NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ !

ಕರ್ನಾಟಕ ಸರ್ಕಾರವು ಸಾರಿಗೆ ನಿಗಮಗಳ ನೌಕರರ 26 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಪಾವತಿಗಾಗಿ ಮೊದಲ ಹಂತವಾಗಿ 450 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ. ಇದು ಸಾರಿಗೆಯ ನಾಲ್ಕೂ ನಿಗಮಗಳ 1.20 ಲಕ್ಷ ನೌಕರರಿಗೆ ಈ ನಿರ್ಧಾರದಿಂದ ಆರ್ಥಿಕ ನೆರವು ದೊರೆತಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳ ನೌಕರರಿಗೆ ಕರ್ನಾಟಕ ಸರ್ಕಾರವು 38 ತಿಂಗಳ ಹಿಂಬಾಕಿ ಬದಲು 26 ತಿಂಗಳ ಹಿಂಬಾಕಿ ನೀಡುವ ನಿರ್ಧಾರ ಮಾಡಿ ಇಂದು (ಏ.29) ಮೊದಲ ಹಂತವಾಗಿ 450 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.

ನೌಕರರ ದೀರ್ಘಕಾಲದ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆಯ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ (Arrears) ಪಾವತಿಸಬೇಕಿತ್ತು. ಆದರೆ 12 ತಿಂಗಳ ಹಿಂಬಾಕಿ ಪಾವತಿಸಲು ಆಗುವುದಿಲ್ಲ ಎಂದು ಸದ್ಯ 26 ತಿಂಗಳ ಹಿಂಬಾಕಿ ಪಾವತಿಗೆ ನೌಕರರು ಹಾಗೂ ಸಂಘಟನೆಗಳ ವಿರೋಧದ ನಡುವೆಯೂ ಏಕಪಕ್ಷೀಯವಾಗಿ ನಿರ್ಧರಿಸಿದೆ.

ಆ ಭಾಗವಾಗಿ ಇಂದು 450 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿ ಅಧಿಕೃತ ಆದೇಶ ಹೊರಡಿಸಿದೆ. ಇದರಿಂದಾಗಿ ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC) ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ಲಕ್ಷಾಂತರ ನೌಕರರಿಗೆ ಆರ್ಥಿಕ ನೆರವು ಸಿಕ್ಕಂತಾಗಿದೆ. ಆದರೆ, ನ್ಯಾಯಯುತವಾಗಿ ಸಿಗಬೇಕಿರುವ ಹಿಂಬಾಕಿಯಿಂದ ವಂಚಿತರಾಗುತ್ತಿದ್ದಾರೆ.

26 ತಿಂಗಳ ವೇತನ ಬಾಕಿ ಪಾವತಿಗೆ ಕ್ರಮ: 01.01.2020ರಿಂದ 28.02.2023 ರವರೆಗಿನ ಒಟ್ಟು 36 ತಿಂಗಳ ವೇತನ ಪರಿಷ್ಕರಣೆಯ ಹಿಂಬಾಕಿ ಮೊತ್ತವನ್ನು ಪಾವತಿಸಲು ನೌಕರರು ಸತತವಾಗಿ ಒತ್ತಾಯಿಸುತ್ತಿದ್ದರು. ಆದರೆ ಸರ್ಕಾರ 01.01.2021 ರಿಂದ 28.02.2023 ಒಟ್ಟು 26 ತಿಂಗಳ ಹಿಂಬಾಕಿ ಪಾವತಿಸಲು ಆದೇಶ ನೀಡಿದ್ದು, ಈ ಬಾಕಿ ಮೊತ್ತದ ಒಟ್ಟು ಬೇಡಿಕೆ 1271.92 ಕೋಟಿ ರೂಪಾಯಿಯಾಗಿದೆ. ಪ್ರಸ್ತುತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಮೊದಲ ಹಂತವಾಗಿ 450 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನದಡಿ ಬಿಡುಗಡೆಗೊಳಿಸಿ ಆದೇಶಿಸಿದೆ.

ಯಾವ ನಿಗಮಕ್ಕೆ ಎಷ್ಟು ಅನುದಾನ? (ಕೋಟಿ ರೂ.ಗಳಲ್ಲಿ): ಸರ್ಕಾರದ ಆದೇಶದಂತೆ ಬಿಡುಗಡೆಯಾದ 450 ಕೋಟಿ ರೂ.ಗಳನ್ನು ನಾಲ್ಕೂ ನಿಗಮಗಳಿಗೆ ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC): 143.85 ಕೋಟಿ ರೂ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC): 137.24 ಕೋಟಿ ರೂ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC): 87.00 ಕೋಟಿ ರೂ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC): 81.91 ಕೋಟಿ ರೂ.
ಒಟ್ಟು ಮೊತ್ತ: 450.00 ಕೋಟಿ ರೂ.

ಕಟ್ಟುನಿಟ್ಟಿನ ಷರತ್ತುಗಳು: ಅನುದಾನ ಬಿಡುಗಡೆ ಮಾಡುವ ವೇಳೆ ಸರ್ಕಾರವು ಕೆಲವು ಪ್ರಮುಖ ಷರತ್ತುಗಳನ್ನು ವಿಧಿಸಿದೆ.

ಬಿಡುಗಡೆ ಮಾಡಲಾದ ಈ ಮೊತ್ತವನ್ನು ಕೇವಲ ನೌಕರರ ವೇತನ ಬಾಕಿ ಪಾವತಿಸಲು ಮಾತ್ರ ಬಳಸತಕ್ಕದ್ದು.
ಯಾವುದೇ ವಿಳಂಬವಿಲ್ಲದೆ ತಕ್ಷಣವೇ ನೌಕರರ ಖಾತೆಗೆ ಈ ಹಣವನ್ನು ತಲುಪಿಸಬೇಕು.
ಅನುದಾನ ಬಳಕೆಯ ನಂತರ ಸಾರಿಗೆ ಸಂಸ್ಥೆಗಳು ಕಡ್ಡಾಯವಾಗಿ ಬಳಕೆಯ ಪ್ರಮಾಣ ಪತ್ರವನ್ನು (Utilization Certificate) ಸರ್ಕಾರಕ್ಕೆ ಸಲ್ಲಿಸಬೇಕು.

ನೌಕರರ ಸಂಘಟನೆಗಳ ಹರ್ಷ: ಕಳೆದ ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಸಾರಿಗೆ ನೌಕರರಿಗೆ ಈ ನಿರ್ಧಾರವು ದೊಡ್ಡ ಸಮಾಧಾನ ತಂದಿರದಿದ್ದರೂ ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ಕ್ಷೀಣಿಸಿರುವ ಹಿನ್ನೆಲೆಯಲ್ಲಿ, ಸರ್ಕಾರವು ಮಧ್ಯಪ್ರವೇಶಿಸಿ ಈ ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ ಎಂದು ನೌಕರರ ಸಂಘಟನೆಗಳು ಅಭಿಪ್ರಾಯಪಟ್ಟಿವೆ. 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಹಂತ ಹಂತವಾಗಿ ಬಾಕಿ ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಮುಂದಾಗಿದೆ.

ಈ ಆದೇಶಕ್ಕೆ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್. ಅವರು ಸಹಿ ಮಾಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಸೂಚಿಸಿದ್ದಾರೆ. ಈ ನಿರ್ಧಾರದಿಂದಾಗಿ ಸಾರಿಗೆ ನೌಕರರಲ್ಲಿ ತುಸು ಸಂತಸ ಮನೆ ಮಾಡಿದೆ ಎಂದು ಹೇಳಬಹುದಾದರೂ ಮುಂದಿನ ದಿನಗಳಲ್ಲಿ ಉಳಿದ 12 ತಿಂಗಳ ಹಿಂಬಾಕಿಯನ್ನು ಪಡೆಯುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಸರ್ಕಾರ ಮುಂದಾಗಲಿದೆ ಎಂಬ ಆಶಾಭಾನೆ ಹೊಂದಿದ್ದಾರೆ.

ಇನ್ನು ಒಂದು ವೇಳೆ 12 ತಿಂಗಳ ಹಿಂಬಾಕಿ ಕೊಡದಿದ್ದರೆ ಕಾನೂನು ಹೋರಾಟಕ್ಕೂ ಸಿದ್ಧವಿರುವುದಾಗಿ ಸಂಘಟನೆಗಳ ಮುಖಂಡರು ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ