NEWSನಮ್ಮರಾಜ್ಯವಿಜ್ಞಾನ

ಸಾರಿಗೆ ನೌಕರರ ವಿರುದ್ಧ ಸರ್ಕಾರದ ಕೆಂಗಣ್ಣು: 200ಕ್ಕೂ ಹೆಚ್ಚು ಸಿಬ್ಬಂದಿಗೆ ಅಮಾನತು ಶಿಕ್ಷೆ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ವಾರ ನಾಲ್ಕು ದಿನಗಳು ರಾಜ್ಯ ರಸ್ತೆ ಸಾರಿಗೆ ನಾಲ್ಕೂ ನಿಗಮಗಳ ನೌಕರರು  ಮುಷ್ಕರ ನಡೆಸಿದ ಆರೋಪದ ಮೇಲೆ ಕೆಲ ನೌಕರರನ್ನು ಈಗ ಅಮಾನತು ಮಾಡಲಾಗಿದ್ದು, ಇನ್ನು ಹಲವರನ್ನು ಅಮಾನತು ಮಾಡಲು ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಈಗಾಗಲೇ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಸೇರಿದ 200 ಕ್ಕೂ ಹೆಚ್ಚು ನೌಕರರನ್ನು ಅಮಾನತು ಮಾಡಲಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಮತ್ತು ಸಾರಿಗೆ ಸಚಿವರ ವಿರುದ್ಧ ಸೆಟೆದು ನಿಂತಿದ್ದ ನೌಕರರು ಇದರಿಂದ ಮತ್ತೆ ಪ್ರತಿಭಟನೆ ಮಾಡಲು ಮುಂದಾಗುವ ಸೂಚನೆ ಇದೆ. ಈಗ ಅಮಾನತು ಮಾಡಿರುವ ನೌಕರರ ವಿರುದ್ಧ ಮಾಡಿರುವ ಆರೋಪವನ್ನು ವಾಪಸ್‌ ಪಡೆದು ಆ ಎಲ್ಲಾ ನೌಕರರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಬೇಕು. ಇಲ್ಲದಿದ್ದರೆ ಮತ್ತೆ ಮುಷ್ಕರ ಮಾಡುವುದು ನಿಶ್ಚಿತ ಎಂದು ನೌಕರರ ಮುಖಂಡರು ಹೇಳಿದ್ದಾರೆ.

ಮುಷ್ಕರದಲ್ಲಿ ಭಾಗವಹಿಸಿದ್ದಕ್ಕೆ ದಂಡನೆ ರೂಪದಲ್ಲಿ ಈ ನೌಕರರಿಗೆ ಅಮಾನತು ಆದೇಶ ನೀಡಿದ್ದು, ನೌಕರರ ವಲಯದಲ್ಲಿ ಸರಕಾರದ ಬಗ್ಗೆ ಮತ್ತೆ ಅಸಮಾಧಾನ ಸ್ಫೋಟಕ್ಕೆ ಕಾರಣವಾಗುತ್ತಿದೆ. ನಮ್ಮ ಹಕ್ಕುಗಳನ್ನು ಕೇಳಲು ನಮಗೆ ಬೇರೆ ದಾರಿ ಕಾಣದ ಹಿನ್ನೆಲೆಯಲ್ಲಿ ಮುಷ್ಕರ ಮಾಡುವುದು ಅನಿವಾರ್ಯವಾಗಿತ್ತು. ಅದನ್ನೇ ತಪ್ಪು ಎಂದು ಭಾವಿಸಿ ಅಮಾನತು ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ಇದನ್ನು ಕೈ ಬಿಡದಿದ್ದರೆ ನಾವು ಮತ್ತೆ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.

ಸಿಎಂ ಮತ್ತು ಸಚಿವರು ತಾಸುಗಟ್ಟಲೇ ಸಂಧಾನ ಮಾಡಿದ ಬಳಿಕ ಸರ್ಕಾರ ಮತ್ತು ನೌಕರರ ಸಂಘಟನೆಗಳ ಪ್ರತಿನಿಧಿಗಳ ನಡುವೆ  ಲಿಖಿತ ರೂಪದಲ್ಲಿ ಸಂಧಾನವಾದ ಹಿನ್ನೆಲೆಯಲ್ಲಿ ಮುಷ್ಕರವನ್ನು ವಾಪಸ್‌ ಪಡೆಯಲಾಗಿತ್ತು. ಈ ವೇಳೆ ಮುಷ್ಕರದಲ್ಲಿ ತೊಡಗಿದ್ದ ನೌಕರರ ವಿರುದ್ಧ ಯಾವುದೇ ಶಿಸ್ತು ಕ್ರಮ ಕೈಗೊಳ್ಳಬಾರದು ಮತ್ತು ಮುಷ್ಕರದ ಅವಧಿಯನ್ನು ರಜೆ ಎಂದು ಪರಿಸಗಣಿಸಬೇಕು ಎಂದು ಕಾರ್ಮಿಕ ಮುಖಂಡರು ಸರ್ಕಾರಕ್ಕೆ ಸ್ಪಷ್ಟವಾಗಿ ತಿಳಿಸಿದ್ದರು.

ಆದರೆ ಕಾರ್ಮಿಕರ ಈ ನಿಲುವಿಗೆ ತದ್ವಿರುದ್ಧವಾಗಿ ಸರ್ಕಾರ ಮತ್ತು ನಾಲ್ಕು ನಿಗಮಗಳ ಅಧಿಕಾರಿಗಳು ನಡೆದುಕೊಳ್ಳುತ್ತಿದ್ದು, ನೌಕರರನ್ನು ಅಮಾನತು ಮಾಡಿರುವುದು ಸರ್ಕಾರ ಮತ್ತು ಸಾರಿಗೆ ಸಿಬ್ಬಂದಿಯ ನಡುವಿನ ವಾತಾವರಣ ಇನ್ನಷ್ಟು ಬಿಗಡಾಯಿಸಲಿದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್