NEWSದೇಶ-ವಿದೇಶನಮ್ಮರಾಜ್ಯ

ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ

ಮಲೇಷಿಯಾ ಪ್ರಧಾನಿ ಅವರು ನೂತನ ಸಿಎಂ ಡಿಕೆಶಿ ಅವರಿಗೆ ಶುಭಾಶಯ ತಿಳಿಸಿದರು ಮತ್ತು ಕರ್ನಾಟಕದೊಂದಿಗಿನ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಲೇಷಿಯಾಕ್ಕೆ ಭೇಟಿ ನೀಡಲು ಆಹ್ವಾನ ನೀಡಿದರು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಲೇಷಿಯಾದ ಪ್ರಧಾನಿ ಅನ್ವರ್‌ ಇಬ್ರಾಹಿಂ ಅವರೊಂದಿಗೆ ಆತ್ಮೀಯ ಮತ್ತು ಸೌಹಾರ್ದಯುತ ದೂರವಾಣಿ ಸಂಭಾಷಣೆ ನಡೆಸಿದರು.

ಈ ವೇಳೆ ಮಲೇಷಿಯಾ ಪ್ರಧಾನಿ ಅವರು ನೂತನ ಸಿಎಂ ಡಿಕೆಶಿ ಅವರಿಗೆ ಶುಭಾಶಯ ತಿಳಿಸಿದರು ಮತ್ತು ಕರ್ನಾಟಕದೊಂದಿಗಿನ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಲೇಷಿಯಾಕ್ಕೆ ಭೇಟಿ ನೀಡಲು ಆಹ್ವಾನ ನೀಡಿದರು.

ಮುಖ್ಯಮಂತ್ರಿ ಡಿಕೆಶಿ ಅವರು ಅವರಿಗೆ ಕೃತಜ್ಞತೆ ಸಲ್ಲಿಸಿ ಪರಸ್ಪರ ಅನುಕೂಲಕರ ಸಮಯದಲ್ಲಿ ಮಲೇಷಿಯಾಕ್ಕೆ ಭೇಟಿ ನೀಡುವ ಆಶಯವನ್ನು ವ್ಯಕ್ತಪಡಿಸಿದರು.

ಅಲ್ಲದೆ ತಾವುಕೂಡ ಕರ್ನಾಟಕಕ್ಕೆ ಭೇಟಿ ನೀಡಿ ರಾಜ್ಯದ ನಾವೀನ್ಯತೆ, ಕೈಗಾರಿಕೆ, ತಂತ್ರಜ್ಞಾನ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿನ ಸಾಮರ್ಥ್ಯಗಳನ್ನು ಅನುಭವಿಸುವಂತೆ ಇದೇ ವೇಳೆ ಪ್ರಧಾನಿಯನ್ನು ಆಹ್ವಾನಿಸಿದರು.

ಮಲೇಷಿಯಾ ಮತ್ತು ಕರ್ನಾಟಕದ ನಡುವಿನ ಸಹಯೋಗವನ್ನು ಇನ್ನಷ್ಟು ಬಲಪಡಿಸಲು, ವ್ಯಾಪಾರ, ಹೂಡಿಕೆ, ತಂತ್ರಜ್ಞಾನ, ಶಿಕ್ಷಣ, ಪ್ರತಿಭಾ ವಿನಿಮಯ ಮತ್ತು ಸಾಂಸ್ಕೃತಿಕ ಸಹಕಾರದಲ್ಲಿ ಬಲವಾದ ಪಾಲುದಾರಿಕೆಯನ್ನು ಬೆಳೆಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎದುರು ನೋಡುತ್ತಿದ್ದಾರೆ ಎಂದು ಹೇಳಿದರು.

ಅಲ್ಲದೆ ಕರ್ನಾಟಕದಲ್ಲಿ ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಸಾವಿರಾರು ಮಲೇಷ್ಯಾ ವಿದ್ಯಾರ್ಥಿಗಳು ಇರುವುದರಿಂದ, ಇನ್ನೂ ಹೆಚ್ಚಿನ ಹಂಚಿಕೆಯ ಬೆಳವಣಿಗೆ ಮತ್ತು ಸಮೃದ್ಧಿಗೆ ಅಡಿಪಾಯವಾಗಿ ಕಾರ್ಯನಿರ್ವಹಿಸುವ ಜತೆಗೆ ಎಲ್ಲರ ಸಂಪರ್ಕದಲ್ಲಿರುವುದಾಗಿ ಸಿಎಂ ಭರವಸೆ ನೀಡಿದರು.

Deva
the authorDeva

Leave a Reply

error: Content is protected !!
Latest news
ನಮ್ಮ ಮೆಟ್ರೋದಲ್ಲಿ ಸಾರ್ವಜನಿಕರೊಂದಿಗೆ ಪ್ರಯಾಣಿಸುವ ಅವಕಾಶ ಸಿಕ್ಕಿತು: ಸಿಎಂ ಡಿಕೆಶಿ ನೂತನ ಸಿಎಂ ಡಿಕೆಶಿಗೆ ಶುಭಾಶಯ ಕೋರಿದ ಮಲೇಷಿಯಾ ಪ್ರಧಾನಿ ಅನ್ವರ್‌ ಇಬ್ರಾಹಿಂ KKRTC: ನೌಕರರ ಮೇ ತಿಂಗಳ ವೇತನ ನಾಳೆ ಆಗುತ್ತದೆ, ಗೊಂದಲ ಬೇಡ: ಸಿಎಒ ಸ್ಪಷ್ಟನೆ KSRTC: ಮೂರು ವರ್ಷಕ್ಕೂ ಹೆಚ್ಚುಕಾಲ ಒಂದೇ ಕಡೆ ಬೇರುಬಿಟ್ಟಿರುವ ನೌಕರರ ವರ್ಗಾವಣೆಗೆ ಆದೇಶ ಬೆಳ್ಳಂಬೆಳಗ್ಗೆ ಗ್ರಾಹಕರಿಗೆ ಶಾಕ್‌ ಕೊಟ್ಟ ಕೇಂದ್ರ ಸರ್ಕಾರ: ಗೃಹಬಳಕೆ ಗ್ಯಾಸ್‌ ಸಿಂಡರ್‌ಗೆ 29 ರೂ. ಏರಿಕೆ, ಇಂದಿನಿಂದ... ರಾಮಲಿಂಗಾರೆಡ್ಡಿ: ರಾಜೀನಾಮೆ ವಾಪಸ್‌ -ಡಿಕೆಶಿ ಸರ್ಕಾರದಲ್ಲಿದ್ದ ಭಿನ್ನಮತ ಶಮನ ಸರ್ಕಾರದ ಮಹತ್ವಾಕಾಂಕ್ಷಿ ಭೂ ಗ್ಯಾರಂಟಿ ಯೋಜನೆಯ "ನನ್ನ ಇ-ಖಾತಾ ನನ್ನ ಹಕ್ಕು" ಅಭಿಯಾನಕ್ಕೆ ಉತ್ತಮ ಸ್ಪಂದನೆ ಪಾರ್ಕ್‌ಗಳ ನಡಿಗೆದಾರರ ಸ್ನೇಹಿಯನ್ನಾಗಿ ರೂಪಿಸಿ: ನೂತನ ಆಯುಕ್ತ ಜಗದೀಶ್ ಕರೆ 100 ವರ್ಷವಾದರೂ ಸಾಧನೆಗಳ ಮೂಲಕ ಅರಸು ಜೀವಂತ: ಸಿಎಂ ಡಿ.ಕೆ.ಶಿವಕುಮಾರ್‌ ಪರಿಸರ ಸಂರಕ್ಷಣೆ ನಮ್ಮ ಜೀವನದ ಅವಿಭಾಜ್ಯ ಅಂಗ: ನೈರ್ಮಲ್ಯ ಇಲಾಖೆ ಆಯುಕ್ತೆ ಫೌಜಿಯಾ