ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು
ಡಿಕ್ಕಿಯ ತೀವ್ರತೆ ಹೇಗಿತ್ತು ಎಂದರೆ, ಘಟನೆ ನಡೆದ ಕ್ಷಣಾರ್ಧದಲ್ಲೇ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಬೆಂಕಿಯ ಜ್ವಾಲೆ ವೇಗವಾಗಿ ವ್ಯಾಪಿಸಿದ್ದರಿಂದ ಬಸ್ನೊಳಗಿದ್ದ ಪ್ರಯಾಣಿಕರಿಗೆ ಹೊರಬರಲು ಅವಕಾಶವೇ ಸಿಗಲಿಲ್ಲ. ಅಷ್ಟರ ಮಟ್ಟಿಗೆ ಅಪಘಾತ ಸಂಭವಿಸಿದೆ.

ಜಕಾರ್ತಾ: ಬಸ್ ಮತ್ತು ಡೀಸೆಲ್ ತುಂಬಿದ್ದ ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಸ್ನಲ್ಲಿದ್ದ 16 ಮಂದಿ ಸಜೀವ ದಹನಗೊಂಡಿರುವ ಘಟನೆ ಇಂಡೋನೇಷ್ಯಾದ ದಕ್ಷಿಣ ಸುಮಾತ್ರಾ ಪ್ರಾಂತ್ಯದಲ್ಲಿ ನಡೆದಿದೆ.

ಈ ಭೀಕರ ರಸ್ತೆ ಅಪಘಾತ ಬುಧವಾರ ಮಧ್ಯಾಹ್ನ ಉತ್ತರ ಮುಸಿ ರವಾಸ್ ಜಿಲ್ಲೆಯ ಟ್ರಾನ್ಸ್-ಸುಮಾತ್ರಾ ಹೆದ್ದಾರಿಯಲ್ಲಿ ನಡೆದಿದೆ. ಸುಮಾರು 20 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್, ಎದುರಿನಿಂದ ಅತೀ ವೇಗವಾಗಿ ಬರುತ್ತಿದ್ದ ಇಂಧನ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆ ಪೊಲೀಸರು ತಿಳಿಸಿದ್ದಾರೆ.
ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ವಾಹನಗಳು: ಡಿಕ್ಕಿಯ ತೀವ್ರತೆ ಹೇಗಿತ್ತು ಎಂದರೆ, ಘಟನೆ ನಡೆದ ಕ್ಷಣಾರ್ಧದಲ್ಲೇ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಬೆಂಕಿಯ ಜ್ವಾಲೆ ವೇಗವಾಗಿ ವ್ಯಾಪಿಸಿದ್ದರಿಂದ ಬಸ್ನೊಳಗಿದ್ದ ಪ್ರಯಾಣಿಕರಿಗೆ ಹೊರಬರಲು ಅವಕಾಶವೇ ಸಿಗಲಿಲ್ಲ. ಅಷ್ಟರ ಮಟ್ಟಿಗೆ ಅಪಘಾತ ಸಂಭವಿಸಿದೆ.
ಇನ್ನು ಘಟನೆಯಲ್ಲಿ ಬಸ್ನಲ್ಲಿದ್ದ 14 ಪ್ರಯಾಣಿಕರು ಹಾಗೂ ಟ್ಯಾಂಕರ್ ಲಾರಿಯ ಚಾಲಕ ಮತ್ತು ಸಹಾಯಕ ಸೇರಿ ಒಟ್ಟು 16 ಮಂದಿ ಸಜೀವ ದಹನಗೊಂಡಿದ್ದು, ಮೃತದೇಹಗಳು ಸಂಪೂರ್ಣ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆಹಚ್ಚಲು ಡಿಎನ್ಎ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಲ್ವರು ಪಾರಾದರೂ ಮೂವರಿ0ಗೆ ಗಂಭೀರ ಗಾಯ: ಅಪಘಾತ ಸಂಭವಿಸಿದ ಕ್ಷಣದಲ್ಲಿ ಬಸ್ನಿಂದ ಹೇಗೋ ಹೊರಕ್ಕೆ ಜಿಗಿದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರಲ್ಲಿ ಮೂವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಸದ್ಯಕ್ಕೆ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟೈರ್ ಸ್ಫೋಟವೇ ಅಪಘಾತಕ್ಕೆ ಕಾರಣ?: ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ನ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆ ಬರುತ್ತಿದ್ದ ಟ್ಯಾಂಕರ್ಗೆ ಬಸ್ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಡಿಕ್ಕಿಯಾದ ತಕ್ಷಣ ಟ್ಯಾಂಕರ್ನಿಂದ ಡೀಸೆಲ್ ಸೋರಿಕೆಯಾಗಿದ್ದು, ಇದರಿಂದ ಭಾರೀ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ ಧಾವಿಸಿದ ರಕ್ಷಣಾ ಪಡೆ: ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅಪಘಾತದ ಬಳಿಕ ಟ್ರಾನ್ಸ್-ಸುಮಾತ್ರಾ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Related









