NEWSನಮ್ಮಜಿಲ್ಲೆರಾಜಕೀಯ

ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆ ನಿಜಕ್ಕೂ ಅತ್ಯಂತ ಕರಾಳಕಾರಿ: ಮೋಹನ್ ದಾಸರಿ

ವಿಜಯಪಥ ಸಮಗ್ರ ಸುದ್ದಿ
  • ವಿಜಯಪಥ ಸಮಗ್ರ ಸುದ್ದಿ
    ಬೆಂಗಳೂರು: ರಾಜಕೀಯದಲ್ಲಿ ಹೊಸ ಬದಲಾವಣೆ ತರಬೇಕು ಎಂದು ಪ್ರವೇಶ ಮಾಡಿರುವ ನಮಗೆ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಆತ್ಮಹತ್ಯೆ ಸುದ್ದಿ ನಿಜಕ್ಕೂ ಆಘಾತಕಾರಿ ಎಂದು ಆಮ್ ಆದ್ಮಿ ಪಕ್ಷ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಸಂತಾಪ ಸೂಚಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಇತ್ತೀಚೆಗೆ ನಡೆದ ಕೋಲಾಹಲದ ಕಾರಣಕ್ಕೆ ಧರ್ಮೇಗೌಡರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ನಿಜವೇ ಆಗಿದ್ದರೆ ನಿಜಕ್ಕೂ ಇದು ಅತ್ಯಂತ ಕರಾಳ ಹಾಗೂ ಇಡೀ ರಾಜ್ಯದ ಎಲ್ಲಾ ರಾಜಕಾರಣಿಗಳು ತಲೆ ತಗ್ಗಿಸುವಂತಹ ವಿಚಾರ. ಇಂತಹ ಕೆಟ್ಟ ಘಟನೆಗೆ ಯಾರು ಹೊಣೆ? ಇದು ರಾಜಕಾರಣ ಮಾತನಾಡುವ ಹೊತ್ತಲ್ಲ, ಒಂದು ಜೀವದ ಪ್ರಶ್ನೆ ಎಂದಿದ್ದಾರೆ.

ರಾಜಕಾರಣದಲ್ಲೂ ಅತ್ಯಂತ ಸೂಕ್ಷ್ಮ ಮನಸ್ಸಿನ ವ್ಯಕ್ತಿಗಳಿದ್ದಾರೆ ಎನ್ನುವುದಕ್ಕೆ ಇದೇ ನಿದರ್ಶನ. ಇಂತಹ ಘಟನೆಗಳಿಂದ ಹೊಸಬರು, ಯುವ ಜನಾಂಗದಲ್ಲಿ ರಾಜಕೀಯಕ್ಕೆ ಬರಬೇಕೆ ಬೇಡವೇ ಎನ್ನುವ ಜಿಜ್ಞಾಸೆ ಮೂಡುವುದಂತು ನಿಜ. ಈ ಹೊತ್ತಿನಲ್ಲಿ ಎಲ್ಲಾ ಪಕ್ಷದ ರಾಜಕಾರಣಿಗಳ ಜವಾಬ್ದಾರಿ ಹೆಚ್ಚಿದೆ. ಇಂತಹ ಘಟನೆ ಮರುಕಳಿಸದಂತಹ ವಾತಾವರಣ ನಿರ್ಮಿಸುವುದು ನಮ್ಮಗಳ ಮುಂದಿರುವ ಸವಾಲು ಎಂದು ಪತ್ರಿಕೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇಂತಹ ಸಂಕಷ್ಟದ ಸಮಯದಲ್ಲಿ ಧರ್ಮೇಗೌಡರ ಕುಟುಂಬದ ಜತೆ ಆಮ್ ಆದ್ಮಿ ಪಕ್ಷ ಇರುತ್ತದೆ ಎಂದು ದಾಸರಿ ಹೇಳಿದ್ದಾರೆ.

Leave a Reply

error: Content is protected !!
LATEST
ಬಿಬಿಎಂಪಿ ಮೈದಾನದ ಗೇಟ್ ಬಿದ್ದು 11 ವರ್ಷದ ಬಾಲಕ ಮೃತ KSRTC ಚಾ.ನಗರ ವಿ.ಕಾರ್ಯಾಗಾರದಿಂದ ಅಕ್ರಮವಾಗಿ ಖಾಸಗಿಯವರಿಗೆ ರವಾನೆಯಾದ ಇಂಜಿನ್‌ ಟ್ರಾಲಿ, ಸ್ಟ್ಯಾಂಡ್‌ ಫ್ರಿಡ್ಜ್‌ನಲ್ಲಿದ್ದ ಮಹಾಲಕ್ಷ್ಮೀ ದೇಹದ 32 ಪೀಸ್‌ಗಳು ಹೇಳುತ್ತಿವೆ ಭಯಾನಕ ಸತ್ಯ ಬಡವರು-ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ವಿತರಣೆ: ಡಾ.ಬಸ್ತಿ ರಂಗಪ್ಪ KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!!