NEWSನಮ್ಮರಾಜ್ಯ

4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುತ್ತಿರುವ ಸರ್ಕಾರ ಈವರೆಗೂ ಮೃತಪಟ್ಟವರು ಹಾಗೂ ಆದಾಯ ತೆರೆಇಗೆ ಪಾವತಿದಾರರು 2 ಸಾವಿರ ರೂ.ಗಳನ್ನು ಪಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈಗಗಾಗಲೇ 4.30 ಲಕ್ಷ ಮಂದಿಯನ್ನು ಯೋಜನೆಯಿಂದ ಹೊರಗಿಡಲಾಗಿದೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ ಪಡೆಯುತ್ತಿರುವ 2 ಸಾವಿರ ರೂ.ಗಳನ್ನು ಮೃತಪಟ್ಟವ ಹೆಸರಿನಲ್ಲೂ ಹಾಗೂ ಆದಾಯ ತೆರೆಗೆ ಪಾವತಿಸುತ್ತಿರುವವರು ಸೇರಿದಂತೆ ಸುಮಾರು 4.30ಲಕ್ಷ ಮಂದಿ ಪಡೆಯುತ್ತಿರುವುದು ಪತ್ತೆಯಾಗಿದ್ದು, ಈ ಇಷ್ಟು ಮಂದಿಯನ್ನು ಈ ಯೋಜನೆಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೈ ಬಿಟ್ಟಿದೆ.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪರಿಷ್ಕರಣೆ ಮಾಡುತ್ತಿರುವ ಸರ್ಕಾರ ಈವರೆಗೂ ಮೃತಪಟ್ಟವರು ಹಾಗೂ ಆದಾಯ ತೆರೆಇಗೆ ಪಾವತಿದಾರರು 2 ಸಾವಿರ ರೂ.ಗಳನ್ನು ಪಡೆಯುತ್ತಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈಗಗಾಗಲೇ 4.30 ಲಕ್ಷ ಮಂದಿಯನ್ನು ಯೋಜನೆಯಿಂದ ಹೊರಗಿಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಫಲಾನುಭವಿಗಳಾಗಿ ಯೋಜನೆಯ ಸೌಲಭ್ಯ (2000 ರೂ.) ಪಡೆಯುತ್ತಿದ್ದ 1.26 ಲಕ್ಷಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರ. ಇದರ ಜತೆಗೆ ಅನರ್ಹ ಫಲಾನುಭವಿಗಳು ಅಂದರೆ ಆದಾಯ ತೆರಿಗೆ ಪಾವತಿಸುತ್ತಿರುವವರು ಯೋಜನೆಯಡಿ ಸೌಲಭ್ಯ ಪಡೆಯುತ್ತಿರುವುದು ಗೊತ್ತಾಯಿತು.

ಆ ಕೂಡಲೇ ಸರ್ಕಾರ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಗ್ರಾಮ ಪಂಚಾಯಿತಿಗಳ ಮೂಲಕ ಮೃತಪಟ್ಟವರು ಹಾಗೂ ಆದಾಯ ತೆರಿಗೆ ಪಾವತಿದಾರರ ಮಾಹಿತಿ ಕಲೆಹಾಕಿ ಈಗ 4.30 ಲಕ್ಷ ಅನರ್ಹ ಫಲಾನುಭವಿಗಳನ್ನು ಯೋಜನೆಯಿಂದ ಕೈ ಬಿಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಿಳಿಸಿದೆ.

ಹೌದು! ರಾಜ್ಯದಲ್ಲಿ ಈವರೆಗೂ ಮೃತಪಟ್ಟ 1.26 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಖಾತೆಗಳಿಗೆ ಗೃಹಲಕ್ಷ್ಮಿಯೋಜನೆಯ ಹಣ ಜಮೆಯಾಗಿರುವುದು ಪತ್ತೆಯಾಗಿದೆ. ಈ ದುರುಪಯೋಗ ತಡೆಯಲು ಸರ್ಕಾರ ಕಡ್ಡಾಯ ಬಯೋಮೆಟ್ರಿಕ್ ಪರಿಶೀಲನೆ ಜಾರಿಗೆ ತಂದಿದೆ.

ಈ ನಡುವೆ ದಾವಣಗೆರೆ, ಹಾವೇರಿ ಮತ್ತು ಕೋಲಾರದಂತಹ ಜಿಲ್ಲೆಗಳಲ್ಲಿ ಮೃತಪಟ್ಟವರ ಖಾತೆಗಳಿಂದ ಈಗಾಗಲೇ ಲಕ್ಷಾಂತರ ರೂ.ಗಳನ್ನು ಸರ್ಕಾರ ವಾಪಸ್ ಪಡೆದಿದೆ. ಈ ಯೋಜನೆಯಲ್ಲಿನ ಅವ್ಯವಹಾರ ಮತ್ತು ಮೃತರ ಪತ್ತೆ ಕುರಿತ ಪ್ರಮುಖ ಮಾಹಿತಿಯನ್ನು ಇನ್ನೂ ಕಲೆಹಾಕುತ್ತಿದೆ.

ರಾಜ್ಯದಲ್ಲಿ ಸುಮಾರು 1,06,922 ಮೃತ ಫಲಾನುಭವಿಗಳಿಗೆ ಪ್ರತಿ ತಿಂಗಳು ₹2,000 ರಂತೆ ಒಟ್ಟು 5.72 ಲಕ್ಷಕ್ಕೂ ಹೆಚ್ಚು ಕಂತುಗಳು ಪಾವತಿಯಾಗಿದ್ದವು. ಅದನ್ನು ಜನನ ಮತ್ತು ಮರಣ ನೋಂದಣಿ ಪೋರ್ಟಲ್ ಹಾಗೂ ಬ್ಯಾಂಕ್ ಅಧಿಕಾರಿಗಳ ಜತೆಗೆಗೂಡಿ ಪರಿಶೀಲನೆ ಮೂಲಕ ಮೃತರನ್ನು ಪತ್ತೆ ಹಚ್ಚಿ, ಅವರ ಖಾತೆಗಳಿಂದ ಹಣವನ್ನು ಸರ್ಕಾರಕ್ಕೆ ಮರಳಿ ಜಮೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಯೋಮೆಟ್ರಿಕ್ ಕಡ್ಡಾಯ: ಮೃತರು ಹಾಗೂ ಆದಾಯ ತೆರಿಗೆ ಪಾವತಿದಾರರು ಯೋಜನೆಯ ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯಲು ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ‘ಒನ್-ಟೈಮ್ ಬಯೋಮೆಟ್ರಿಕ್’ ಕಡ್ಡಾಯಗೊಳಿಸಿದೆ.

ಫಲಾನುಭವಿಗಳು ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಿಗೆ ತೆರಳಿ ತಮ್ಮ ಮೊಬೈಲ್ ಸಂಖ್ಯೆ ಹಾಗೂ ಬೆರಳಚ್ಚು ನೀಡಿ ಖಾತೆ ನವೀಕರಿಸಿಕೊಳ್ಳುವುದು ಕಡ್ಡಾಯವಾಗಿದ್ದು, ತಪ್ಪಿದರೆ ಮುಂದಿನ ಕಂತಿನ ಹಣ ಕಡಿತಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹೇಳಿದೆ.

Deva
the authorDeva

Leave a Reply

error: Content is protected !!
Latest news
ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತು 10ನೇ ತರಗತಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಜಿಗಿದು ಆತ್ಮಹತ್ಯೆ KSRTC ಎಂಡಿ ಅಕ್ರಮ್‌ಪಾಷ ವರ್ಗಾವಣೆ ಪ್ರಭಾರ ಎಂಡಿಯಾಗಿ ಡಾ.ಆರ್‌. ಸೆಲ್ವಮಣಿ ನೇಮಕ ಮಾಡಿ ಸರ್ಕಾರದ ಆದೇಶ 4.30 ಲಕ್ಷ ಮೃತಪಟ್ಟ, ಅನರ್ಹರ ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಟ್ಟ ಸರ್ಕಾರ ಲಯನ್ಸ್ ಕ್ಲಬ್ ಆಫ್ ಬೆಂಗಳೂರು ಗೋಕುಲದ ಅಧ್ಯಕ್ಷ ಲಯನ್ ಅರವಿಂದ ಕೆ.ಆರ್.ಮಾರುಕಟ್ಟೇಲಿ ಅಗ್ನಿ ಅವಘಡ ತಡೆಗೆ ಫೈರ್ ಆಡಿಟ್: ಮುಖ್ಯ ಆಯುಕ್ತ ಮಹೇಶ್ವರ್ ರಾವ್ KSRTC ಫ್ರೀ ಬಸ್‌ಪಾಸ್‌ ಈ ತಿಂಗಳು ಸಿಗುವುದು ಡೌಟ್‌- ನಿತ್ಯ ಹಣಕೊಟ್ಟು ಓಡಾಡುತ್ತಿರುವ ವಿದ್ಯಾರ್ಥಿಗಳ ಗೋಳು ಕೇಳುವವರು... ಉಕ್ಕು ಸ್ಥಾವರ ದುರಂತ: ಮೃತರ ಕುಟುಂಬಕ್ಕೆ 25 ಲಕ್ಷ ರೂ. ಗಾಯಗೊಂಡವರಿಗೆ 10 ಲಕ್ಷ ರೂ. ಪರಿಹಾರ: ಕೇಂದ್ರ ಸಚಿವ ಎಚ್‌ಡಿಕ... ಗೃಹಲಕ್ಷ್ಮಿ ಹಣ ಪಡೆಯಲು 5 ರೂ.ಪಾವತಿಸಿ ಬಯೋಮೆಟ್ರಿಕ್ ನೀಡುವುದು ಕಡ್ಡಾಯ: 20 ದಿನದೊಳಗೆ ಬಯೋಮೆಟ್ರಿಕ್ ಜಾರಿ 3,991 ಪೊಲೀಸ್‌ ಕಾನ್‌ಸ್ಟೆಬಲ್‌ (ಸಿವಿಲ್‌) ಹುದ್ದೆಗೆ ಅರ್ಜಿ ಆಹ್ವಾನ- ಕೊನೇದಿನ ಜು.3 ಡಿಸಿಎಂ ಸೇರಿ 13 ಸಚಿವರಿಗೆ ವಿಧಾನಸೌಧ, ವಿಕಾಸಸೌಧದಲ್ಲಿ ಕಚೇರಿ ಹಂಚಿಕೆ ಮಾಡಿ ಆಡಳಿತ ಸುಧಾರಣೆ ಇಲಾಖೆ ಆದೇಶ