NEWSವಿಜ್ಞಾನ

ನ.19ರಂದು ಹೋರಾಟ: ಸರ್ಕಾರಿ ನೌಕರರಾಗಿ ಪರಿಗಣಿಸಲು ಸಾರಿಗೆ ನೌಕರರ ಆಗ್ರಹ

ನ.19 ಸಾರಿಗೆ ನೌಕರರಿಂದ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಮಂತ್ರಿಗಳಿಗೆ ಪತ್ರ ಚಳವಳಿ ಹೋರಾಟ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕು ನಿಗಮಗಳ ನೌಕರರನ್ನು ಸರ್ಕಾರಿ ನೌಕರರು ಎಂದು ಘೋಷಿಸಿ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ನವೆಂಬರ್‌ 19 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಮಂತ್ರಿಗಳಿಗೆ ಪತ್ರ ಚಳವಳಿ ಹಮ್ಮಿಕೊಂಡಿದೆ.

ಇದರ ಅಂಗವಾಗಿ ಈಗಾಗಲೇ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿಯ ಬಹುತೇಕ ಡಿಪೋಗಳಿಗೆ ಭೇಟಿ ನೀಡಿ ನೌಕರರಿಗೆ ಮಾಹಿತಿ ಮುಟ್ಟಿಸಿದ್ದು, ನ.17ರಂದು ಎನ್‌ಡಬ್ಲ್ಯುಕೆಆರ್‌ಟಿಸಿ, ಎನ್‌ಇಕೆಆರ್‌ಟಿಸಿ ನೌಕರರನ್ನು ಭೇಟಿ ಮಾಡಿ ಈ ಚಳವಳಿಯಲ್ಲಿ ಭಾಗವಹಿಸುವಂತೆ ಕರೆ ನೀಡಲಿದ್ದೇವೆ. ಇನ್ನು ನ.19ರಂದು ನಡೆಯುವ ಚಳವಳಿಯಲ್ಲಿ ಮಠಾಧೀಶರು, ಕನ್ನಡಪರ ಸಂಘಟನೆಗಳು ಭಾಗವಹಿಸಲಿವೆ ಎಂದು ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಮತ್ತು ನಿಗಮ-ಮಂಡಳಿಗಳ ನೌಕರರು ಕೊರೊನಾದ ತುರ್ತುಪರಿಸ್ಥಿತಿ ಸಮಯದಲ್ಲಿ ಸಕಾಲದಲ್ಲಿ ಸರ್ಕಾರಿ ವೇತನದ ಜತೆಗೆ ಸರ್ಕಾರದ ಹಲವು ಸವಲತ್ತುಗಳನ್ನು ಪಡೆಯುತ್ತಿದ್ದಾರೆ. ಆದರೆ ನಮಗೆ ಮಾತ್ರ ಸೌಲಭ್ಯ ನೀಡುವಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಹೀಗಾಗಿ ನಾವು ಬೇರೆ ದಾರಿ ಕಾಣದೆ ಪ್ರತಿಭಟನೆಯ ಹಾದಿ ತುಳಿಯಬೇಕಿದೆ ಎಂದು ಹೇಳಿದ್ದಾರೆ.

ಬೆಳಗ್ಗೆ 6 ಗಂಟೆಗೆ ಡಿಪೋಗಳಿಗೆ ಹೋಗಬೇಕು. ರಾತ್ರಿ 8-9ಗಂಟೆಗೆ ಮನೆ ಸೇರಬೇಕು. ಇಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾವು ಯಾರಿಗೂ ಹೇಳಿಕೊಳ್ಳಲಾದ ಯಾತನೆಯನ್ನು ಅನುಭವಿಸುತ್ತಿದ್ದೇವೆ. ಹಾಗಾಗಿ ಎಲ್ಲಾ ನೌಕರರು ಒಗ್ಗಟ್ಟಾಗಿ ಹೋರಾಟಕ್ಕೆ ಕೈ ಜೋಡಿಸಿ ನಮ್ಮ ನಮ್ಮ ಹಕ್ಕುಗಳನ್ನು ಪಡೆಯೋಣ ಎಂದು ಒಕ್ಕೂಟ ಕರೆ ನೀಡಿದೆ.

ಯಾವತ್ತು ಏನು ಹೋರಾಟ?
ನವಂಬರ್ 19ರಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರಧಾನಮಂತ್ರಿಗಳಿಗೆ ಪತ್ರ ಚಳುವಳಿ
ನಮ್ಮ ಹೋರಾಟಕ್ಕೆ ಸ್ಪಂದಿಸದಿದ್ದರೆ ಡಿಸೆಂಬರ್ 1ರಿಂದ ಅರ್ನಿದಿಷ್ಟಾವಧಿವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತಿದ್ದು ಈ ಹೋರಾಟದಲ್ಲಿ ಪ್ರತಿಯೊಬ್ಬ ನೌಕರರು ಮತ್ತು ಕುಟುಂಬದವರು ಭಾಗವಹಿಸಬೇಕು ಎಂದು ಒಕ್ಕೂಟ ಮನವಿ ಮಾಡಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್