NEWSನಮ್ಮರಾಜ್ಯಶಿಕ್ಷಣ-

ಶಾಲೆ ಆರಂಭಿಸುವ ಕುರಿತು ಶೀಘ್ರ ನಿರ್ಧಾರ: ಸಚಿವ ಸುರೇಶ್‌ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳ ಜತೆ ಶೀಘ್ರದಲ್ಲಿ ಚರ್ಚೆ ನಡೆಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿವಿಧ ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜೊತೆ ಶಾಲಾ ಮಂಡಳಿಗಳು, ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೋಮವಾರ ಚರ್ಚಿಸಿದ ಅವರು, ‘ಕೋವಿಡ್ ನಿಯಮಗಳನ್ನು ಪಾಲಿಸಿ ಎಸ್ಸೆಸ್ಸೆಲ್ಸಿ ಮತ್ತು12ನೇ ತರಗತಿ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಜತೆ ಶೀಘ್ರದಲ್ಲೇ ವಿವಿಧ ಇಲಾಖೆಗಳ ಸಭೆ ನಡೆಸಿ, ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯ. ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.

ಶಾಲಾಡಳಿತ ಮಂಡಳಿಗಳು ಶಿಕ್ಷಣ ಕಾಯ್ದೆಯಡಿ ತಮ್ಮ ಶಾಲೆಗಳಲ್ಲಿ ಪೋಷಕರ ಪ್ರತಿನಿಧಿಗಳನ್ನೊಳಗೊಂಡ ಶಾಲಾ ಸಲಹಾ ಸಮಿತಿಗಳನ್ನು ರಚಿಸಿಕೊಂಡು ಸೌಹಾರ್ದದ ವಾತಾವರಣದಲ್ಲಿ ಚರ್ಚಿಸಿ, ಪರಸ್ಪರ ಹೊಂದಾಣಿಕೆ ಸೂತ್ರದೊಂದಿಗೆ ಬಂದಲ್ಲಿ ಸರ್ಕಾರ ಒಂದು ನಿರ್ಧಾರಕ್ಕೆ ಬರಲು ಸುಲಭವಾಗುತ್ತದೆ ಎಂದೂ ಸಚಿವರು ಹೇಳಿದರು.

ಕೋವಿಡ್ ಕಾರಣ ಖಾಸಗಿ ಶಾಲೆಗಳು ಶುಲ್ಕ ಹೆಚ್ಚಳ ಮಾಡದಿರುವ, ಸಾಧ್ಯವಾದಷ್ಟು ಶುಲ್ಕ ಇಳಿಸುವಂಥ ಮತ್ತು ಶುಲ್ಕ ಪಾವತಿಸಲು ಕಂತು ನೀಡಲು ಮುಂದಾಗಬೇಕು. ಶಾಲಾ ಶುಲ್ಕ ನಿಗದಿ ವಿಚಾರದಲ್ಲಿ ಪೋಷಕರೊಂದಿಗೆ ಚರ್ಚಿಸಿ ಶಾಲಾ ಸಂಘಟನೆಗಳು ಶೀರ್ಘ ನಿರ್ಧಾರಕ್ಕೆ ಬಂದರೆ, ಸರ್ಕಾರ ಈ ಬಗ್ಗೆ ತೀರ್ಮಾನಿಸಲು ಅನುಕೂಲವಾಗಲಿದೆ’ ಎಂದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್