿದಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅತಿಯಾದ ವೇಗ ಮತ್ತು ಚಾಲಕನ ಅಜಾಗರೂಕತೆಯೇ ಈ ಭೀಕರ ಅವಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರ ವೇತನ ಪರಿಷ್ಕರಣೆಯ ಆದೇಶದಲ್ಲೇನಿದೆ, ನೌಕರರಿಗೆ ಎಷ್ಟು ತಿಂಗಳ ಹಿಂಬಾಕಿ ಕೊಡಬೇಕು..? KSRTC: ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಳ ನುಂಗಲಾರದ ತುತ್ತಾಯಿತೆ!? KSRTC: ಶೇ.12.5ರಷ್ಟು ವೇತನ ಹೆಚ್ಚಳ ಖಚಿತ, ಒಂದೆರಡು ಗಂಟೆಯಲ್ಲೇ ಅಧಿಕೃತ ಆದೇಶ ! KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ !