NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಶೇ.12.5ರಷ್ಟು ವೇತನ ಹೆಚ್ಚಳ ಖಚಿತ, ಒಂದೆರಡು ಗಂಟೆಯಲ್ಲೇ ಅಧಿಕೃತ ಆದೇಶ !

ಇನ್ನು 1.4.2025ರಿಂದ ಅನ್ವಯವಾಗುಂತೆ ಈ ವೇತನ ಪರಿಷ್ಕರಣೆ ಮಾಡಿದ್ದು, ಈ ಪರಿಷ್ಕಣೆಯಿಂದ ನೌಕರರು 15 ತಿಂಗಳುಗಳ ವೇತನ ಹೆಚ್ಚಳವನ್ನು ಕಳೆದುಕೊಳ್ಳುತ್ತಿದ್ದಾರೆ. ಇದು ನೌಕರರಿಗೆ ಭಾರಿ ಅನ್ಯಾಯವಾಗುತ್ತಿದೆ.

ವಿಜಯಪಥ ಸಮಗ್ರ ಸುದ್ದಿ
  • ಇಂದು ಸರ್ಕಾರ ಶೇ.12.5ರಷ್ಟು ವೇತನ ಹೆಚ್ಚಳ ಮಾಡಿದ್ದು, ಕಳೆದ ವೇತನ ಪರಿಷ್ಕರಣೆಗಿಂತ ಶೇ.2.5ರಷ್ಟು ಕಡಿಮೆ ಮಾಡಿದೆ. ಇನ್ನು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದೊಂದೆ ಬಾಕಿ ಇದ್ದು ಅದುಕೂಡ ಒಂದೆರಡು ಗಂಟೆಯಲ್ಲೇ ಹೊರಬೀಳಲಿದೆ.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆಯಾಗಿದ್ದು, ಶೇ.12.5 ಹೆಚ್ಚಳವಾಗಿದೆ. ಈ ಅಧಿಕೃತ ಆದೇಶ 1-2 ಗಂಟೆಯಲ್ಲೇ ಹೊರಬೀಳಲಿದೆ.

ನಾಲ್ಕೂ ನಿಗಮಗಳ ನೌಕರರ ವೇತನ ನಿಯಮಿತವಾಗಿ ಪರಿಷ್ಕರಣೆಯಾಗುತ್ತಿತ್ತು. ಆದರೆ, 2020ರಲ್ಲಿ ಬಂದ ಕೊರೊನಾದಿಂದಾಗಿ ಅಂದಿನ ಬಿಜೆಪಿ ಸರ್ಕಾರ 2020ರ ಜನವರಿ 1 ಮಾಡಬೇಕಿದ್ದ ನೌಕರರ ವೇತನ ಪರಿಷ್ಕರಣೆಗೆಯನ್ನು 2023ರ ಮಾರ್ಚ್‌ ವೇತನಕ್ಕೆ ಶೇ.15ರಷ್ಟು ವೇತನ ಸೇರಿಸಿ ಕೊಟ್ಟಿತ್ತು.

ಆದರ, ಇಂದು ಸರ್ಕಾರ ಶೇ.12.5ರಷ್ಟು ವೇತನ ಹೆಚ್ಚಳ ಮಾಡಿದ್ದು, ಕಳೆದ ವೇತನ ಪರಿಷ್ಕರಣೆಗಿಂತ ಶೇ.2.5ರಷ್ಟು ಕಡಿಮೆ ಮಾಡಿದೆ. ಇನ್ನು ಈ ಬಗ್ಗೆ ಅಧಿಕೃತ ಘೋಷಣೆ ಮಾಡುವುದೊಂದೆ ಬಾಕಿ ಇದ್ದು ಅದುಕೂಡ ಒಂದೆರಡು ಗಂಟೆಯಲ್ಲೇ ಹೊರಬೀಳಲಿದೆ.

ಇನ್ನು 1.4.2025ರಿಂದ ಅನ್ವಯವಾಗುಂತೆ ಈ ವೇತನ ಪರಿಷ್ಕರಣೆ ಮಾಡಿದ್ದು, ಈ ಪರಿಷ್ಕಣೆಯಿಂದ ನೌಕರರು 15 ತಿಂಗಳುಗಳ ವೇತನ ಹೆಚ್ಚಳವನ್ನು ಕಳೆದುಕೊಳ್ಳುತ್ತಿದ್ದಾರೆ. ಇದು ನೌಕರರಿಗೆ ಭಾರಿ ಅನ್ಯಾಯವಾಗುತ್ತಿದೆ.

ನೌಕರರ ಬೇಡಿಕೆ ಏನಿತ್ತು?: ಸರ್ಕಾರಿ ನೌಕರರ ಮಾದರಿಯಲ್ಲಿ ವೇತನ ಹೆಚ್ಚಳ, ಕನಿಷ್ಠ ವೇತನದ ಪರಿಷ್ಕರಣೆ ಮತ್ತು ಬಾಕಿ ವೇತನ (Arrears) ಪಾವತಿಗೆ ಆಗ್ರಹಿಸುತ್ತಿದ್ದಾರೆ. ಅಲ್ಲದೇ ನೌಕರರು 7ನೇ ವೇತನ ಆಯೋಗದ ಮಾದರಿಯಲ್ಲಿ ಕನಿಷ್ಠ ವೇತನ ರೂ. 36,000ಕ್ಕೆ ಏರಿಕೆ ಮಾಡಲು ಒತ್ತಾಯಿಸುತ್ತಿದ್ದಾರೆ. ಇನ್ನು ಜಂಟಿ ಕ್ರಿಯಾ ಸಮಿತಿ ಶೇ.25ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸುತ್ತಿತ್ತು.

ಆದರೆ, ಇದೆಲ್ಲವನ್ನು ಬಿಟ್ಟು ಇಂದು ಸರ್ಕಾರ ಏಕಪಕ್ಷೀಯವಾಗಿ ಶೇ.12.5ರಷ್ಟು ವೇತನ ಹೆಚ್ಚಳ ಮಾಡಿದ್ದು, ಅಧಿಕೃತ ಆದೇಶವಷ್ಟೇ ಹೊರಬೀಳಬೇಕಿದೆ.

Megha
the authorMegha

Leave a Reply

error: Content is protected !!
Latest news
KSRTC: ಸಾರಿಗೆ ನೌಕರರಿಗೆ ಶೇ.12.5ರಷ್ಟು ವೇತನ ಹೆಚ್ಚಿಸಿ ಸರ್ಕಾರದ ಆದೇಶ KSRTC: ಶೇ.12.5ರಷ್ಟು ವೇತನ ಹೆಚ್ಚಳ ಖಚಿತ, ಒಂದೆರಡು ಗಂಟೆಯಲ್ಲೇ ಅಧಿಕೃತ ಆದೇಶ ! KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ