NEWSದೇಶ-ವಿದೇಶಸಿನಿಪಥ

‘ಮದಗಜ’ ತೆಲುಗು ವರ್ಷನ್​ನ ಟೀಸರ್​ ರಿಲೀಸ್​

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಿನಿಸುದ್ದಿ
ಬೆಂಗಳೂರು: ಭರಾಟೆ ನಂತರ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯಿಸುತ್ತಿರುವ ಸಿನಿಮಾ ಮದಗಜ,  ಟೈಟಲ್ ಮೂಲಕ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಈಗ ಇದೇ ಸಿನಿಮಾದ ತೆಲುಗು ವರ್ಷನ್​ನ ಟೀಸರ್​ ರಿಲೀಸ್​ ಆಗಿದೆ.

ಕನ್ನಡದ ಕೆಜಿಎಫ್​ ಸಿನಿಮಾ ಪರಭಾಷೆಗಳಲ್ಲಿ ತೆರೆಕಂಡು ಯಶಸ್ಸು ಪಡೆದ ನಂತರ ಕನ್ನಡದ ಹಲವಾರು ಸಿನಿಮಾಗಳು ತೆಲುಗು ಹಾಗೂ ತಮಿಳಿನಲ್ಲಿ ರಿಲೀಸ್​ ಆಗಲು ಸಜ್ಜಾಗುತ್ತಿದೆ. ಧ್ರುವ ಸರ್ಜಾ ಅಭಿನಯದ ಪೊಗರು ಸಹ ತೆಲುಗು ಹಾಗೂ ತಮಿಳಿನಲ್ಲಿ ತೆರೆ ಕಾಣಲು ಸಿದ್ಧವಾಗಿದೆ.

ಇಂತಹ ಸಾಲಿಗೆ ಕನ್ನಡದ ಮತ್ತಷ್ಟು ಸಿನಿಮಾಗಳು ಈಗ ಸೇರಿಕೊಂಡಿವೆ. ಅಯೋಗ್ಯ ಸಿನಿಮಾ ಖ್ಯಾತಿಯ ಮಹೇಶ್​ ನಿರ್ದೇಶನದ ಮದಗಜ ಸಿನಿಮಾದ ಕನ್ನಡದ ಟೀಸರ್ ಈಗಾಗಲೇ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈಗ ಇದೇ ಸಿನಿಮಾದ ತೆಲುಗು ವರ್ಷನ್​ನ ಟೀಸರ್​ ರಿಲೀಸ್​ ಆಗಿದೆ.

‘ಉಗ್ರಂ’ ಸಿನಿಮಾದ ಮೂಲಕ, ನಟ ಶ್ರೀಮುರಳಿ ಅವರ ಸಿನಿ ಜೀವನಕ್ಕೆ ತಿರುವು ಸಿಕ್ಕಿದ್ದು, ಶ್ರೀಮುರಳಿ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ​ ಫಸ್ಟ್​ ಲುಕ್​ ಟೀಸರ್​ ಅನ್ನು ಲಾಂಚ್​ ಮಾಡಲಾಗಿತ್ತು. ಆ ಚಿತ್ರವನ್ನು ನಿರ್ದೇಶಿಸಿದ್ದ ಪ್ರಶಾಂತ್ ನೀಲ್​, ‘ಮದಗಜ’ ಚಿತ್ರದ ಲುಕ್​ ರಿವೀಲ್​ ಮಾಡಿದ್ದರು. ವಿಶೇಷ ಎಂದರೆ ಇದುವರೆಗೂ ಕಾಣಿಸಿಕೊಂಡಿರದ ಹೊಸ ಲುಕ್‌ನಲ್ಲಿ ಮುರಳಿ ಇಲ್ಲಿ ಮಿಂಚಿದ್ದಾರೆ.

ಧೂಳೆಬ್ಬಿಸುವ ಖಡಕ್ ಡೈಲಾಗ್​ನೊಂದಿಗೆ ಮುರಳಿ ಅಭಿಮಾನಿಗಳೆದುರು ಮತ್ತೆ ಬಂದಿದ್ದಾರೆ. ಡಿಸೆಂಬರ್​ 17ರಂದು ರಿಲೀಸ್​ ಆದ ಮದಗಜ ಚಿತ್ರದ 1.42 ಸೆಕಂಡ್ ಇರುವ ಟೀಸರ್​, ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಯೂ ಟ್ಯೂಬ್​ನಲ್ಲಿ ಲಕ್ಷಗಟ್ಟಲೆ ವೀಕ್ಷಣೆ ಪಡೆದುಕೊಂಡಿತು. ಈಗ ಟೀಸರ್​ಗೆ 3 ಕೋಟಿಗೂ ಅಧಿಕ ವೀಕ್ಷಣೆ ಸಿಕ್ಕಿದೆ.

ಇನ್ನು ಹೊಸ ವರ್ಷಕ್ಕೆಂದು ಮದಗಜ ಚಿತ್ರತಂಡ ತೆಲುಗು ಪ್ರೇಕ್ಷಕರಿಗೆ ತೆಲುಗು ಟೀಸರ್ ಅನ್ನು ಉಡುಗೊರೆಯಾಗಿ ನೀಡಿದೆ. ಈ ತೆಲುಗು ಟೀಸರ್​ಗೆ ಶ್ರೀಮುರಳಿ ಅವರೇ ಕಂಠದಾನ ಮಾಡಿದ್ದಾರೆ. ಖಕಡ್​ ವಾಯ್ಸ್​ನಲ್ಲಿ ಹೇಳಿರುವ ಪಂಚಿಗ್ ಡೈಲಾಗ್ಸ್​ಗೆ ಟಾಲಿವುಡ್​ ಪ್ರೇಕ್ಷಕರೂ ಫಿದಾ ಆಗುತ್ತಿದ್ದಾರೆ.

ಮದಗಜ ಚಿತ್ರವನ್ನು ವಾರಣಾಸಿ, ಮೈಸೂರು, ಬೆಂಗಳೂರು ಭಾಗಗಳಲ್ಲಿ ಚಿತ್ರೀಕರಿಸಲಾಗಿದೆ. ರಾಬರ್ಟ್​ ನಿರ್ಮಾಪಕ ಉಮಾಪತಿ ಅವರು ತಮ್ಮ ಬ್ಯಾನರ್​ ಉಮಾಪತಿ ಫಿಲಂಸ್​ ಅಡಿ ಮದಗಜ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.​ ಮದಗಜ ಚಿತ್ರದ ಮೊದಲ ಕಂತು ವಾರಾಣಸಿಯಲ್ಲಿ ಮುಗಿಸಿರುವ ಚಿತ್ರತಂಡ, ಮೈಸೂರಿನಲ್ಲಿ ಎರಡನೇ ಹಂತ ಮುಗಿಸಿ, ಈಗ ಮೂರನೇ ಹಂತದ ಚಿತ್ರೀಕರಣ ಮಾಡುತ್ತಿದೆ. ಶ್ರೀಮುರಳಿಗೆ ಜೊತೆಯಾಗಿ ಅಶಿಕಾ ರಂಗನಾಥ್ ಅಭಿನಯಿಸುತ್ತಿಯಾದ್ದರೆ. ರವಿ ಬಸ್ರೂರ್ ಸಂಗೀತ ನೀಡುತ್ತಿದ್ದು ನವೀನ್ ಕುಮಾರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್