NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌.ಅಶೋಕ್‌

ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಯ ಶಕ್ತಿ ಕುಂದಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಏಳಿಗೆಯ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತವನ್ನು ಸರ್ಕಾರ ತಲುಪಿರುವುದು ದುರಂತವೇ ಸರಿ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಷ್ಕರ, ‌ಪ್ರತಿಭಟನೆಗಳು ಸಾಮಾನ್ಯವಾಗಿದೆ. Indian National Congress – Karnataka ಸರ್ಕಾರದ ಆಡಳಿತಕ್ಕೆ ರಾಜ್ಯವೇ ರೋಸಿ ಹೋಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಭೆಗಳ ಮೇಲೆ ಸಭೆ ನಡೆಸಿದರೂ ಅವರಿಗೆ ನ್ಯಾಯಯುತವಾಗಿ ಕೊಡಬೇಕಿರುವುದನ್ನು ಕೊಡುವುದಕ್ಕೆ ಇನ್ನೂ ಇವರಿಂದ ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿದ್ದು, ಇದರಿಂದ ನೌಕರರು ಅಡಿಗಡಿಗೆ ಪ್ರತಿಭಟನೆ, ಮುಷ್ಕರ ನಡೆಸುವುದಕ್ಕೆ ಮುಂದಾಗುತ್ತಿದ್ದಾರೆ.

ಇನ್ನು ಕಾಂಗ್ರೆಸ್ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಯಿಂದಾಗಿ ಸಾರಿಗೆ ಇಲಾಖೆಯ ನೌಕರರು ಹೈರಾಣಾಗಿದ್ದಾರೆ. ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಯ ಶಕ್ತಿ ಕುಂದಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಏಳಿಗೆಯ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತವನ್ನು ಸರ್ಕಾರ ತಲುಪಿರುವುದು ದುರಂತವೇ ಸರಿ.

ಸರ್ಕಾರದ ಬೇಜವಾಬ್ದಾರಿ ನಡೆಯಿಂದ‌ ಆಕ್ರೋಶಗೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮೇ 20ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ತಮ್ಮ ಬೇಡಿಕೆ ಈಡೇರದಿದ್ದರೆ ಮೇ 20ರ ನಂತರ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಸಾರಿಗೆ ನೌಕರರು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ತುಘಲತ್ ಆಡಳಿತದಿಂದಾಗಿ ರಾಜ್ಯದ ಜನತೆ ಮತ್ತೊಮ್ಮೆ ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದು ಆರ್‌.ಅಶೋಕ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Megha
the authorMegha

Leave a Reply

error: Content is protected !!
Latest news
GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು?