CRIMENEWS

ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ

ಹಲ್ಲೆ ಮಾಡಿದವರು ಇದೇ ಘಟಕದ ನೌಕರರಾದ ಮುನಿ, ಬಸವರಾಜು, ಕುಮಾರ್, ಶಿವಮೂರ್ತಿ ಹಾಗೂ ದೇವರಾಜ್ ಎಂದು ಗುರುತಿಸಲಾಗಿದೆ. ಈ ಐವರು ಆರೋಪಿಗಳು ಚಾಲಕನ ಮೇಲೆ ಹಲ್ಲೆ ಮಾಡುತ್ತಿದ್ದರೂ ಕೂಡ ಘಟನೆ ನಡೆದ ಸ್ಥಳದಲ್ಲೇ ಡಿಎಂ ಇದ್ದರೂ ಸಹ ಗಲಾಟೆಯನ್ನು ತಡೆಯುವ ಪ್ರಯತ್ನ ಮಾಡಿಲ್ಲ, ಹಾಗಾಗಿ ಈ ಘಟನೆಯು ಪೂರ್ವ ನಿಯೋಜಿತ ಎಂಬ ಆರೋಪ ಕೇಳಿ ಡಿಎಂ ವಿರುದ್ಧ ಕೇಳಿ ಬಂದಿದೆ

ವಿಜಯಪಥ ಸಮಗ್ರ ಸುದ್ದಿ

ಕನಕಪುರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ತವರು ಕನಕಪುರ ಕ್ಷೇತ್ರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕನಕಪುರ ಘಟಕದಲ್ಲಿ ಘಟಕ ವ್ಯವಸ್ಥಾಪಕ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರನೊಬ್ಬನಿಗೆ 5ಮಂದಿಯಿಂದ ಘಟಕದಲ್ಲೇ ಹಲ್ಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕನಕಪುರ ಘಟಕದ ಘಟಕ ವ್ಯವಸ್ಥಾಪಕರಾದ ಸಚಿನ್ ಎಂಬುವರು ಮೂಲತ ಕನಕಪುರದವರಾಗಿದ್ದು ನನಗೆ ಸಿಎಂ ಆಶೀರ್ವಾದವಿದೆ ಎಂದು ಘಟಕದಲ್ಲಿ ಯಾವುದೇ ನೌಕರರು ಅವರು ಮಾಡುತ್ತಿರುವ ಅನ್ಯಾಯಗಳ ವಿರುದ್ಧ ಪ್ರಶ್ನೆ ಮಾಡುವ ಆಗಿಲ್ಲ. ಒಂದುವೇಳೆ ಪ್ರಶ್ನೆ ಮಾಡಿದರೆ ಅವರ ಮೇಲೆ ಈ ರೀತಿ ಹಲ್ಲೆ ಮಾಡಿಸುವುದು ಅವರ ಪ್ರವೃತಿಯಾಗಿದೆ ಎಂದು ನೌಕರರು ಆರೋಪಿಸಿದ್ದಾರೆ.

ಶುಕ್ರವಾರ ಬೆಳಗ್ಗೆ ಚಾಲಕ ಶಿವಕುಮಾರ್ ಎಂಬುವರು ಘಟಕದಲ್ಲಿ ನಡೆಯುತ್ತಿರುವ ಅನ್ಯಾಯ ಹಾಗೂ ಲಂಚಾವತಾರದ ಬಗ್ಗೆ ಪ್ರಶ್ನೆ ಮಾಡಿ ಡ್ಯೂಟಿಗೆ ಹೋಗಿದ್ದಾರೆ. ಈ ಪ್ರಶ್ನೆ ಮಾಡಿದ್ದಕ್ಕೆ ಕೋಪಗೊಂಡ ಘಟಕ ವ್ಯವಸ್ಥಾಪಕ ಸಚಿನ್‌ ಸಾಯಂಕಾಲ ಕರ್ತವ್ಯ ಮುಗಿಸಿ ಶಿವಕುಮಾರ್ ಘಟಕಕ್ಕೆ ಬರುವವರೆಗೂ ಕಾದು ಕುಳಿತು ಬಂದ ವೇಳೆ  ಐದು ಜನರನ್ನು ಘಟಕಕ್ಕೆ ಕರೆಸಿಕೊಂಡು ಚಾಲಕನಿಗೆ ಮನಸೋ ಇಚ್ಚೆ ಹೊಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಈ ಹಲ್ಲೆ ಮಾಡಿದವರು ಇದೇ ಘಟಕದ ನೌಕರರಾದ ಮುನಿ, ಬಸವರಾಜು, ಕುಮಾರ್, ಶಿವಮೂರ್ತಿ ಹಾಗೂ ದೇವರಾಜ್ ಎಂದು ಗುರುತಿಸಲಾಗಿದೆ. ಈ ಐವರು ಆರೋಪಿಗಳು ಚಾಲಕನ ಮೇಲೆ ಹಲ್ಲೆ ಮಾಡುತ್ತಿದ್ದರೂ ಕೂಡ ಘಟನೆ ನಡೆದ ಸ್ಥಳದಲ್ಲೇ ಡಿಎಂ ಇದ್ದರೂ ಸಹ ಗಲಾಟೆಯನ್ನು ತಡೆಯುವ ಪ್ರಯತ್ನ ಮಾಡಿಲ್ಲ, ಹಾಗಾಗಿ ಈ ಘಟನೆಯು ಪೂರ್ವ ನಿಯೋಜಿತವಾಗಿದ್ದು ಈ ಘಟನೆಗೆ ಕಾರಣರಾಗಿರುವಂತಹ ಘಟಕ ವ್ಯವಸ್ಥಾಪಕರು ಹಾಗೂ ಉಳಿದ ಐದು ಜನರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.

ಘಟಕದಲ್ಲಿ ನಡೆದಿರುವ ಹಲ್ಲೆ ಮತ್ತೆ ಎಲ್ಲಿಯೂ ಆಗಬಾರದು ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಆ ನಿಟ್ಟಿನಲ್ಲಿ ನಮ್ಮ ಸಂಸ್ಥೆಯ ಅಧಿಕಾರಿಗಳು ಕ್ರಮ ತೆಗೆದುಕೊಂಡು ತಪ್ಪು ಮಾಡಿದವರಿಗೆ ಶಿಕ್ಷೆ ನೀಡುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ ತಿಳಿಸಿದ್ದಾರೆ.

Deva
the authorDeva

Leave a Reply

error: Content is protected !!
Latest news
BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ... ಮೃತ ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆ ಸೇರಿದೆ ಬರೋಬರಿ 79.75 ಕೋಟಿ ರೂ.ಗೂ ಹೆಚ್ಚು ಹಣ ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ