CRIMENEWS

​ಮೆಟ್ರೋ ಪಿಲ್ಲರ್‌ಗೆ ಬೆಳಕಿನ ವ್ಯವಸ್ಥೆ ಕಾಮಗಾರಿ ವೇಳೆ ವಿದ್ಯುತ್ ತಂತಿ ತಗುಲಿ ಗುತ್ತಿಗೆ ಕಾರ್ಮಿಕ ಮೃತ

ದುರಂತಕ್ಕೆ ನಿಖರವಾದ ಕಾರಣ ಏನೆಂಬುವುದು ಇನ್ನು ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದ್ದು ಪೂರ್ಣಗೊಂಡ ಬಳಿಕವಷ್ಟೇ ತಿಳಿದು ಬರಲಿದೆ.

ವಿಜಯಪಥ ಸಮಗ್ರ ಸುದ್ದಿ

​ಬೆಂಗಳೂರು: ನಮ್ಮ ​ಮೆಟ್ರೋ ಪಿಲ್ಲರ್‌ಗೆ ಬೆಳಕಿನ ವ್ಯವಸ್ಥೆ ಕಾಮಗಾರಿ ನಡೆಯುತ್ತಿದ್ದ ವೇಳೆ ಗುತ್ತಿಗೆ ಕಾರ್ಮಿಕನಿಗೆ ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಎಂ.ಎಸ್.ಎಂ.ಆರ್. ಎಲೆಕ್ಟ್ರಿಕ್ ಸಂಸ್ಥೆಯ ಗುತ್ತಿಗೆ ಕಾರ್ಮಿಕರಾದ ಗುರಪ್ಪ (70) ಎಂಬುವರು ಮೃತಪಟ್ಟಿದ್ದಾರೆ.

ಘಟನೆಯ ವಿವರ: ಶುಕ್ರವಾರ ಮಧ್ಯಾಹ್ನ ಸುಮಾರು 3:52ರ ವೇಳೆಗೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಸಮೀಪ ನಮ್ಮ ಮೆಟ್ರೋ ಪಿಲ್ಲರ್‌ಗಳಿಗೆ ಬೆಳಕಿನ ವ್ಯವಸ್ಥೆ ಕಲ್ಪಿಸಲು ಭೂಮಿಯಲ್ಲಿ ‘ಅರ್ಥ್ ಪಿಟ್’ (Earth Pit) ಕಾಮಗಾರಿ ನಡೆಸಲಾಗುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಕರೆಂಟ್ ಶಾಕ್ ತಗುಲಿ ಗುರಪ್ಪ ತೀವ್ರ ಗಾಯಗೊಂಡಿದ್ದರು.

ತಕ್ಷಣವೇ ಅವರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ದುರಂತಕ್ಕೆ ನಿಖರವಾದ ಕಾರಣ ಏನೆಂಬುವುದು ಇನ್ನು ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದ್ದು ಪೂರ್ಣಗೊಂಡ ಬಳಿಕವಷ್ಟೇ ತಿಳಿದು ಬರಬೇಕಿದೆ.

ಇನ್ನು ದುರ್ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಬಿಎಂಆರ್‌ಸಿಎಲ್ (BMRCL) ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಆದರೆ, ಸದ್ಯಕ್ಕೆ ಯಾವುದೇ ಅಧಿಕೃತ ಪರಿಹಾರವನ್ನು ಘೋಷಿಸಿಲ್ಲ.

Deva
the authorDeva

Leave a Reply

error: Content is protected !!
Latest news
ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: 72,186 ಹುದ್ದೆಗಳ ನೇರ ನೇಮಕಾತಿ- 6 ತಿಂಗಳ ಡೆಡ್‌ಲೈನ್ ಇಟ್ಟ ರಾಜ್ಯ ಸರ್ಕಾರ ಬಿಡದಿ ಟೌನ್‌ಶಿಪ್ ವಿವಾದ: ಡಿಕೆಶಿ-ಎಚ್‌ಡಿಕೆ ನಡುವೆ ಮುಂದುವರಿದ ಸಮರ ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 588ಕ್ಕೆ ಏರಿಕೆ, 126 ವರ್ಷಗಳಲ್ಲೇ ಅತ್ಯಂತ ಭೀಕರ ಸಾವು ನೋವು ​ಮೆಟ್ರೋ ಪಿಲ್ಲರ್‌ಗೆ ಬೆಳಕಿನ ವ್ಯವಸ್ಥೆ ಕಾಮಗಾರಿ ವೇಳೆ ವಿದ್ಯುತ್ ತಂತಿ ತಗುಲಿ ಗುತ್ತಿಗೆ ಕಾರ್ಮಿಕ ಮೃತ ಬೀಜಿಂಗ್ ಗಗನಚುಂಬಿ ಕಟ್ಟಡಕ್ಕೆ ಅಪ್ಪಳಿಸಿದ ಲಘು ವಿಮಾನ: ತುಂಡುಗಳಾಗಿ ಬಿದ್ದ ವಿಮಾನ- ಭೀಕರ ದುರಂತದ ವಿಡಿಯೋ ವೈರಲ್ ಪ್ರಾಮಾಣಿಕತೆಗೆ ಅಂಬಾಸೆಡರ್‌ ಈ 75 ವರ್ಷದ ಪತ್ರಿಕಾ ವಿತರಕ ಸುಬ್ರಮಣಿ: ರಾಜಾಜಿನಗರ ಶಾಸಕ ಸುರೇಶ್‌ ಕುಮಾರ್‌ ಶ್ಲಾಘನೆ KSRTC ಬಸ್‌ ಲಾರಿಗೆ ಡಿಕ್ಕಿ: ಸಂಸ್ಥೆಯ ಚಾಲಕ ಸಾವು, ಕಂಡಕ್ಟರ್‌ ಕಾಲು ಮುರಿತ, 10 ಮಂದಿ ಪ್ರಯಾಣಿಕರಿಗೆ ಗಾಯ: 18 ಗಂಟೆ... ಮತ್ತೊಮ್ಮೆ ಸಾಂಸ್ಕೃತಿಕ ನಿನಾದ: 'ಪರಮ್ ವಿಹಾರ' ವೇದಿಕೆಯಲ್ಲಿ ಸುಗಮ ಸಂಗೀತ-ನೃತ್ಯ ಸಂಗಮ ಗೃಹಲಕ್ಷ್ಮಿ ಯೋಜನೆಯಲ್ಲಿ  ಯಾವುದೇ ಗೋಲ್‌ಮಾಲ್ ಆಗಿಲ್ಲ:  ಡೇಟಾ ಸಹಿತ ಮಹಿಳಾ ಇಲಾಖೆ  ಸ್ಪಷ್ಟನೆ  ವಾರ್ತಾ ಇಲಾಖೆ ನೂತನ ಆಯುಕ್ತರಾಗಿ ಡಿಐಜಿ ಅನುಚೇತ್ ಅಧಿಕಾರ ಸ್ವೀಕಾರ