NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮುಂದೂಡಿಕೆ

ಕಾರ್ಮಿಕ ಇಲಾಖೆ ಆಯುಕ್ತರು ಈ ವೇತನ ಹೆಚ್ಚಳ ವಿಚಾರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕಾರಣ ಆಯುಕ್ತರು ಸರ್ಕಾರದ ಒಬ್ಬ ನೌಕರ ಅಷ್ಟೆ, ಇವರಿಗೆ ಸರ್ಕಾರಕ್ಕೆ ಆದೇಶ ಮಾಡುವ ಅಧಿಕಾರವಿಲ್ಲ. ಇವರು ಸಾರಿಗೆ ನೌಕರರಿಗೆ ಇಷ್ಟು ವೇತನ ಮಾಡಬೇಕು ಎಂದು ಆದೇಶ ಮಾಡುವುದಿದ್ದರೆ ಅದು ಸಿಎಂಗೆ ಮಾಡಬೇಕು. ಏಕೆಂದರೆ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವ ಅಧಿಕಾರ ಇರುವುದು ಸಿಎಂಗೆ ಮಾತ್ರ. ಆದರೆ, ಸಿಎಂಗೆ ಆದೇಶ ಮಾಡುವ ಅಧಿಕಾರ ಈ ಕಾರ್ಮಿಕ ಆಯುಕ್ತರಿಗೆ ಇಲ್ಲ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 1.4.2025ರಿಂದ ಆಗಿರುವ ಶೇ.12.5ರಷ್ಟು ವೇತನ ಹೆಚ್ಚಳ ಹಾಗೂ 26 ತಿಂಗಳ ವೇತನ ಹೆಚ್ಚಳ ಹಿಂಬಾಕಿ ನೀಡಿರುವುದಕ್ಕೆ ಆಕ್ರೋಶಗೊಂಡಿರುವ ನೌಕರರು ನಮಗೆ 1.1.2024ರಿಂದ ವೇತನ ಹೆಚ್ಚಳವಾಗಬೇಕು ಹಾಗೂ 38 ತಿಂಗಳ ಹಿಂಬಾಕಿ ಕೊಡಲೇ ಬೇಕು ಎಂಬ ಪ್ರಮುಖ ಬೇಡಿಕೆಯಿಟ್ಟು ಮೇ20ರಿಂದ ಪ್ರತಿಭಟನೆಗೆ ಕರೆ ನೀಡಿದ್ದರು.

ಆದರೆ, ಈ ಸಂಬಂಧ ಹೈ ಕೋರ್ಟ್‌ನಲ್ಲಿ ಪಿಐಎಲ್‌ ದಾಖಲಾಗಿದ್ದರಿಂದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಇದರ ಜತೆಗೆ ಇನ್ನು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದರು. ಹಿನ್ನೆಯಲ್ಲಿ ಕಾರ್ಮಿಕ ಇಲಾಖೆಯ ಆಯುಕ್ತರು ಸಭೆಯ ಮೇಲೆ ಸಭೆ ಕರೆಯುತ್ತಿದ್ದಾರೆ. ಆದರೆ ಇವರು ಕರೆದಿದ್ದ ರಾಜೀ ಸಂಧಾನ ಸಭೆ ವಿಫಲಗೊಂಡಿದ್ದು ಮತ್ತೆ ಜೂನ್‌ 10ಕ್ಕೆ ಮುಂದೂಡಲಾಗಿದೆ.

ಈ ಸಂಧಾನ ಸಭೆಗೆ ಸಾರಿಗೆ ನಿಗಮಗಳ ಆಡಳಿತವರ್ಗ ಮತ್ತು ಕಾರ್ಮಿಕ ಸಂಘದವರು ಹಾಜರಾಗಿದ್ದರು. ಆದರೆ ಇಂದಿನ ಸಭೆಯೂ ವಿಫಲವಾಗಿದ್ದು, ಜೂನ್‌ 10ಕ್ಕೆ ಮಾಡುವುದಾಗಿ ಆಯುಕ್ತರು ತಿಳಿಸಿದ್ದಾರೆ.

KSRTC, BMTC, NWKRTC ಹಾಗೂ KKRTC ನೌಕರರಿಗೆ 20.05.2026ರ ಬೆಳಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿತ್ತು. ಆದರೆ, ಅಂದು ಹೈ ಕೋರ್ಟ್‌ ನಿರ್ದೇಶನದಿಂದ ಯಾವುದೇ ಮುಷ್ಕರ ನಡೆಯಲು ಅವಕಾಶವಾಗಿಲ್ಲ.

ಈ ನಡುವೆ ರಾಜೀ ಸಂಧಾನ ಸಭೆ ಮತ್ತೆ ಸಭೆ ಜೂನ್‌ 10ಕ್ಕೆ ಮುಂದೂಡಲಾಗಿದೆ. ಹೀಗಾಗಿ ಹೈ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಪಿಐಎಲ್‌ ಪ್ರಕರಣ ಜೂನ್‌ 2ರಂದು ಮತ್ತೆ ವಿಚಾರಣೆಗೆ ಬರಲಿದ್ದು, ಈ ಬಗ್ಗೆ ಹೈ ಕೋರ್ಟ್‌ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಕಾರಣ ಮೊದಲು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಿ ನಂತರ ಬನ್ನು ಎಂದು ಕೋರ್ಟ್‌ ನಿರ್ದೇಶನ ನೀಡಿತ್ತು.

ಒಟ್ಟಾರೆ ಕಾರ್ಮಿಕ ಇಲಾಖೆ ಆಯುಕ್ತರು ಈ ವೇತನ ಹೆಚ್ಚಳ ವಿಚಾರವಾಗಿ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಕಾರಣ ಆಯುಕ್ತರು ಸರ್ಕಾರದ ಒಬ್ಬ ನೌಕರ ಅಷ್ಟೆ, ಇವರಿಗೆ ಸರ್ಕಾರಕ್ಕೆ ಆದೇಶ ಮಾಡುವ ಅಧಿಕಾರವಿಲ್ಲ. ಇವರು ಸಾರಿಗೆ ನೌಕರರಿಗೆ ಇಷ್ಟು ವೇತನ ಮಾಡಬೇಕು ಎಂದು ಆದೇಶ ಮಾಡುವುದಿದ್ದರೆ ಅದು ಸಿಎಂಗೆ ಮಾಡಬೇಕು. ಏಕೆಂದರೆ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವ ಅಧಿಕಾರ ಇರುವುದು ಸಿಎಂಗೆ ಮಾತ್ರ. ಆದರೆ, ಸಿಎಂಗೆ ಆದೇಶ ಮಾಡುವ ಅಧಿಕಾರ ಈ ಕಾರ್ಮಿಕ ಆಯುಕ್ತರಿಗೆ ಇಲ್ಲ.

ಇನ್ನು ಖಾಸಗಿ ಕಂಪನಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ನೌಕರರಿಗೆ ಅನ್ಯಾಯವಾಗುತ್ತಿದೆ ಎಂದರೆ ಅದನ್ನು ಬಗೆ ಹರಿಸುವ ಅಧಿಕಾರ ಈ ಕಾರ್ಮಿಕ ಆಯುಕ್ತರಿಗೆ ಇದೆ. ಏಕೆಂದರೆ ಇವರು ಸರ್ಕಾರದ ಅಧಿಕಾರಿಯಾಗಿ ಖಾಸಗಿ ಕಂಪನಿಯ ಮಾಲೀಕರಿಗೆ ಈ ರೀತಿ ಕಾನೂನಾತ್ಮಕವಾಗಿ ಮಾಡಬೇಕು ಎಂದು ಆದೇಶ ಮಾಡುವ ಅಥವಾ ನಿರ್ದೇಶನ ನೀಡುವ ಅಧಿಕಾರವಿರುತ್ತದೆ. ಆದರೆ, ಸರ್ಕಾರ ಒಬ್ಬ ಅಧಿಕಾರಿಯಾಗಿ ಸರ್ಕಾರಕ್ಕೆ ಆದೇಶ ಮಾಡುವ ಅಧಿಕಾರ ಈ ಆಯುಕ್ತರಿಗೆ ಇಲ್ಲ. ಹೀಗಾಗಿ ಸಾರಿಗೆ ನೌಕರರ ವೇತನ ಸಂಬಂಧದ ಸಮಸ್ಯೆ ಇವರ ಬಳಿ ಬಗೆಹರಿಯುವ ಯಾವುದೇ ಲಕ್ಷಣಗಳು ಇಲ್ಲ. ಇದನ್ನು ನೌಕರರು ಅರ್ಥಮಾಡಿಕೊಳ್ಳಬೇಕಿದೆ.

Deva
the authorDeva

Leave a Reply

error: Content is protected !!
Latest news
KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ