NEWSನಮ್ಮಜಿಲ್ಲೆನಮ್ಮರಾಜ್ಯ

KKRTC- ಮೇ 18ರಿಂದ 22ರವರೆಗೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆ ಮಂಜೂರು ಮಾಡಲು ಡಿಸಿಗಳಿಗೆ ಸಿಟಿಎಂ ಆದೇಶ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 18.05.2026 ರಿಂದ 22.05.2026 ರವರೆಗೆ ರಜೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆಗಳನ್ನು ಪರಿಶೀಲಿಸಿ ಮಂಜೂರು ಮಾಡುವಂತೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಎಲ್ಲ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ 18.05.2026 ರಿಂದ 22.05.2026 ರವರೆಗೆ ರಜೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆಗಳನ್ನು ಪರಿಶೀಲಿಸಿ ಮಂಜೂರು ಮಾಡುವಂತೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಎಲ್ಲ ಹಿರಿಯ, ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಆದೇಶ ಮಾಡಿದ್ದಾರೆ.

ಈ ಸಂಬಂಧ ಮಂಗಳವಾರ ಜೂನ್‌ 2ರಂದು ಆದೇಶ ಹೊರಡಿಸಿರುವ ಅವರು ಸಕ್ಷಮ ಪ್ರಾಧಿಕಾರಿಗಳಾದ ವ್ಯವಸ್ಥಾಪಕ ನಿರ್ದೇಶಕರ ಆದೇಶವಾಗಿದ್ದು ಅದರಂತೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ.

ಇನ್ನು ಈ ವಿಷಯಕ್ಕೆ ಸಂಬಂಧಿಸಿದಂತೆ, 20.05.2026 ರಂದು ಜಂಟಿ ಕ್ರಿಯಾ ಸಮಿತಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರಕ್ಕೆ ಕರೆಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಕೆಲಸಮಾಡದಿದ್ದಾಗ ವೇತನವಿಲ್ಲ ಎಂಬ ನಿಯಮ ಜಾರಿಮಾಡಿ 18.05.2026 ರಿಂದ 22.05.2026 ರವರೆಗೆ ಚಾಲನಾ ಸಿಬ್ಬಂದಿಗಳು ಮೊಬೈಲ್ ಮುಖಾಂತರ ಪಡೆದಿದ್ದ ರಜೆಗಳನ್ನು ರದ್ದುಪಡಿಸಲಾಗಿತ್ತು.

ಇತ್ತ ಆ ಬಳಿಕ ನ್ಯಾಯಾಲಯದ ನಿರ್ದೇಶನದಂತೆ ಮುಷ್ಕರ ಹಿಂಪಡೆದಿರುವುದರಿಂದ ಈ ಅವಧಿಯಲ್ಲಿ ಮೊಬೈಲ್ ಮುಖಾಂತರ (LMS  Leave) ಮಂಜೂರಾಗಿ, ರದ್ದುಪಡಿಸಿರುವ ರಜೆಗಳನ್ನು ಪರಿಶೀಲಿಸಿ ಮ್ಯಾನಿವಲ್ ರಜೆಗಳನ್ನು ಮಂಜೂರು ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ.

ಹೀಗಾಗಿ 18.05.2026 ರಿಂದ 22.05.2026 ರವರೆಗೆ ಚಾಲನಾ ಸಿಬ್ಬಂದಿಗಳು ಮೊಬೈಲ್ ಮುಖಾಂತರ ಪಡೆದಿದ್ದ ರಜೆಗಳನ್ನು ರದ್ದುಪಡಿಸಿದ್ದು, ಅವುಗಳನ್ನು ಪರಿಶೀಲಿಸಿ ಮ್ಯಾನಿವಲ್ ರಜೆಗಳನ್ನು ಮಂಜೂರು ಮಾಡುವ ಮೂಲಕ ನೌಕರರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಶಾಲೆ- ಕಾಲೇಜು ಹುಡುಗರಿಗೆ ಫ್ರೀ ಬಸ್ : ನೂತನ ಸಿಎಂ ಡಿಕೆಶಿ ಘೋಷಣೆ ಕರ್ನಾಟಕದ 25 ನೇ ಮುಖ್ಯಮಂತ್ರಿಯಾಗಿ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್‌ ಇಂದು ಸಂಜೆ ಡಿಕೆಶಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ-ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರಕ್ಕೆ ವ್ಯವ... ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಐರಾವತ ಬಸ್ KSRTCಯ ಉಚಿತ ಬಸ್‌ಪಾಸ್ ಪಡೆಯುವ ಪತ್ರಕರ್ತರು ಜೂ.20 ರೊಳಗೆ ಅರ್ಜಿ ಸಲ್ಲಿಸಿ: ಆಯುಕ್ತ ಹೇಮಂತ್ ನಿಂಬಾಳ್ಕರ್ KKRTC- ಮೇ 18ರಿಂದ 22ರವರೆಗೆ ಪಡೆದಿರುವ ಚಾಲನಾ ಸಿಬ್ಬಂದಿಗಳ ರಜೆ ಮಂಜೂರು ಮಾಡಲು ಡಿಸಿಗಳಿಗೆ ಸಿಟಿಎಂ ಆದೇಶ ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತಯ ಅತ್ಯಾಚಾರಕ್ಕೆ ಯತ್ನ: ಬಂಧನ, ಮತ್ತಿಬ್ಬರ ಪತ್ತೆಗೆ ಬಲೆ ಬೀಸಿದ ಪೊಲೀಸರ... ನಾಳೆ ಮಧ್ಯಾಹ್ನದ ಬಳಿಕ ವಿಧಾನ ಸೌಧ, ವಿಕಾಸ ಸೌಧ, ಬಹುಮಹಡಿಗಳ ಕಟ್ಟಡದ ನೌಕರರಿಗೆ ರಜೆ ಘೋಷಿಸಿ ಸರ್ಕಾರದ ಆದೇಶ ಮುಂದಿನ 5 ವರ್ಷದಲ್ಲಿ ಉದ್ಯೋಗವಿಲ್ಲದ ಪದವೀಧರರ ಸಂಖ್ಯೆ ಹೆಚ್ಚಾಗಲಿದೆ, ಇತ್ತ ಪ್ಲಂಬರ್, ಎಲೆಕ್ಟ್ರಿಷಿಯನ್ಸ್‌ ಸಿಗಲ್ಲ–... ಬನ್ನೂರು: ತಮಿಳುನಾಡಿನ ಮಾಜಿ ಸಿಎಂ ದಿ. ಜಯಲಲಿತಾರ ಅಣ್ಣ ವಾಸುದೇವನ್ ನಿಧನ