NEWSನಮ್ಮರಾಜ್ಯರಾಜಕೀಯ

ಮೇಲ್ಮನೆ ಗಲಾಟೆ ಪ್ರಕರಣ: ಕಾರ್ಯದರ್ಶಿಗೆ  ಶೋಕಾಸ್ ನೋಟಿಸ್ ಜಾರಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು:
    ಮೂರು ದಿನಗಳ ಹಿಂದೆ ನಡೆದ ವಿಧಾನ ಪರಿಷತ್ ಕಲಾಪದಲ್ಲಿ  ಆದ ಗಲಾಟೆ ಪ್ರಕರಣದ ಕುರಿತು ವಿಧಾನ ಪರಿಷತ್ ಕಾರ್ಯದರ್ಶಿಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಶೋಕಾಸ್ ನೋಟಿಸ್ ನೀಡಿದ್ದಾರೆ.

ಡಿ.15ರಂದು ವಿಧಾನಪರಿಷತ್ ಕಲಾಪದ ಲೈವ್ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ನೀವು ಕೂಡ ಉಪ-ಸಭಾಪತಿಗಳು ಬಂದು ಪೀಠದಲ್ಲಿ ಕುಳಿತಾಗ ಅನುವು ಮಾಡಿಕೊಟ್ಟಿರಬಾರದೇಕೆ? ನಿಮಗೆ ಎಲ್ಲಾ ಗಮನಕ್ಕೆ ಬಂದಿದ್ದರೂ ಸುಮ್ಮನಿದ್ದದ್ದು ಏಕೆ? ಈ ಪತ್ರದ ಮೂಲಕ ನೀವು ಮುಂದಿನ 48 ಗಂಟೆಯೊಳಗೆ ಉತ್ತರ ಕೊಡಬೇಕೆಂದು ನೋಟಿಸ್ ಕೊಟ್ಟಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಗಲಾಟೆಯಾಗಿದ್ದು ಏಕೆ? ಸಭಾಪತಿಗಳ ಪೀಠದಲ್ಲಿ ಉಪ ಸಭಾಪತಿಯನ್ನು ಕೂರಲು ಹೇಗೆ ಬಿಟ್ಟಿರಿ? ಸಭಾಪತಿಗಳು ಬಂದು ಪೀಠ ಅಲಂಕರಿಸುವ ಮುನ್ನ ಸದನದ ಸಂಪೂರ್ಣ ಜವಾಬ್ದಾರಿ ನಿಮ್ಮದಾಗಿರುತ್ತದೆ. ಸದನದಲ್ಲಿ ಕೋರಂ ಆಗುವವರೆಗೂ ಸಭಾಪತಿಗಳು ಬರುವುದಿಲ್ಲ. ಇದು ನಿಮಗೆ ಗೊತ್ತಿಲ್ಲವೇ? ನಿಮಗೆ ಸಭಾಪತಿಗಳ ಪೀಠದಲ್ಲಿ ಬೆಲ್ ಆಗುವಾಗ ಯಾರು ಕುಳಿತು ಕೊಂಡಿರಬಾರದು ಎಂಬುದು ಗಮನಕ್ಕೆ ಬರಲಿಲ್ಲವೇ? ಎಂದು ಶೋಕಾಸ್ ನೋಟೀಸ್​ನಲ್ಲಿ ಮಾಹಿತಿ ಕೇಳಲಾಗಿದೆ.

ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದ ಬಿಜೆಪಿ ವಿಧಾನ ಪರಿಷತ್ ಸದಸ್ಯರು ಡಿ. 15ರ ಕಲಾಪವನ್ನು ನಡೆಸಲು ಉಪ ಸಭಾಪತಿ ಧರ್ಮೇಗೌಡರನ್ನು ಸಭಾಪತಿ ಪೀಠದಲ್ಲಿ ಕೂರಿಸಿದ್ದರು. ಸಭಾಪತಿಯ ಅನುಮತಿ ಇಲ್ಲದೆ ಉಪ ಸಭಾಪತಿ ಆ ಪೀಠದಲ್ಲಿ ಕೂರುವಂತಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಧರ್ಮೇಗೌಡರನ್ನು ಪೀಠದಿಂದ ಎಳೆದು, ಗ್ಲಾಸ್​ ಅನ್ನು ಪುಡಿಪುಡಿ ಮಾಡಿದ್ದರು. ಸಭಾಪತಿಯನ್ನು ಸದನದೊಳಗೆ ಬಾರದಂತೆ ಬಿಜೆಪಿ ಸದಸ್ಯರು ಬಾಗಿಲು ಹಾಕಿದ್ದರು. ಕಲಾಪದಲ್ಲೇ ಎರಡೂ ಪಕ್ಷದ ಸದಸ್ಯರು ಮೈಕೈ ಮಿಲಾಯಿಸಿ ಹೊಡೆದಾಡಿದ್ದರು. ಬಳಿಕ, ಈ ಪ್ರಕರಣದ ಕುರಿತು ಮಧ್ಯ ಪ್ರವೇಶಿಸುವಂತೆ ಸಿಎಂ ಯಡಿಯೂರಪ್ಪನವರ ತಂಡ ರಾಜ್ಯಪಾಲರಿಗೆ ಮನವಿ ಮಾಡಿತ್ತು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್