NEWSನಮ್ಮರಾಜ್ಯವಿಜ್ಞಾನ

ನಾಳೆಯಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕಾ

ರಾತ್ರಿ 10.30ರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿಸಿ ಎಂದು ಶಾಂತಿಯುತ ಪ್ರತಿಭಟನೆ ಮಾಡುತ್ತಿದ್ದ, ಸಾರಿಗೆ ನೌಕರರನ್ನು ಪೊಲೀಸರು ಬಂಧನ ಮಾಡಿದ್ದಕ್ಕೆ ಕೆರಳಿರುವ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸದಿರುವುದರಿಂದ ಮತ್ತಷ್ಟು ಆಕ್ರೋಶಗೊಂಡಿರುವ ನೌಕರರು ನಾಳೆ (ಡಿ11)ಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಜ್ಜಾಗಿದ್ದಾರೆ.

ಇನ್ನು ಪ್ರತಿಭಟನೆಗೆ ಬೆಂಬಲ ಸೂಚಿಸಿ ಭಾಗವಹಿಸಿದ್ದ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಕೂಡ ಪೊಲೀಸರು ಬಂಧಿಸಿ, ಬಳಿಕ ಆಡುಗೋಡಿ ಮೈದಾನಕ್ಕೆ ಕರೆದುಕೊಂಡು ಹೋಗಿದ್ದು ಅಲ್ಲದೆ, ಅವರ ಮೊಬೈಲ್‌ಫೋನ್‌ಗಳನ್ನು ಕಸಿದುಕೊಂಡಿದ್ದರು ಎಂದು ನೌಕರರು ಆರೋಪಿಸಿ ಅನಿರ್ದಿಷ್ಟಾವಧಿ ಮುಷ್ಕರ ಮಾಡುವುದಾಗಿ ತಿಳಿಸಿದ್ದಾರೆ.

ರಾತ್ರಿ 10.30ರಲ್ಲಿ ಸುದ್ದಿಗೋಷ್ಠಿ ನಡೆಸಿದ ಕೋಡಿಹಳ್ಳಿ ಚಂದ್ರಶೇಖರ್,  ನೌಕರರ ಸಮಸ್ಯೆ ಆಲಿಸಿ ಅದಕ್ಕೆ ಪರಿಹಾರ ಕೊಡುವಲ್ಲಿ ಸರ್ಕಾರ ಮತ್ತು ಸಾರಿಗೆ ಸಚಿವರು ಎಡವಿರುವುದರಿಂದ ನಾವು ಒಕ್ಕೊರಲಿನಿಂದ  ಅನಿರ್ದಿಷ್ಟಾವಧಿ ಮುಷ್ಕರದ  ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

ಹೀಗಾಗಿ ನಾಳೆಯಿಂದ ಸಾರಿಗೆಯ ನಾಲ್ಕೂ ನಿಗಮಗಳ ಬಸ್‌ಗಳು ಕಾರ್ಯಾಚರಣೆ ಮಾಡುವುದಿಲ್ಲ. ಇನ್ನು ನಮ್ಮ ಬೇಡಿಕೆ ಈಡೇರುವವರೆಗೂ ಮುಷ್ಕರ ನಡೆಯಲಿದೆ. ಯಾವುದೇ ಒಬ್ಬ ನೌಕರನೂ ಕೂಡ ನಾಳೆಯಿಂದ ಕರ್ತವ್ಯಕ್ಕೆ ಹಾಜರಾಗದೇ ಮನೆಯಲ್ಲಿಯೇ ಇದ್ದು ಮುಷ್ಕರಕ್ಕೆ ಬೆಂಬಲ ಸೂಚಿಸಬೇಕು ಎಂದು ಹೇಳಿದ್ದಾರೆ.

ಈ ನಡುವೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಲ್ಲ ಇಲ್ಲ ನಾಳೆ ಎಂದಿನಂತೆ ಸಾರಿಗೆ ಸಂಸ್ಥೆ ಬಸ್‌ಗಳು ಓಡಾಡಲಿವೆ ಎಂದು ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ನಾಲ್ಕೂ ನಿಗಮಗಳ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಜತೆಗೆ ನೌಕರರಲ್ಲೂ ಮನವಿ ಮಾಡಿದ್ದು ನಾಳೆ ಬಸ್‌ ಸಂಚಾರ ಎಂದಿನಂತೆ ಇರಲಿದೆ ಎಂದು ಹೇಳಿದ್ದಾರೆ.

1 Comment

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್