NEWSಕೃಷಿನಮ್ಮಜಿಲ್ಲೆ

ಟನ್‌ ಕಬ್ಬಿಗೆ ಹೆಚ್ಚುವರಿ ₹100 ಪಾವತಿಸದ ಬಣ್ಣಾರಿ ಕಾರ್ಖಾನೆ ಸಕ್ಕರೆ ದಾಸ್ತಾನು ಮುಟ್ಟುಗೋಲು ಹಾಕಿಕೊಳ್ಳಿ: ಡಿಸಿಗೆ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಟನ್‌ ಕಬ್ಬಿಗೆ ಹೆಚ್ಚುವರಿ ನೂರು ರೂಪಾಯಿ ಪಾವತಿ ಮಾಡದ ಬಣ್ಣಾರಿ ಕಾರ್ಖಾನೆ ಸಕ್ಕರೆ ದಾಸ್ತಾನು ಮುಟ್ಟುಗೋಲು ಹಾಕಿಕೊಳ್ಳಿ ಎಂದು ಮೈಸೂರು ಜಿಲ್ಲಾಧಿಕಾರಿಗಳಿಗೆ ರಾಜ್ಯ ಕಬ್ಬು ಬೆಳೆಗಾರ ಸಂಘ ಒತ್ತಾಯಿಸಿದೆ.

ಇಂದು ಆಯೋಜಿಸಿದ್ದ ಮೈಸೂರು ತಾಲೂಕು ರೈತರ ಸಭೆಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, .ರಾಜ್ಯ ಸರ್ಕಾರ ಕಬ್ಬಿಗೆ ಹೆಚ್ಚುವರಿ 100 ರೂಪಾಯಿ ದರ ನಿಗದಿ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳು ಒಂದು ತಿಂಗಳ ಹಿಂದೆ ಬಣ್ಣಾರಿ ಸಕ್ಕರೆ ಕಾರ್ಖಾನೆ ಮುಖ್ಯಸ್ಥರು ಹಾಗೂ ರೈತ ಮುಖಂಡರ ಜತೆ ಸಭೆ ನಡೆಸಿ ರೈತರ ಖಾತೆಗೆ ಹಣ ಜಮಾ ಮಾಡುವಂತೆ ಕಾರ್ಖಾನೆ ಮುಖ್ಯಸ್ಥರಿಗೆ ಸೂಚನೆ ನೀಡಿದರು ಸಹ ಕಾರ್ಖಾನೆ ಅವರು ನಿರ್ಲಕ್ಷತನ ತೋರಿದ್ದಾರೆ ಆದಕಾರಣ ಕೂಡಲೇ ಸಕ್ಕರೆ ಕಾರ್ಖಾನೆಯ ಸಕ್ಕರೆ ದಾಸ್ತಾನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ

ದೇಶದಲ್ಲಿ ಮುಕ್ತ ವ್ಯಾಪಾರ ಒಪ್ಪಂದ ಜಾರಿಯಾದ ದಿನಗಳಿಂದ ಎಲ್ಲ ವಸ್ತುಗಳು ನಮ್ಮ ದೇಶಕ್ಕೆ ಆಮದು ಹಾಗೂ ರಫ್ತು ಆಗುತ್ತಿವೆ. ಆದರೆ ತಂಬಾಕು ಖರೀದಿಗೆ ಐಟಿಸಿ ಕಂಪನಿ ಮಾತ್ರ ಏಕ ಸ್ವಾಮ್ಯ ಯಾಕೆ? ಇದನ್ನು ಮುಕ್ತ ವ್ಯಾಪಾರಕ್ಕೆ ಬಿಡಬೇಕು ಇದರಿಂದ ಹೊಗೆ ಸೊಪ್ಪು ಬೆಳೆಯುವ ರೈತರಿಗೆ ಸ್ಪರ್ಧಾತ್ಮಕ ಬೆಲೆ ಸಿಗುತ್ತದೆ.

ಒಂದು ಕೆಜಿ ತಂಬಾಕಿನಲ್ಲಿ 1400 ಸಿಗರೇಟ್ ತಯಾರಿಸುವ ಐಟಿಸಿ ಕಂಪನಿಗೆ ಸಿಗರೇಟ್ ಮಾರಾಟದಿಂದ 21,000 ಬರುತ್ತದೆ ಎಲ್ಲ ಖರ್ಚು ಕಳೆದು ಕನಿಷ್ಠ 10 ಸಾವಿರ ಉಳಿಯುತ್ತದೆ. ರೈತರಿಗೆ ಮಾತ್ರ 250 ರೂ. ಕೊಡಲು ಕಷ್ಟ ಎನ್ನುತ್ತಾರೆ ಇದು ರೈತರಿಗೆ ಬಹು ವಂಚನೆ ಅಲ್ಲವೇ. ಕೇಂದ್ರ ಸರ್ಕಾರ ಹೊಗೆಸೊಪ್ಪು ಖರೀದಿಸುವ ಅವಕಾಶ ಬೇರೆ ಕಂಪನಿಗಳಿಗೂ ಕಲ್ಪಿಸಲಿ ಈ ಭಾಗದ ಸಂಸದರು ಕೇಂದ್ರವನ್ನ ಒತ್ತಾಯಿಸಬೇಕು ಎಂದು ಆಗ್ರಹಿಸಿದರು.

ಕುವೆಂಪು ಪಾರ್ಕ್ ನಲ್ಲಿ ಸಭೆ ಸೇರಿದ ರೈತರು ಸಭೆ ನಂತರ ಅಮೆರಿಕ – ಇರಾನ್ ಯುದ್ಧ ನಿಲ್ಲಿಸ ಬೇಕು ವಿಶ್ವದಲ್ಲಿ ಶಾಂತಿ ನೆಲೆಸಬೇಕು. ಎಂದು ಘೋಷಣೆ ಮೂಲಕ ಯುದ್ಧ ನಿಲ್ಲಲಿ, ಶಾಂತಿ ನೆಲೆಸಲಿ ಎಂದು ಪಾರ್ಕಲ್ಲಿ ಪ್ರತಿಭಟನೆ ನಡೆಸಿದರು.

ಇಂದಿನ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಕೂಡನಹಳ್ಳಿ ಸೋಮಣ್ಣ, ಕೆಂಡಗಣಪ್ಪ, ಸಾತಗಳ್ಳಿ ಬಸವರಾಜ್, ಕಾಟೂರು ನಾಗೇಶ್, ವಾಜಮಂಗಲ ನಾಗೇಂದ್ರ, ವಾಜಮಂಗಲ ಮಹಾದೇವು, ಸತೀಶ್, ಬಾಲು, ನಂಜುಂಡಸ್ವಾಮಿ, ಶಿವಣ್ಣ, ರಂಗರಾಜು, ಸೋಮಣ್ಣ, ಶ್ರೀಕಂಠ, ಪ್ರಭಾಕರ, ಭಾಗ್ಯಮ್ಮ, ಸೇರಿದಂತೆ ನೂರಾರು ರೈತರು ಇದ್ದರು.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...