NEWSನಮ್ಮರಾಜ್ಯರಾಜಕೀಯ

113 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪರಿಷತ್‌ನಲ್ಲಿ ಕೆಟ್ಟ ಘಟನೆ ನಡೆದಿದೆ: ಬಸವರಾಜ ಹೊರಟ್ಟಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 113 ವರ್ಷಗಳ ಇತಿಹಾಸದಲ್ಲಿ ದೇಶಕ್ಕೆ ಮಾದರಿಯಾದ ಪರಿಷತ್ ನಲ್ಲಿ ಇದೇ ಮೊದಲ ಬಾರಿಗೆ ಕೆಟ್ಟ ಘಟನೆ ನಡೆದಿದೆ ಎಂದು ಜೆಡಿಎಸ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಪರಿಷತ್ ಗೆ ಅವಮರ್ಯಾದೆ. ಮಾನ ಮರ್ಯಾದೆ ಇಲ್ಲದವರು ಈ ರೀತಿ ಮಾಡಿದ್ದಾರೆ. ಇಲ್ಲಿ ಮೊದಲ ತಪ್ಪು ಕಾಂಗ್ರೆಸ್ ನವರದ್ದು, ಸಭಾಪತಿ ಅವಿಶ್ವಾಸ ನಿರ್ಣಯದ ಮೇಲೆ ಬಿಜೆಪಿಗೆ ನಾವು ಬೆಂಬಲ ನೀಡಿದ್ದರಿಂದ ಸಭಾಪತಿ ಕಲಾಪದಿಂದ ದೂರ ಉಳಿಯಬೇಕಾಗಿತ್ತು ಎಂದರು.

ಇದೀಗ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿದ್ದರಿಂದ ಈಗ ಯಾರು ಕುಳಿತರೂ ಅದಕ್ಕೆ ಬೆಲೆ ಇಲ್ಲ. ಇಂದಿನ ಘಟನೆಗೆ ಎಲ್ಲಾ ಸದಸ್ಯರು ಕಾರಣ ಎಂದು ಹೇಳಿದರು.

ಇನ್ನು ಬಹುಮತ ಇಲ್ಲದಿದ್ದರೂ ಅಧಿಕಾರದಲ್ಲಿ ಉಳಿದುಕೊಳ್ಳಲು ಸಭಾಪತಿ ಪ್ರಯತ್ನಿಸಿದ್ದರಿಂದ ಪರಿಷತ್ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಸಭಾಪತಿ ವಿರುದ್ಧ ವಿಶ್ವಾಸವಿಲ್ಲ, ಆದ್ದರಿಂದ ತಾವು ನಾಳೆಯ ಪರಿಷತ್ ಕಲಾಪದ ಅಧ್ಯಕ್ಷತೆ ವಹಿಸಬಾರದು ಎಂದು ನಿನ್ನೆ ಬಿಜೆಪಿ ಸದಸ್ಯರು ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ಪತ್ರ ಬರೆದಿದ್ದರು. ಅದನ್ನು ಮನ್ನಿಸಿ ಅವರು ಇಂದಿನ ಸಭೆಗೆ ಬರಬಾರದಿತ್ತು. ಮಾತ್ರವಲ್ಲ ಉಪ ಸಭಾಪತಿಗೆ ಪತ್ರ ಬರೆದು ಸಭೆಯ ಅಧ್ಯಕ್ಷತೆ ವಹಿಸುವಂತೆ ಕೋರಿದ್ದೆವು ಎಂದು ಹೇಳಿದರು.

ತೇಜಸ್ವಿನಿ ಗೌಡ ಮಾತನಾಡಿ, ನಿಯಮಗಳ ಪ್ರಕಾರ ಉಪ ಸಭಾಪತಿ ಪೀಠದಲ್ಲಿ ಕುಳಿತುಕೊಳ್ಳಬೇಕಾಗಿತ್ತು. ಅದರಂತೆ ಅವರು ಕುಳಿತು, ಕಲಾಪ ಆರಂಭಿಸಿದರು. ಆದರೆ ಕಾಂಗ್ರೆಸ್ ಸದಸ್ಯರು ಗೂಂಡಾ ವರ್ತನೆ ಮಾಡಿದ್ದಾರೆ. ಭಾವನಾತ್ಮಕವಾಗಿ ನಮಗೆ ತುಂಬಾ ನೋವಾಗಿದೆ. ಯಾವ ಸಂಸ್ಕೃತಿಯನ್ನು ನಾವು ಪ್ರತಿನಿಧಿಸುತ್ತಿದ್ದೇವೆ ಎಂದು ಪ್ರಶ್ನಿಸಿದರು.

ಮಾರ್ಷಲ್ ಗಳ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಉಪ ಸಭಾಪತಿಗೆ ಮಾರ್ಷಲ್ ಗಳು ರಕ್ಷಣೆ ಕೊಟ್ಟಿಲ್ಲ. ಪೀಠದ ರಕ್ಷಣೆ ಮಾರ್ಷಲ್ ಗೆ ಸೇರಿಲ್ಲವೇ ? ಇದರ ಬಗ್ಗೆ ತನಿಖೆಯಾಗಬೇಕು. ಪ್ಯಾನೆಲ್ ನಲ್ಲಿ ಹೆಸರು ಇಲ್ಲದವರು ಪೀಠದಲ್ಲಿ ಕುಳಿತಾಗ ಅವರನ್ನು ಯಾಕಾಗಿ ಎಳೆದುಹಾಕಿಲ್ಲ. ಉಪ ಸಭಾಪತಿಗೆ ದೈಹಿಕವಾಗಿ ಹಲ್ಲೆ ನಡೆಸಿದಾಗಲೂ ಮಾರ್ಷಲ್ ಗಳು ಮೌನವಾಗಿದ್ದರು. ಇದು ವ್ಯವಸ್ಥಿತವಾಗಿ ನಡೆದ ಘಟನೆ ಎಂದು ಆರೋಪಿಸಿದರು.

ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯದ ಸೂಚನೆ ಪತ್ರ ನೀಡಿ 14 ದಿನಗಳ ಗಡುವು ಮುಗಿದಿದ್ದರಿಂದ ಇಂದು ಉಪ ಸಭಾಪತಿ ಕುಳಿತುಕೊಳ್ಳಬೇಕಾಗಿತ್ತು. ಅದರಂತೆ ಅವರು ಪೀಠದಲ್ಲಿ ಕುಳಿತುಕೊಂಡಿದ್ದಾರೆ ಎಂದು ಸಮರ್ಥಿಸಿಕೊಂಡರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ