NEWSದೇಶ-ವಿದೇಶನಮ್ಮರಾಜ್ಯ

ಗುಡ್‌ ನ್ಯೂಸ್‌: ಪೆಟ್ರೋಲ್ -ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ ಕಡಿತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಪಶ್ಚಿಮ ಏಷ್ಯಾದಲ್ಲಿ ಉಲ್ಬಣಿಸಿರುವ ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿಯಿಂದಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ದೇಶೀಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೇರದಂತೆ ತಡೆಯಲು ಕೇಂದ್ರ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಇಂಧನದ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (SAED) ಕಡಿತ ಮಾಡಿದೆ.

ಜಾಗತಿಕವಾಗಿ ತೈಲ ವೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕವಿದ್ದರೂ, ಕೇಂದ್ರ ಸರ್ಕಾರದ ಈ ಸುಂಕ ಕಡಿತದಿಂದಾಗಿ ಭಾರತದಲ್ಲಿ ತೈಲ ಬೆಲೆಗಳು ಸದ್ಯಕ್ಕೆ ಸ್ಥಿರವಾಗಿರಲಿವೆ ಅಥವಾ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಲಿವೆ.

ಪೆಟ್ರೋಲ್ ಮೇಲಿನ ಸುಂಕವನ್ನು ಪ್ರತಿ ಲೀಟರ್ಗೆ ₹2ರಿಂದ 3ರಷ್ಟು ಮತ್ತು ಡೀಸೆಲ್ ಮೇಲಿನ ಸುಂಕವನ್ನು ₹150 ರಷ್ಟು ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವಾಲಯದ ಮೂಲಗಳು ತಿಳಿಸಿವೆ.

ಯುದ್ಧದ ಹಿನ್ನೆಲೆಯಲ್ಲಿ ಸಾರಿಗೆ ವೆಚ್ಚ ಹೆಚ್ಚಾಗದಂತೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗದಂತೆ ತಡೆಯಲು ಸರ್ಕಾರ ಈ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

ತೈಲ ಕಂಪನಿಗಳಿಗೆ ಸೂಚನೆ ಅಂತಾರಾಷ್ಟ್ರೀಯ ಮಾರುಕಟ್ಟೆಯ ಲಾಭಾಂಶವನ್ನು ಗ್ರಾಹಕರಿಗೆ ತಲುಪಿಸುವಂತೆ ಮತ್ತು ಕೃತಕ ಅಭಾವ ಸೃಷ್ಟಿಯಾಗದಂತೆ ನೋಡಿಕೊಳ್ಳಲು ತೈಲ ಕಂಪನಿಗಳಿಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರ ವೇತನ ಪರಿಷ್ಕರಣೆಯ ಆದೇಶದಲ್ಲೇನಿದೆ, ನೌಕರರಿಗೆ ಎಷ್ಟು ತಿಂಗಳ ಹಿಂಬಾಕಿ ಕೊಡಬೇಕು..? KSRTC: ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ KSRTC: ಶೇ.12.5ರಷ್ಟು ವೇತನ ಹೆಚ್ಚಳ ಖಚಿತ, ಒಂದೆರಡು ಗಂಟೆಯಲ್ಲೇ ಅಧಿಕೃತ ಆದೇಶ ! KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ !