NEWSದೇಶ-ವಿದೇಶನಮ್ಮರಾಜ್ಯ

ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್ರಶ್ನೆ

ಸಬಲ ಕುಟುಂಬಗಳು ಮತ್ತು ಅವರ ಮಕ್ಕಳು ನಿರಂತರವಾಗಿ ಕೋಟಾ ಸೌಲಭ್ಯಗಳನ್ನು ಪಡೆಯುತ್ತಲೇ ಇದ್ದರೆ, ನಾವು ಎಂದಿಗೂ ಈ ಮೀಸಲಾತಿ ವ್ಯವಸ್ಥೆಯಿಂದ ಹೊರಬರಲು ಸಾಧ್ಯವೇ ಇಲ್ಲ. ಸಮಾಜದ ತಳಮಟ್ಟದಲ್ಲಿರುವ, ಇಂದಿಗೂ ಯಾವುದೇ ಸೌಲಭ್ಯ ಸಿಗದ ಬಡ ಹಿಂದುಳಿದ ವರ್ಗಗಳ ಜನರಿಗೆ ಸಿಗಬೇಕಾದ ನ್ಯಾಯಯುತ ಅವಕಾಶಗಳನ್ನು ಈ ಶ್ರೀಮಂತ ಅಥವಾ ಪ್ರಭಾವಿ ವರ್ಗದವರು ಕಸಿದುಕೊಳ್ಳುತ್ತಿದ್ದಾರೆ ಎಂದು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು.

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ತಂದೆ ಮತ್ತು ತಾಯಿ ಇಬ್ಬರೂ ಐಎಎಸ್ (IAS) ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ (Reservation) ಸೌಲಭ್ಯ ಏಕೆ ಮುಂದುವರಿಯಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಮಹತ್ವದ ಪ್ರಶ್ನೆ ಎತ್ತಿದ್ದು, ಇದು ಕೆಳ ಬಡವರ್ಗದ ಸಮುದಾಯದ ಮಕ್ಕಳಿಗೆ ಸರ್ಕಾರಿ ಸೌಲಭ್ಯ ಸಿಗಬೇಕು ಎಂಬ ದಶಕಗಳ ಕೂಗಿಗೆ ದನಿಯಾದಂತ್ತಾಗಿದೆ.

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠದಲ್ಲಿ ಇಂದು ಹಿಂದುಳಿದ ವರ್ಗಗಳಲ್ಲಿರುವ ಅತ್ಯಂತ ಶ್ರೀಮಂತ ಅಥವಾ ಸಬಲ ವರ್ಗವನ್ನು (Creamy Layer) ಮೀಸಲಾತಿಯಿಂದ ಹೊರಗಿಡುವ ಸರ್ಕಾರದ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಯಿತು.

ಶಿಕ್ಷಣ ಮತ್ತು ಆರ್ಥಿಕ ಸಬಲೀಕರಣದಿಂದಾಗಿ ಒಂದು ಕುಟುಂಬ ಈಗಾಗಲೇ ಸಾಮಾಜಿಕವಾಗಿ ಮುನ್ನಡೆ ಸಾಧಿಸಿದೆ. ಇಂತಹ ಸಿರಿವಂತಿಕೆ ಸ್ಥಿತಿಯಲ್ಲೂ ಅವರ ಮುಂದಿನ ಪೀಳಿಗೆಗೆ ಮೀಸಲಾತಿ ಕೇಳುತ್ತಾ ಹೋದರೆ ನಾವು ಎಂದಿಗೂ ಈ ವ್ಯವಸ್ಥೆಯಿಂದ ಹೊರಬರಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಕಳವಳ ಪಟ್ಟಿದೆ.

ಇನ್ನು ಮೀಸಲಾತಿಯ ಲಾಭ ಪಡೆದು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಉನ್ನತ ಮಟ್ಟ ತಲುಪಿ ಸಮೃದ್ಧಿ ಜೀವನ ನಡೆಸುತ್ತಿರುವ ಕುಟುಂಬಗಳು ಸ್ವಯಂಪ್ರೇರಿತರಾಗಿ ಮೀಸಲಾತಿ ವ್ಯವಸ್ಥೆಯಿಂದ ಹೊರಗುಳಿಯಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಅಲ್ಲದೆ, ಒಂದು ಕುಟುಂಬವು ಮೀಸಲಾತಿಯ ಲಾಭ ಪಡೆದು ಉನ್ನತ ಶಿಕ್ಷಣ, ಆರ್ಥಿಕ ಸ್ಥಿರತೆ ಮತ್ತು ಸಮಾಜದಲ್ಲಿ ಪ್ರಭಾವಿ ಹುದ್ದೆಗಳನ್ನು ಗಳಿಸಿದಾಗ, ಅವರು ಈಗಾಗಲೇ ಸಾಮಾಜಿಕವಾಗಿ ಮೇಲ್ಮಟ್ಟಕ್ಕೆ ತಲುಪಿದ್ದಾರೆ ಎಂದು ನ್ಯಾಯಮೂರ್ತಿ ನಾಗರತ್ನ ಹೇಳಿದರು.

ಒಂದು ವೇಳೆ ಕೆನೆಪದರಕ್ಕೆ ಸೇರಿದ ಇಂತಹ ಸಬಲ ಕುಟುಂಬಗಳು ಮತ್ತು ಅವರ ಮಕ್ಕಳು ನಿರಂತರವಾಗಿ ಕೋಟಾ ಸೌಲಭ್ಯಗಳನ್ನು ಪಡೆಯುತ್ತಲೇ ಇದ್ದರೆ, ನಾವು ಎಂದಿಗೂ ಈ ಮೀಸಲಾತಿ ವ್ಯವಸ್ಥೆಯಿಂದ ಹೊರಬರಲು ಸಾಧ್ಯವೇ ಇಲ್ಲ. ಸಮಾಜದ ತಳಮಟ್ಟದಲ್ಲಿರುವ, ಇಂದಿಗೂ ಯಾವುದೇ ಸೌಲಭ್ಯ ಸಿಗದ ಬಡ ಹಿಂದುಳಿದ ವರ್ಗಗಳ ಜನರಿಗೆ ಸಿಗಬೇಕಾದ ನ್ಯಾಯಯುತ ಅವಕಾಶಗಳನ್ನು ಈ ಶ್ರೀಮಂತ ಅಥವಾ ಪ್ರಭಾವಿ ವರ್ಗದವರು ಕಸಿದುಕೊಳ್ಳುತ್ತಿದ್ದಾರೆ ಎಂದು ನ್ಯಾಯಪೀಠ ಕಳವಳ ವ್ಯಕ್ತಪಡಿಸಿತು.

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಕೆನೆಪದರ ನಿಯಮದ ಅನುಷ್ಠಾನ ಮತ್ತು ಅದರ ವ್ಯಾಪ್ತಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತು.

ಏನಿದು ಪ್ರಕರಣ?: ಕರ್ನಾಟಕದ ಕುರುಬ ಸಮುದಾಯದ ರಾಘವೇಂದ್ರ ಫಕೀರಪ್ಪ ಚಂದ್ರನಾವರ್ ಎಂಬುವರು ಕೆಪಿಟಿಸಿಎಲ್ ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗೆ ಮೀಸಲಾತಿ ಅಡಿಯಲ್ಲಿ ಆಯ್ಕೆಯಾಗಿದ್ದರು. ಆದರೆ, ಇವರ ತಂದೆ-ತಾಯಿ ಇಬ್ಬರೂ ಸರ್ಕಾರಿ ನೌಕರರಾಗಿದ್ದು, ಅವರ ಒಟ್ಟು ಆದಾಯ 8 ಲಕ್ಷ ರೂ. ಮಿತಿಗಿಂತ ಹೆಚ್ಚಿತ್ತು.

ಆದಾಯದ ಮಿತಿ ಮೀರಿದ ಕಾರಣ ‘ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ’ಯು ಇವರು ಕೆನೆಪದರ (Creamy Layer) ವ್ಯಾಪ್ತಿಗೆ ಬರುತ್ತಾರೆ ಎಂದು ಇವರ ಜಾತಿ ಪ್ರಮಾಣಪತ್ರವನ್ನು ರದ್ದುಗೊಳಿಸಿತ್ತು. ಇದನ್ನು ಕರ್ನಾಟಕ ಹೈಕೋರ್ಟ್ ಕೂಡ ಎತ್ತಿಹಿಡಿದಿತ್ತು. ಅಭ್ಯರ್ಥಿಯು ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...