CRIMENEWSಬೆಂಗಳೂರು

GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು

ವಾಣಿಜ್ಯ ಮತ್ತು ವಸತಿ ಸಮುಚ್ಚಯಗಳಿಂದ ಬಲ್ಕ್ ವೇಸ್ಟ್ ಸಂಗ್ರಹಿಸಿ ವಿಲೇವಾರಿ ಮಾಡಲು ಇಕೋ ಸ್ಪೀಯರ್ ವೆಸ್ಟ್ ಸೆಲ್ಯೂಷನ್ ಕಂಪನಿಗೆ ಕಾರ್ಯದೇಶ ನೀಡಿದ್ದು, ನೌಶಾದ್ ಮತ್ತು ಇತರರ ತಂಡ ಕಂಪನಿ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಬಳಸಿಕೊಂಡು ವಿವಿಧ ಪ್ರದೇಶಗಳಿಂದ ಅನಧಿಕೃತವಾಗಿ ಬಲ್ಕ್ ತ್ಯಾಜ್ಯವನ್ನು ಸಂಗ್ರಹಿಸಿದೆ. 

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆಯ ಮಹದೇವಪುರ ವಲಯದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಘನತ್ಯಾಜ್ಯವನ್ನು ಸಾಗಿಸಿ ಖಾಲಿ ಜಾಗಗಳಲ್ಲಿ ಸುರಿಯುತ್ತಿದ್ದ ವಾಹನಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ 6 ವಾಹನಗಳನ್ನು ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ತಿಳಿಸಿದ್ದಾರೆ.

ಪೂರ್ವ ನಗರ ಪಾಲಿಕೆಯ ವಿವಿಧ ಪ್ರದೇಶಗಳ ವಾಣಿಜ್ಯ ಮತ್ತು ವಸತಿ ಸಮುಚ್ಚಯಗಳಿಂದ ಬಲ್ಕ್ ವೇಸ್ಟ್ ಸಂಗ್ರಹಿಸಿ ವಿಲೇವಾರಿ ಮಾಡಲು ಇಕೋ ಸ್ಪೀಯರ್ ವೆಸ್ಟ್ ಸೆಲ್ಯೂಷನ್ ಕಂಪನಿಗೆ ಕಾರ್ಯದೇಶ ನೀಡಿದ್ದು, ನೌಶಾದ್ ಮತ್ತು ಇತರರ ತಂಡ ಕಂಪನಿ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಬಳಸಿಕೊಂಡು ವಿವಿಧ ಪ್ರದೇಶಗಳಿಂದ ಅನಧಿಕೃತವಾಗಿ ಬಲ್ಕ್ ತ್ಯಾಜ್ಯವನ್ನು ಸಂಗ್ರಹಿಸಿದೆ.

ಅಲ್ಲದೆ ಸಂಗ್ರಹಿಸಿದ ಕಸವನ್ನು ಕಾಡುಗೋಡಿ ವ್ಯಾಪ್ತಿಯ ಸಿದ್ದಾರ್ಥ ಲೇಔಟ್ ಸಮೀಪದ ಸರ್ವೇ ನಂ.130, 131 ಹಾಗೂ 142ಕ್ಕೆ ಹೊಂದಿಕೊಂಡಿರುವ ದಕ್ಷಿಣ ಪಿನಾಕಿನಿ ನದಿಗೆ ಸುರಿಯಲಾಗುತ್ತಿದೆ ಎಂಬ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಅಧಿಕಾರಿಗಳು ನಿರಂತರ ನಿಗಾವಹಿಸಿ ಕಾರ್ಯಾಚರಣೆ ಕೈಗೊಂಡಿದ್ದರು ಎಂದು ಆಯುಕ್ತರು ಮಾಹಿತಿ ನೀಡಿದರು.

6-ವಾಹನಗಳ ವಶ: ಸಾರ್ವಜನಿಕ ದೂರಿನ ಆಧಾರದ ಮೇರೆಗೆ ಇದೇ ಮೇ 29ರಂದು ನಗರ ಪಾಲಿಕೆಯ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯಲು ಸ್ಥಳಕ್ಕೆ ಆಗಮಿಸಿದ್ದ ತ್ಯಾಜ್ಯ ತುಂಬಿರುವ 5 ವಾಹನಗಳನ್ನು ವಶಪಡಿಸಿಕೊಳ್ಳಲಾಯಿತು, ವಾಹನ ಚಾಲಕರು ಸ್ಥಳದಿಂದ ಪರಾರಿಯಾಗಿದ್ದಾರೆ ಹಾಗೂ ಇದೇ ಸ್ಥಳದಲ್ಲಿ ಮೇ 30ರಂದು ಮತ್ತೊಂದು ವಾಹನವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ರಮೇಶ್ ತಿಳಿಸಿದ್ದಾರೆ.

ಕಾಡುಗೋಡಿ ಠಾಣೆಯಲ್ಲಿ ಎಫ್‌ಐಆರ್: ನಗರ ಪಾಲಿಕೆಯ ಸಹಾಯಕ ಪ್ರಧಾನ ವ್ಯವಸ್ಥಾಪಕರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದ್ದು, ವಾಹನಗಳ ಮಾಲೀಕರು, ಚಾಲಕರು, ಸಂಬಂಧಪಟ್ಟ ವ್ಯಕ್ತಿಗಳು ಹಾಗೂ ತ್ಯಾಜ್ಯ ಸುರಿಯಲು ಅವಕಾಶ ನೀಡಿದ ಭೂ ಮಾಲೀಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲು ಕಾಡುಗೋಡಿ ಆರಕ್ಷಕ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.

ಅಕ್ರಮ ತ್ಯಾಜ್ಯ ವಿಲೇವಾರಿ-ಎಚ್ಚರಿಕೆ: ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತ ಡಿ.ಎಸ್. ರಮೇಶ್, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುವ ಚಟುವಟಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಗರದ ಸ್ವಚ್ಛತೆ, ಸಾರ್ವಜನಿಕ ಆರೋಗ್ಯ ಹಾಗೂ ಪರಿಸರ ಸಂರಕ್ಷಣೆಗೆ ಧಕ್ಕೆಯುಂಟುಮಾಡುವ ಇಂತಹ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ನಗರ ಪಾಲಿಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ತ್ಯಾಜ್ಯವನ್ನು ಅನಧಿಕೃತ ಸ್ಥಳಗಳಲ್ಲಿ ಸುರಿಯುವುದು, ಖಾಲಿ ಜಾಗಗಳನ್ನು ಕಸದ ತೊಟ್ಟಿಗಳಾಗಿ ಬಳಸುವುದು ಹಾಗೂ ಅಕ್ರಮ ಸಾಗಣೆ ನಡೆಸುವವರ ವಿರುದ್ಧ ದಂಡಾತ್ಮಕ ಹಾಗೂ ಕ್ರಿಮಿನಲ್ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.

ಸಾರ್ವಜನಿಕರ ಸಹಕಾರ ಬೇಕು: ನಗರವನ್ನು ಸ್ವಚ್ಛ ಹಾಗೂ ಆರೋಗ್ಯಯುತವಾಗಿಡುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ ಆಯುಕ್ತರು, ಈ ರೀತಿ ತ್ಯಾಜ್ಯ ಸುರಿಯುವ ವಾಹನಗಳು ಅಥವಾ ವ್ಯಕ್ತಿಗಳ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ನಗರ ಪಾಲಿಕೆಗೆ ಅಥವಾ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಿದರು.

ಕಾರ್ಯಾಚರಣೆಯಲ್ಲಿ ಘನತ್ಯಾಜ್ಯ ನಿರ್ವಹಣಾ ವಿಭಾಗದ ಸಹಾಯ ಪ್ರಧಾನ ವ್ಯವಸ್ಥಾಪಕರು, ಮಾರ್ಷಲ್ ಸೂಪರ್ವೈಸರ್, ವಾರ್ಡ್ ಮಾರ್ಷಲ್, ಆರೋಗ್ಯ ಪರಿವೀಕ್ಷಕರು ಹಾಗೂ ಇನ್ನಿತರೆ ಸಿಬ್ಬಂದಿಗಳು ಇದ್ದರು.

Deva
the authorDeva

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ