CRIMENEWSನಮ್ಮಜಿಲ್ಲೆ

ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌

ವಿಜಯಪಥ ಸಮಗ್ರ ಸುದ್ದಿ

ಆನೇಕಲ್: ತಾನು ಪ್ರೀತಿಸಿದ ಯುವತಿ ಕೈಕೊಟ್ಟಿದ್ದಾಳೆ ಎಂದು ಆರೋಪಿಸಿದ ಪಾಗಲ್ ಪ್ರೇಮಿಯೊಬ್ಬ ಹೈಟೆನ್ಷನ್ ವಿದ್ಯುತ್‌ ಕಂಬ ಹತ್ತಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನಪಾಳ್ಯದಲ್ಲಿ ನಡೆದಿದೆ.

ಸೋಮಶೇಖರ್ ಹೈಟೆನ್ಷನ್ ಕಂಬ ಹತ್ತಿ ಹುಚ್ಚಾಟವಾಡಿದ ಯುವಕ. ಚಿನ್ನಯ್ಯನಪಾಳ್ಯ ನಿವಾಸಿಯಾದ ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯೊಬ್ಬಳ್ಳನ್ನು ಪ್ರೀತಿಸುತ್ತಿದ್ದ. ಇತ್ತೀಚಿಗೆ ಆ ಯುವತಿ ಮದುವೆಗೆ ನಿರಾಕರಿಸಿದ್ದಾಳೆ.

ಹೀಗಾಗಿ ಲವ್ ಬ್ರೇಕಪ್ ಮಾಡಿಕೊಳ್ಳಲು ಆಕೆ ಮುಂದಾದ ಹಿನ್ನೆಲೆ ಸೋಮಶೇಖರ್ ಮನೆಯ ಶೀಟ್ ಒಡೆದು ದಾಂಧಲೆ ಮಾಡಿದ್ದಾನೆ. ಬಳಿಕ ಮನೆ ಸಮೀಪದ ಹೈಟೆನ್ಷನ್ ಕಂಬ ಹತ್ತಿ ಹುಡುಗಿ ಬರೋವರೆಗೆ ಕೆಳಗೆ ಇಳಿಯುವುದಿಲ್ಲ ಎಂದು ಹಠಹಿಡಿದು ಕುಳಿತ್ತಿದ್ದ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಆನೇಕಲ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಮನವೊಲಿಸಿದರೂ ಕಿಡಿಗೇಡಿ ಕೆಳಗಿಳಿಯಲಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ತಂಡ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಗ್ರಾಮಾಸ್ಥರು ಜಮಾಯಿಸಿದ್ದು, ಯುವಕನನ್ನ ಕೆಳಗಿಳಿಸಲು ಶತಪ್ರಯತ್ನ ನಡೆಸುತ್ತಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ